JioPhone Next: ಗಣೇಶ ಚತುರ್ಥಿಗೆ ಇದ್ದ ಜಿಯೋಫೋನ್​ ನೆಕ್ಸ್ಟ್ ಬಿಡುಗಡೆ ದೀಪಾವಳಿಗೆ ಮುಂದಕ್ಕೆ

ಜಿಯೋಫೋನ್ ನೆಕ್ಸ್ಟ್ ಕೈಗೆಟುಕುವ ಸ್ಮಾರ್ಟ್​ಫೋನ್​ ಬಿಡುಗಡೆ ದೀಪಾವಳಿಗೆ ಮುಂದೂಡಲಾಗಿದೆ ಎಂದು ಗೂಗಲ್- ಜಿಯೋದಿಂದ ತಿಳಿಸಲಾಗಿದೆ.

JioPhone Next: ಗಣೇಶ ಚತುರ್ಥಿಗೆ ಇದ್ದ ಜಿಯೋಫೋನ್​ ನೆಕ್ಸ್ಟ್ ಬಿಡುಗಡೆ ದೀಪಾವಳಿಗೆ ಮುಂದಕ್ಕೆ
ಸಾಂದರ್ಭಿಕ ಚಿತ್ರ
Follow us
| Updated By: Srinivas Mata

Updated on: Sep 10, 2021 | 1:29 PM

ಜಿಯೋ ಮತ್ತು ಗೂಗಲ್​ನಿಂದ ಸೆಪ್ಟೆಂಬರ್​ 10ನೇ ತಾರೀಕಿನಿಂದ ಹೇಳಿರುವ ಪ್ರಕಾರ, ಜಿಯೋಫೋನ್​ ನೆಕ್ಸ್ಟ್ ಅನ್ನು ದೀಪಾವಳಿ ಹಬ್ಬದ ಸಂದರ್ಭಕ್ಕೆ ಬಿಡುಗಡೆ ಮಾಡುವುದಾಗಿ ಹೇಳಿದೆ. ಕೈಗೆಟುಕುವ ಬೆಲೆಯ ಸ್ಮಾರ್ಟ್​ಫೋನ್ ಆರಂಭದಲ್ಲಿ ಗಣೇಶ ಚತುರ್ಥಿಗೆ ಬಿಡುಗಡೆ ಆಗಬೇಕಿತ್ತು. ಜಿಯೋ ಮತ್ತು ಗೂಗಲ್ ಹೇಳಿರುವಂತೆ, ಕಂಪೆನಿಯು ಸ್ಮಾರ್ಟ್​ಫೋನ್ ಬಿಡುಗಡೆ ವಿಚಾರವಾಗಿ “ಸಾಕಷ್ಟು ಪ್ರಗತಿ” ಆಗಿದೆ. “ಎರಡೂ ಕಂಪೆನಿಗಳು ಜಿಯೋಫೋನ್​ ನೆಕ್ಸ್ಟ್​ ಅನ್ನು ಇನ್ನಷ್ಟು ಸುಧಾರಣೆ ತರುವುದಕ್ಕೆ ಸೀಮಿತ ಸಂಖ್ಯೆಯ ಬಳಕೆದಾರರೊಂದಿಗೆ ಪರೀಕ್ಷೆ ಆರಂಭಿಸಿವೆ ಮತ್ತು ದೀಪಾವಳಿ ಹಬ್ಬದ ಹೊತ್ತಿಗೆ ವ್ಯಾಪಕವಾಗಿ ಲಭ್ಯವಾಗುವಂತೆ ನೋಡಿಕೊಳ್ಳಲು ಕೆಲಸ ಮಾಡಲಾಗುತ್ತಿದೆ. ಈಗಿನ ಹೆಚ್ಚುವರಿ ಸಮಯವು ಸದ್ಯಕ್ಕೆ ಈ ವಲಯದಲ್ಲಿ ಕಾಣಿಸಿಕೊಂಡಿರುವ ಜಾಗತಿಕ ಸೆಮಿಕಂಡಕ್ಟರ್ ಕೊರತೆಯಿಂದ ಹೊರಬರುವುದಕ್ಕೆ ಸಹಾಯ ಮಾಡುತ್ತದೆ,” ಎಂದು ಜಿಯೋ ಮತ್ತು ಗೂಗಲ್ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಜಿಯೋಫೋನ್ ನೆಕ್ಸ್ಟ್ ಆಂಡ್ರಾಯಿಡ್​ ಆಪರೇಟಿಂಗ್ ಸಿಸ್ಟಮ್​ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಅದರಲ್ಲಿ ಗೂಗಲ್ ಅಸಿಸ್ಟೆಂಟ್, ಆಟೋಮೆಟಿಕ್ ಜೋರಾದ-ಓದು, ಆನ್​ಸ್ಕ್ರೀನ್ ಟೆಕ್ಸ್ಟ್​​ಗೆ ಭಾಷಾನುವಾದ, ಸ್ಮಾರ್ಟ್​ ಕ್ಯಾಮೆರಾ ಜತೆಗೆ ಇಂಡಿಯಾ ಸೆಂಟ್ರಿಕ್ ಫಿಲ್ಟರ್ಸ್​ಗಳನ್ನು ಒಳಗೊಂಡಿದೆ.

ಬಳಕೆದಾರರು ಈಚೆಗಿನ ಕ್ರಿಕೆಟ್​ ಸ್ಕೋರ್​ಗಳು ಮತ್ತು ಹವಾಮಾನ ಅಪ್​ಡೇಟ್ಸ್​ ಪರಿಶೀಲಿಸಬಹುದು. ಗೂಗಲ್ ಅಸಿಸ್ಟೆಂಟ್​​ಗೆ ಜಿಯೋ ಸಾವನ್​ನಲ್ಲಿ ಸಂಗೀತ ಪ್ಲೇ ಮಾಡುವಂತೆ ಅಥವಾ ಮೈ ಜಿಯೋದಲ್ಲಿ ಬ್ಯಾಲೆನ್ಸ್ ಪರಿಶೀಲಿಸುವಂತೆ ಕೇಳಬಹುದು. ಅಂದಹಾಗೆ 4G ಸ್ಮಾರ್ಟ್​ಫೋನ್ ದರ ಇನ್ನೂ ಬಹಿರಂಗ ಮಾಡಿಲ್ಲ.

ಇದನ್ನೂ ಓದಿ: ರೂ. 4,000 ದೊಳಗೆ ಸ್ಮಾರ್ಟ್ ಪೋನ್ ಬೇಕೇ? ಸ್ವಲ್ಪ ದಿನ ಕಾಯಿರಿ, ಮುಕೇಶ್ ಅಂಬಾನಿ ಅದನ್ನು ನೀಡಲಿದ್ದಾರೆ!

(JioPhone Next Affordable Smart Phone Release Postponed To Deepavali Here Is The Details)

ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?