AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JioPhone Next: ಗಣೇಶ ಚತುರ್ಥಿಗೆ ಇದ್ದ ಜಿಯೋಫೋನ್​ ನೆಕ್ಸ್ಟ್ ಬಿಡುಗಡೆ ದೀಪಾವಳಿಗೆ ಮುಂದಕ್ಕೆ

ಜಿಯೋಫೋನ್ ನೆಕ್ಸ್ಟ್ ಕೈಗೆಟುಕುವ ಸ್ಮಾರ್ಟ್​ಫೋನ್​ ಬಿಡುಗಡೆ ದೀಪಾವಳಿಗೆ ಮುಂದೂಡಲಾಗಿದೆ ಎಂದು ಗೂಗಲ್- ಜಿಯೋದಿಂದ ತಿಳಿಸಲಾಗಿದೆ.

JioPhone Next: ಗಣೇಶ ಚತುರ್ಥಿಗೆ ಇದ್ದ ಜಿಯೋಫೋನ್​ ನೆಕ್ಸ್ಟ್ ಬಿಡುಗಡೆ ದೀಪಾವಳಿಗೆ ಮುಂದಕ್ಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 10, 2021 | 1:29 PM

Share

ಜಿಯೋ ಮತ್ತು ಗೂಗಲ್​ನಿಂದ ಸೆಪ್ಟೆಂಬರ್​ 10ನೇ ತಾರೀಕಿನಿಂದ ಹೇಳಿರುವ ಪ್ರಕಾರ, ಜಿಯೋಫೋನ್​ ನೆಕ್ಸ್ಟ್ ಅನ್ನು ದೀಪಾವಳಿ ಹಬ್ಬದ ಸಂದರ್ಭಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿದೆ. ಕೈಗೆಟುಕುವ ಬೆಲೆಯ ಸ್ಮಾರ್ಟ್​ಫೋನ್ ಆರಂಭದಲ್ಲಿ ಗಣೇಶ ಚತುರ್ಥಿಗೆ ಬಿಡುಗಡೆ ಆಗಬೇಕಿತ್ತು. ಜಿಯೋ ಮತ್ತು ಗೂಗಲ್ ಹೇಳಿರುವಂತೆ, ಕಂಪೆನಿಯು ಸ್ಮಾರ್ಟ್​ಫೋನ್ ಬಿಡುಗಡೆ ವಿಚಾರವಾಗಿ “ಸಾಕಷ್ಟು ಪ್ರಗತಿ” ಆಗಿದೆ. “ಎರಡೂ ಕಂಪೆನಿಗಳು ಜಿಯೋಫೋನ್​ ನೆಕ್ಸ್ಟ್​ ಅನ್ನು ಇನ್ನಷ್ಟು ಸುಧಾರಣೆ ತರುವುದಕ್ಕೆ ಸೀಮಿತ ಸಂಖ್ಯೆಯ ಬಳಕೆದಾರರೊಂದಿಗೆ ಪರೀಕ್ಷೆ ಆರಂಭಿಸಿವೆ ಮತ್ತು ದೀಪಾವಳಿ ಹಬ್ಬದ ಹೊತ್ತಿಗೆ ವ್ಯಾಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳಲು ಕೆಲಸ ಮಾಡಲಾಗುತ್ತಿದೆ. ಈಗಿನ ಹೆಚ್ಚುವರಿ ಸಮಯವು ಸದ್ಯಕ್ಕೆ ಈ ವಲಯದಲ್ಲಿ ಕಾಣಿಸಿಕೊಂಡಿರುವ ಜಾಗತಿಕ ಸೆಮಿಕಂಡಕ್ಟರ್ ಕೊರತೆಯಿಂದ ಹೊರಬರುವುದಕ್ಕೆ ಸಹಾಯ ಮಾಡುತ್ತದೆ,” ಎಂದು ಜಿಯೋ ಮತ್ತು ಗೂಗಲ್ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಜಿಯೋಫೋನ್ ನೆಕ್ಸ್ಟ್ ಆಂಡ್ರಾಯಿಡ್​ ಆಪರೇಟಿಂಗ್ ಸಿಸ್ಟಮ್​ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಅದರಲ್ಲಿ ಗೂಗಲ್ ಅಸಿಸ್ಟೆಂಟ್, ಆಟೋಮೆಟಿಕ್ ಜೋರಾದ-ಓದು, ಆನ್​ಸ್ಕ್ರೀನ್ ಟೆಕ್ಸ್ಟ್​​ಗೆ ಭಾಷಾನುವಾದ, ಸ್ಮಾರ್ಟ್​ ಕ್ಯಾಮೆರಾ ಜತೆಗೆ ಇಂಡಿಯಾ ಸೆಂಟ್ರಿಕ್ ಫಿಲ್ಟರ್ಸ್​ಗಳನ್ನು ಒಳಗೊಂಡಿದೆ.

ಬಳಕೆದಾರರು ಈಚೆಗಿನ ಕ್ರಿಕೆಟ್​ ಸ್ಕೋರ್​ಗಳು ಮತ್ತು ಹವಾಮಾನ ಅಪ್​ಡೇಟ್ಸ್​ ಪರಿಶೀಲಿಸಬಹುದು. ಗೂಗಲ್ ಅಸಿಸ್ಟೆಂಟ್​​ಗೆ ಜಿಯೋ ಸಾವನ್​ನಲ್ಲಿ ಸಂಗೀತ ಪ್ಲೇ ಮಾಡುವಂತೆ ಅಥವಾ ಮೈ ಜಿಯೋದಲ್ಲಿ ಬ್ಯಾಲೆನ್ಸ್ ಪರಿಶೀಲಿಸುವಂತೆ ಕೇಳಬಹುದು. ಅಂದಹಾಗೆ 4G ಸ್ಮಾರ್ಟ್​ಫೋನ್ ದರ ಇನ್ನೂ ಬಹಿರಂಗ ಮಾಡಿಲ್ಲ.

ಇದನ್ನೂ ಓದಿ: ರೂ. 4,000 ದೊಳಗೆ ಸ್ಮಾರ್ಟ್ ಪೋನ್ ಬೇಕೇ? ಸ್ವಲ್ಪ ದಿನ ಕಾಯಿರಿ, ಮುಕೇಶ್ ಅಂಬಾನಿ ಅದನ್ನು ನೀಡಲಿದ್ದಾರೆ!

(JioPhone Next Affordable Smart Phone Release Postponed To Deepavali Here Is The Details)

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್