ಬೆಂಗಳೂರು, ಫೆಬ್ರುವರಿ 13: ಭಾರತದ ಅತಿದೊಡ್ಡ ಉದ್ಯಮ ಸಮೂಹಗಳಲ್ಲಿ ಒಂದೆನಿಸಿದ ಜೆಎಸ್ಡಬ್ಲ್ಯು ಮುಂಬೈ ಮೂಲದ್ದಾದರೂ ಕರ್ನಾಟಕದಲ್ಲಿ ಹೆಚ್ಚಿನ ಬಿಸಿನೆಸ್ಗಳನ್ನು ಹೊಂದಿದೆ. ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿರುವ ಜೆಎಸ್ಡಬ್ಲ್ಯು ಗ್ರೂಪ್ ಕರ್ನಾಟಕದಲ್ಲಿ ಮುಂದಿನ ಕೆಲ ವರ್ಷಗಳಲ್ಲಿ 1.2 ಲಕ್ಷ ಕೋಟಿ ರೂಗೂ ಅಧಿಕ ಹೂಡಿಕೆ ಮಾಡಲು ನಿರ್ಧರಿಸಿದೆ. ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಸಂಸ್ಥೆಯು ಕರ್ನಾಟಕ ಸರ್ಕಾರದೊಂದಿಗೆ ಎಂಒಯುಗೆ ಸಹಿಹಾಕಿದೆ.
ವಿಜಯನಗರದಲ್ಲಿರುವ ತನ್ನ ಉಕ್ಕು ಕಾರ್ಖಾನೆಯನ್ನು ಅತ್ಯಾಧುನಿಕ ರೀತಿಯಲ್ಲಿ ಸಜ್ಜುಗೊಳಿಸಲಿದೆ. ವಿಶ್ವದಲ್ಲೇ ಅತಿದೊಡ್ಡ ಮತ್ತು ಅತಿ ಆಧುನಿಕ ಉಕ್ಕು ಕಾರ್ಖಾನೆಯಾಗಿ ಇದು ಪರಿವರ್ತನೆಯಾಗಲಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ರೋಬೋಟಿಕ್ಸ್ಗಳನ್ನು ಬಳಸಲಾಗುತ್ತದೆ. ಅತ್ಯುನ್ನತ ಮಟ್ಟದ ಎಲೆಕ್ಟ್ರಿಕಲ್ ಸ್ಟೀಲ್ ಉತ್ಪಾದನೆ ಇಲ್ಲಿ ನಡೆಯಲಿದೆ. ಈ ಸ್ಟೀಲ್ ಘಟಕ ಅಭಿವೃದ್ಧಿಗೆ ಜೆಎಸ್ಡಬ್ಲ್ಯು 43,000 ಕೋಟಿ ರೂ ಹೂಡಿಕೆ ಮಾಡಲಿದೆ.
ಇದನ್ನೂ ಓದಿ: ಇನ್ವೆಸ್ಟ್ ಕರ್ನಾಟಕ: ವೋಲ್ವೋ ಕಂಪನಿಯಿಂದ 1,400 ಕೋಟಿ ರೂ ಹೂಡಿಕೆ, ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ
ಮೇಕ್ ಇನ್ ಇಂಡಿಯಾ ಜೊತೆಗೆ ಮೇಕ್ ಇನ್ ಕರ್ನಾಟಕ ಮತ್ತು ಮೇಕ್ ಫಾರ್ ದಿ ವರ್ಲ್ಡ್ ಮಂತ್ರ ಅಳವಡಿಸಿಕೊಂಡಿರುವ ಜೆಎಸ್ಡಬ್ಲ್ಯು ಗ್ರೂಪ್ ಸಂಸ್ಥೆಯ ಛೇರ್ಮನ್ ಸಜ್ಜನ್ ಜಿಂದಾಲ್ ಅವರು ಕರ್ನಾಟಕವನ್ನು ತಮ್ಮ ಕರ್ಮಭೂಮಿ ಎಂದು ಕರೆದಿದ್ದಾರೆ. ರಾಜ್ಯದಲ್ಲಿ ಇರುವ ಹೂಡಿಕೆ ಸ್ನೇಹಿ ವಾತಾವರಣ, ಉತ್ತಮ ಆಡಳಿತ ನೀತಿ, ಕೌಶಲ್ಯವಂತ ಕೆಲಸಗಾರರ ಸಮೂಹ ಇವೆಲ್ಲವನ್ನೂ ಅವರು ಪ್ರಶಂಸಿಸಿದ್ದಾರೆ.
ಇದನ್ನೂ ಓದಿ: ಎಪ್ಸಿಲಾನ್ ಗ್ರೂಪ್ನಿಂದ ಕರ್ನಾಟಕದಲ್ಲಿ 15,350 ಕೋಟಿ ರೂ ಬಂಡವಾಳ; ಇವಿ ಬ್ಯಾಟರಿ ಭಾಗಗಳ ತಯಾರಿಕೆಗೆ ಹೂಡಿಕೆ
ಈ ಮೇಲಿನ ಬಿಸಿನೆಸ್ಗಳಲ್ಲಿ ಹೂಡಿಕೆ ಮಾಡುವುದಷ್ಟೇ ಅಲ್ಲ, ಬೇರೆ ಬೇರೆ ರೀತಿಯ ಸಾಮಾಜಿಕ, ಆರೋಗ್ಯ ಮತ್ತಿತರ ಸಮಾಜಮುಖಿ ಕೈಂಕರ್ಯಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ಜೆಎಸ್ಡಬ್ಲ್ಯು ಗ್ರೂಪ್ ಸ್ಪಷ್ಟಪಡಿಸಿದೆ. ಕ್ರೀಡೆ, ಪಾರಂಪರಿಕ ಸಂರಕ್ಷಣೆ, ಸಾಮುದಾಯಕ ಕಲ್ಯಾಣ ಕ್ಷೇತ್ರದ ಯೋಜನೆಗಳು, ಶಿಕ್ಷಣ, ಆರೋಗ್ಯ, ಕೌಶಲ್ಯಾಭಿವೃದ್ಧಿ, ಪರಿಸರ ಇತ್ಯಾದಿ ಕ್ಷೇತ್ರಗಳ ಜೆಎಸ್ಡಬ್ಲ್ಯು ವಿವಿಧ ಯೋಜನೆಗಳನ್ನು ನಡೆಸುತ್ತಿದೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ