AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Death News: ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ನಿಧನ

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

Death News: ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ನಿಧನ
ಪತಿ ಜಾನ್ ಶಾ ಜತೆ ಕಿರಣ್ ಮಜುಂದಾರ್ ಶಾ (ಸಂಗ್ರಹ ಚಿತ್ರ)Image Credit source: Kiran Mazumdar Shaw Facebook Page
TV9 Web
| Edited By: |

Updated on:Oct 25, 2022 | 10:05 AM

Share

ಬೆಂಗಳೂರು: ಬಯೋಕಾನ್ (Biocon) ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ (Kiran Mazumdar Shaw) ಪತಿ ಜಾನ್ ಶಾ (John Shaw) ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅನಾರೋಗ್ಯಕ್ಕೀಡಾಗಿದ್ದ ಜಾನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಾನ್ ಶಾ ಅವರ ಸಾವಿಗೆ ನಿಖರವಾದ ಕಾರಣ ಏನೆಂಬುದು ತಿಳಿದುಬಂದಿಲ್ಲ. ಕೆಲವು ಮೂಲಗಳ ಪ್ರಕಾರ, ಅವರು ಕ್ಯಾನ್ಸರ್​ಪೀಡಿತರಾಗಿದ್ದರು ಎನ್ನಲಾಗಿದೆ. ಆದರೆ, ಕುಟುಂಬದ ಮೂಲಗಳು ಈ ಕುರಿತು ಹೇಳಿಕೆ ನೀಡಿಲ್ಲ. ಅವರು ಬೆಂಗಳೂರು ಮೂಲದ ಬಯೋಕಾನ್ ಲಿಮಿಟೆಡ್​ನ ಮಾಜಿ ಉಪಾಧ್ಯಕ್ಷರಾಗಿದ್ದರು. ಮಧುರಾ ಕೋಟ್ಸ್ ಲಿಮಿಟೆಡ್​ನ ಅಧ್ಯಕ್ಷ ಹಾಗೂ ಕೋಟ್ಸ್ ವಿಯೆಲ್ಲಾ ಗ್ರೂಪ್​ನ ಎಂಡಿ ಆಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ
Image
Dhanteras 2022: ಭಾರತ-ಪಾಕ್ ಪಂದ್ಯದ ವೇಳೆ ಬಿಕೋ ಎಂದ ಆಭರಣ ಮಾರುಕಟ್ಟೆ; ನಂತರ ಚೇತರಿಸಿದ ಮಾರಾಟ
Image
Share Market Predictions: ಷೇರುಪೇಟೆ ಮೇಲೆ ಪರಿಣಾಮ ಬೀರಲಿವೆ ರಜೆ, ತ್ರೈಮಾಸಿಕ ಫಲಿತಾಂಶ, ಮಾಸಾಂತ್ಯ…
Image
ICICI Bank Q2 Result: ತ್ರೈಮಾಸಿಕ ಫಲಿತಾಂಶ; ಐಸಿಐಸಿಐ ಬ್ಯಾಂಕ್ ನಿವ್ವಳ ಲಾಭದಲ್ಲಿ ಭಾರೀ ಜಿಗಿತ
Image
Dhanteras 2022: ದೀಪಾವಳಿಯ ಎರಡು ದಿನ 40 ಸಾವಿರ ಕೋಟಿ ರೂ. ವಹಿವಾಟು ನಿರೀಕ್ಷೆ; ಸಿಎಐಟಿ

ಇದನ್ನೂ ಓದಿ: Never Give Up: 2013ರಲ್ಲಿ ಕೆಲಸದಿಂದ ವಜಾಗೊಂಡಿದ್ದ ಎಂಜಿನಿಯರ್ ಆದಾಯವೀಗ 3.5 ಕೋಟಿ ರೂ!

ಅವರು ಬ್ರಿಟನ್​ನ ಗ್ಲಾಸ್ಗೋದಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಗ್ಲಾಸ್ಗೋ ವಿಶ್ವವಿದ್ಯಾಲಯದಿಂದ ಇತಿಹಾಸ, ರಾಜಕೀಯಶಾಸ್ತ್ರ ಮತ್ತು ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದರು.

ಈ ವರ್ಷ ಜೂನ್​ನಲ್ಲಿ ಕಿರಣ್ ಮಜುಂದಾರ್ ಶಾ ಅವರ ತಾಯಿ ಯಾಮಿನಿ ಮಜುಂದಾರ್ ಕ್ಯಾನ್ಸರ್​ನಿಂದಾಗಿ ಮೃತಪಟ್ಟಿದ್ದರು. ಇದಾದ ಕೆಲವೇ ತಿಂಗಳಲ್ಲಿ ಇದೀಗ ಅವರು ಪತಿಯನ್ನು ಕಳೆದುಕೊಂಡಿದ್ದಾರೆ.

1998ರಲ್ಲಿ ಮದುವೆಯಾಗಿದ್ದರು:

1949ರಲ್ಲಿ ಜನಿಸಿದ್ದ ಜಾನ್ ಶಾ ಅವರನ್ನು 1998ರಲ್ಲಿ ಕಿರಣ್ ಮಜುಂದಾರ್ ಶಾ ಮದುವೆಯಾಗಿದ್ದರು. ಪತಿಯ ನಿಧನಕ್ಕೆ ಕಿರಣ್ ಮಜುಂದಾರ್ ಶಾ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

‘ನನ್ನ ಪತಿ, ಮಾರ್ಗದರ್ಶಕ ಹಾಗೂ ಆತ್ಮ ಸಂಗಾತಿಯನ್ನು ಕಳೆದುಕೊಂಡು ವಿಪರೀತ ದುಃಖಿತಳಾಗಿದ್ದೇನೆ. ನನ್ನ ಉದ್ದೇಶವನ್ನು ಈಡೇರಿಸುವ ಮೊದಲು ಸದಾ ಜಾನ್​ನಿಂದ ಅಧ್ಯಾತ್ಮಿಕ ಮಾರ್ಗದರ್ಶನ ಪಡೆಯುತ್ತಿದ್ದೆ. ನಿಮ್ಮ ಆತ್ಮಕ್ಕೆ ಶಾಂತಿ ದೊರೆಯಲಿ. ನನ್ನ ಜೀವನವನ್ನು ಬಹಳ ವಿಶೇಷವಾಗಿಸಿದ್ದಕ್ಕೆ ಧನ್ಯವಾದಗಳು. ನಾನು ನಿಮ್ಮನ್ನು ಗಾಢವಾಗಿ ಸದಾ ನೆನಪಿಸಿಕೊಳ್ಳಲಿದ್ದೇನೆ’ ಎಂದು ಕಿರಣ್ ಮಜುಂದಾರ್ ಶಾ ಟ್ವೀಟ್ ಮಾಡಿದ್ದಾರೆ.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಪತಿ ಜಾನ್ ಶಾ ಅವರ ನಿಧನಕ್ಕೆ ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್ ಮತ್ತು ಕಾರ್ಯದರ್ಶಿ ಎಸ್​.ಎನ್. ಶಶಿಧರ್ ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Mon, 24 October 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು