AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯನಾಗದಿದ್ದರೆ ಅಮೆರಿಕದಲ್ಲಿ ಸಿಇಒ ಆಗೋಕ್ಕಾಗಲ್ಲ: ಬದಲಾದ ವಾಸ್ತವ ಬಿಚ್ಚಿಟ್ಟಿದ್ದಾರೆ ಅಮೆರಿಕದ ರಾಯಭಾರಿ

'Can’t Become CEO In US If You Are Not Indian' - ನೀನು ಭಾರತೀಯನಾಗಿದ್ದರೆ ಅಮೆರಿಕದಲ್ಲಿ ಸಿಇಒ ಆಗೋಕ್ಕಾಗಲ್ಲ ಎಂದು ತಮಾಷೆ ಮಾಡುತ್ತಿದ್ದ ಕಾಲವೊಂದಿತ್ತು. ಈಗ ಭಾರತೀಯ ಮೂಲದವನಾಗಿರದಿದ್ದರೆ ಅಮೆರಿಕದಲ್ಲಿ ಸಿಇಒ ಆಗಲು ಆಗಲ್ಲ ಎಂದು ಜೋಕ್ ಬದಲಾಗಿದೆ. ಹೀಗೆಂದು ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿರುವ ಎರಿಕ್ ಗಾರ್ಕೆಟ್ಟಿ ಹೇಳಿದ್ದಾರೆ. ಕ್ಯಾಲಿಫೋರ್ನಿಯಾದ ಸ್ಟ್ಯಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ನಡೆದ ಭಾರತೀಯ ಸಮುದಾಯದವರ ಎಐ ಶೃಂಗಸಭೆಯಲ್ಲಿ ಮಾತನಾಡುತ್ತಾ ಅವರು ಭಾರತೀಯರ ಸಾಧನೆಗಳನ್ನು ಪ್ರಶಂಸಿಸಿದ್ದಾರೆ.

ಭಾರತೀಯನಾಗದಿದ್ದರೆ ಅಮೆರಿಕದಲ್ಲಿ ಸಿಇಒ ಆಗೋಕ್ಕಾಗಲ್ಲ: ಬದಲಾದ ವಾಸ್ತವ ಬಿಚ್ಚಿಟ್ಟಿದ್ದಾರೆ ಅಮೆರಿಕದ ರಾಯಭಾರಿ
ಎರಿಕ್ ಗಾರ್ಕೆಟ್ಟಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 28, 2024 | 1:15 PM

Share

ಕ್ಯಾಲಿಫೋರ್ನಿಯಾ, ಏಪ್ರಿಲ್ 28: ಅಮೆರಿಕದಲ್ಲಿ ಸಿಇಒ ಆಗಬೇಕಾದರೆ ಭಾರತೀಯ ಮೂಲದ ವ್ಯಕ್ತಿ ಆಗಿರಬೇಕು ಎನ್ನುವಂತಹ ಸ್ಥಿತಿ ಇದೆ ಎಂದು ಎರಿಕ್ ಗಾರ್ಕೆಟ್ಟಿ (Eric Garcetti) ಹೇಳಿದ್ದಾರೆ. ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿರುವ ಎರಿಕ್ ಅವರು ಇಲ್ಲಿಯ ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ನಡೆದ ಭಾರತೀಯ ಸಮುದಾಯದವರ ಎಐ ಸಮಿಟ್ 2024 (Indiaspora AI Summit 2024) ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಆದರೆ ತಮಾಷೆಯಾಗಿ ಅವರು ಈ ಮಾತುಗಳನ್ನು ಹೇಳಿದ್ದಾರಾದರೂ ಅಮೆರಿಕದ ಬಹಳಷ್ಟು ಟೆಕ್ ಕಂಪನಿಗಳ ಅತ್ಯುನ್ನತ ಹುದ್ದೆಯನ್ನು ಭಾರತೀಯರೇ ಅಲಂಕರಿಸಿರುವುದು ವಾಸ್ತವ ಸಂಗತಿ.

ಅಮೆರಿಕದ ಪ್ರಮುಖ ಕಂಪನಿಗಳನ್ನು ಪರಿಗಣಿಸಿದಾದ ಶೇ. 10ರಷ್ಟು ಕಂಪನಿಗಳಿಗೆ ಭಾರತೀಯ ಮೂಲದವರೇ ಸಿಇಒ ಆಗಿದ್ದಾರೆ. ಗೂಗಲ್​ನ ಸುಂದರ್ ಪಿಚೈ, ಮೈಕ್ರೋಸಾಫ್ಟ್​ನ ಸತ್ಯ ನಾದೆಲ್ಲಾ, ಅಡೋಬ್​ನ ಶಾಂತನು ನಾರಾಯಣನ್ ಮೊದಲಾದವರು ನಿದರ್ಶನವಾಗಿದ್ದಾರೆ. ಹೀಗಾಗಿ, ಅಮೆರಿಕ ರಾಯಭಾರಿ ಹೇಳಿದ್ದರಲ್ಲಿ ಅತಿಶಯೋಕ್ತಿಯಂತೂ ಇಲ್ಲ.

ಇದನ್ನೂ ಓದಿ: ಭಾರತದಲ್ಲಿ ಹುಲುಸಾಗಿ ಬೆಳೆಯುತ್ತಿದೆ ಆಟಿಕೆ ಉದ್ಯಮ; ಶೇ. 70ರಷ್ಟು ತಪ್ಪಿದೆ ಚೀನೀ ಬೊಂಬೆ ಆಮದು

‘ಫಾರ್ಚೂನ್ 500 ಕಂಪನಿಗಳಲ್ಲಿನ ಪ್ರತೀ 10 ಸಿಇಒಗಳಲ್ಲಿ ಒಬ್ಬರು ಅಮೆರಿಕದಲ್ಲಿ ಓದಿದ ಭಾರತೀಯ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ನೀವು ಭಾರತೀಯರಾಗಿದ್ದರೆ ಅಮೆರಿಕದಲ್ಲಿ ಸಿಇಒ ಆಗುವುದಕ್ಕೆ ಆಗೊಲ್ಲ ಎಂದು ತಮಾಷೆ ಮಾಡುತ್ತಿದ್ದ ಕಾಲವೊಂದಿತ್ತು. ಈಗ ನೀವು ಭಾರತೀಯನಾಗದೇ ಹೋದರೆ ಅಮೆರಿಕದಲ್ಲಿ ಸಿಇಒ ಆಗಲು ಸಾಧ್ಯ ಇಲ್ಲ ಎಂದು ಹೇಳಲಾಗುತ್ತದೆ. ಗೂಗಲ್ ಆಗಲಿ, ಮೈಕ್ರೋಸಾಫ್ಟ್ ಆಗಲಿ, ಅಥವಾ ಸ್ಟಾರ್​ಬಕ್ಸ್ ಆಗಲಿ ಭಾರತೀಯರು ಸಿಇಒ ಆಗಿ ಬಹಳ ದೊಡ್ಡ ಬದಲಾವಣೆ ಮಾಡಿದ್ದಾರೆ’ ಎಂದು ಎರಿಕ್ ಗಾರ್ಕೆಟ್ಟಿ ಹೇಳಿದ್ದಾರೆ.

ಬದಲಾದ ಭಾರತ: ಮೋದಿಗೆ ಕ್ರೆಡಿಟ್ ಕೊಟ್ಟ ಭಾರತೀಯ ಉದ್ಯಮಿಗಳು

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಾರತ ಮೂಲದ ಉದ್ಯಮಿಗಳು ಭಾರತದಲ್ಲಿ ಆಗಿರುವ ಬದಲಾವಣೆಗಳನ್ನು ಗುರುತಿಸಿ, ಪ್ರಧಾನಿ ನರೇಂದ್ರ ಮೋದಿಗೆ ಅದರ ಶ್ರೇಯ ನೀಡಿದ್ದಾರೆ.

ಇದನ್ನೂ ಓದಿ: ಇಟಲಿ ಪ್ರಧಾನಿಗೆ ಕರೆ ಮಾಡಿ ವಿಮೋಚನಾ ದಿನಾಚರಣೆಯ ಶುಭಾಯಶಯ ತಿಳಿಸಿದ ಮೋದಿ

‘ಜಾಗತಿಕ ಉದ್ದಿಮೆ ವಲಯದಲ್ಲಿ ಭಾರತದ ಬಗೆಗಿನ ದೃಷ್ಟಿಕೋನ ಈಗ ಬದಲಾಗಿದೆ. ಈಗ ಭಾರತವು ಇನ್ನೋವೇಶನ್​ನ ಸ್ಥಳವಾಗಿದೆ. ಮಾನವ ಸಂಪನ್ಮೂಲದ ಅಡ್ಡೆಯಾಗಿದೆ. ಪ್ರಗತಿ ಮತ್ತು ಇನೋವೇಶನ್ ಆಗುತ್ತಿರುವ ಪ್ರದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾವೀನ್ಯತೆಯಲ್ಲಿ ಭಾರತವನ್ನು ಜಾಗತಿಕ ನಕ್ಷೆಗೆ ಹಾಕಲು ಸಫಲರಾಗಿದ್ದಾರೆ. ಭಾರತದಲ್ಲಿ ಹೂಡಿಕೆ ಮಾಡಿ ಬೆಳೆಯಲು ಪ್ರೋತ್ಸಾಹಿಸುತ್ತಿದ್ದಾರೆ,’ ಎಂದು ಇನ್ಫಾರ್ಮಾಟಿಕಾ ಸಿಇಒ ಅಮಿತ್ ವಾಲಿಯಾ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ