AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 4ರ ಷೇರುಪೇಟೆ ಕುಸಿತ ದೊಡ್ಡ ಹಗರಣವಾ? ಮಾರುಕಟ್ಟೆ ಬಿದ್ದೆದ್ದಿದ್ದು ನಷ್ಟ ಯಾರಿಗೆ? ಕಾಂಗ್ರೆಸ್ ಆರೋಪಕ್ಕೆ ಸರ್ಕಾರದ ಉತ್ತರ ಏನು?

June 4th Stock Market Crash: Facts and Counter facts: ಬಿಜೆಪಿ ನಾಯಕರು ಸುಳ್ಳು ಭರವಸೆ ಕೊಟ್ಟು ಮತ್ತು ಎಕ್ಸಿಟ್ ಪೋಲ್​ಗಳನ್ನು ತಿರುಚುವ ಮೂಲಕ ಷೇರು ಮಾರುಕಟ್ಟೆ ಹಗರಣ ಸೃಷ್ಟಿಸಲಾಗಿದೆ ಎಂಬುದು ಕಾಂಗ್ರೆಸ್ ಆರೋಪ. ಅದರ ಪ್ರಕಾರ, ಇದು 30 ಲಕ್ಷ ಕೋಟಿ ರೂ ಹಗರಣವಾಗಿದ್ದು, ಇದು ತನಿಖೆ ಆಗಬೇಕು ಎಂದು ಒತ್ತಾಯಿಸಿದೆ. ಬಿಜೆಪಿ ನಾಯಕ ಪೀಯುಶ್ ಗೋಯಲ್ ಸ್ಪಷ್ಟಪಡಿಸಿದ್ದು, ಅಂದಿನ ಷೇರು ಮಾರುಕಟ್ಟೆ ಏರಿಕೆ, ಕುಸಿತ ಇದು ಕೇವಲ ವ್ಯಾಲ್ಯುಯೇಶನ್ ಸಂಬಂಧಿಸಿದ್ದು ಎಂದಿದ್ದಾರೆ.

ಜೂನ್ 4ರ ಷೇರುಪೇಟೆ ಕುಸಿತ ದೊಡ್ಡ ಹಗರಣವಾ? ಮಾರುಕಟ್ಟೆ ಬಿದ್ದೆದ್ದಿದ್ದು ನಷ್ಟ ಯಾರಿಗೆ? ಕಾಂಗ್ರೆಸ್ ಆರೋಪಕ್ಕೆ ಸರ್ಕಾರದ ಉತ್ತರ ಏನು?
ರಾಹುಲ್ ಗಾಂಧಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 09, 2024 | 12:54 PM

Share

ನವದೆಹಲಿ, ಜೂನ್ 9: ಜೂನ್ 3ರವರೆಗೆ ಉಬ್ಬಿ ನಿಂತಿದ್ದ ಷೇರು ಮಾರುಕಟ್ಟೆ, ಜೂನ್ 4ರಂದು ಪ್ರಚಂಡವಾಗಿ ಕುಸಿದಿತ್ತು. ನಂತರದ ದಿನಗಳಲ್ಲಿ ಅಷ್ಟೇ ಪ್ರಚಂಡವಾಗಿ ಮೇಲೇರಿದ್ದು ಗೊತ್ತೇ ಇದೆ. ಜೂನ್ 4ರಂದು ಹೂಡಿಕೆದಾರರಿಗೆ 30 ಲಕ್ಷ ಕೋಟಿ ರೂಗೂ ಹೆಚ್ಚು ನಷ್ಟ ಆದ ಅಂದಾಜಿದೆ. ಜೂನ್ 4ರಂದು ಷೇರು ಮಾರುಕಟ್ಟೆ (stock market) ಮೇಲೇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಕೆಲ ಬಿಜೆಪಿ ನಾಯಕರು ಹೇಳಿದ್ದರಿಂದ ಸಾಕಷ್ಟು ಹೂಡಿಕೆದಾರರು ಕೈ ಸುಟ್ಟುಕೊಂಡಿದ್ದಾರೆ. ಇದು ಬಹಳ ದೊಡ್ಡ ಷೇರು ಮಾರುಕಟ್ಟೆ ಹಗರಣ ಎಂಬುದು ಕಾಂಗ್ರೆಸ್​ನ ಆರೋಪ.

ಜೂನ್ 4ರ ಬಳಿಕ ಷೇರುಬೆಲೆ ಹೆಚ್ಚಲಿದೆ. ಅಷ್ಟರೊಳಗೆ ಹೂಡಿಕೆ ಮಾಡಿ ಎಂದು ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಮೊದಲಾದವರು ತಮ್ಮ ಚುನಾವಣಾ ಭಾಷಣಗಳಲ್ಲಿ ಹೇಳಿದ್ದು ಹೌದು. ಮೇ ಕೊನೆಯ ವಾರದಲ್ಲಿ ಅವರುಗಳ ಹೇಳಿಕೆ ಬಳಿಕ, ಅದರ ಪ್ರಭಾವದಿಂದಾಗಿಯೋ ಅಥವಾ ಕಾಕತಾಳೀಯವಾಗಿಯೋ ಸೆನ್ಸೆಕ್ಸ್, ನಿಫ್ಟಿ ಏರತೊಡಗಿತ್ತು. ಜೂನ್ 1, ಶನಿವಾರದಂದು ಎಕ್ಸಿಟ್ ಪೋಲ್​ಗಳು ಬಿಡುಗಡೆಯಾಗಿ ಬಿಜೆಪಿಗೆ ಪ್ರಚಂಡ ಬಹುಮತ ಬರಬಹುದು ಎಂದು ಅಂದಾಜಿಸಿದ್ದವು. ಅದಾದ ಬಳಿಕ ಜೂನ್ 3ರಂದು ಸೆನ್ಸೆಕ್ಸ್, ನಿಫ್ಟಿ ಸೇರಿದಂತೆ ಷೇರು ಮಾರುಕಟ್ಟೆಯ ಬಹುತೇಕ ಸೂಚ್ಯಂಕಗಳು ಸಖತ್ತಾಗಿ ಏರಿದವು.

ಇದನ್ನೂ ಓದಿ: ಷೇರು ಮಾರುಕಟ್ಟೆಯ ಬಂಪರ್ ಫಲ ಪಡೆದ ಚಂದ್ರಬಾಬು ನಾಯ್ಡು ಪತ್ನಿ; ಐದು ದಿನದಲ್ಲಿ 584 ಕೋಟಿ ರೂ ಸಂಪತ್ತು ಹೆಚ್ಚಿಸಿಕೊಂಡ ಭುವನೇಶ್ವರಿ

ಬಿಜೆಪಿ ನಾಯಕರ ಹೇಳಿಕೆ ಮತ್ತು ಎಕ್ಸಿಟ್ ಪೋಲ್ ಫಲಿತಾಂಶದ ಮೂಲಕ ಹೂಡಿಕೆದಾರರನ್ನು ಸೆಳೆಯುವ ಮಸಲತ್ತು ಮಾಡಲಾಗಿದೆ. ಆ ಮೂಲಕ ದೊಡ್ಡ ಲಾಭ ಮಾಡುವ ದೊಡ್ಡ ಚಿತಾವಣೆ ನಡೆದಿತ್ತು ಎಂದು ಕೆಲ ವಿಪಕ್ಷ ನಾಯಕರುಗಳು ಗಂಭೀರವಾಗಿ ಆರೋಪಿಸಿದ್ದಾರೆ. ಟಿಎಂಸಿ ಸಂಸದ ಸಾಕೇತ್ ಗೋಖಲೆ ಅವರು ಎಕ್ಸಿಟ್ ಪೋಲ್ ವಿಚಾರದಲ್ಲಿ ತನಿಖೆ ನಡೆಸುವಂತೆ ಸೆಬಿಗೆ ಮನವಿ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರದಿಂದ ಸ್ಪಷ್ಟನೆ: ಪಿಯೂಶ್ ಕೊಟ್ಟ ಉತ್ತರ ಇದು

ಜೂನ್ 6ರಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ವಿಪಕ್ಷಗಳ ಈ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

‘ರಾಹುಲ್ ಗಾಂಧಿ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ರೂ ನಷ್ಟದ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಇದು ಮುಖ್ಯವೇ ಅಲ್ಲ ವ್ಯಾಲ್ಯುಯೇಶನ್ ಎಂಬುದು ಅರ್ಥವಾದಂತಿಲ್ಲ. ಖರೀದಿಸುವುದು ಮತ್ತು ಮಾರುವುದು ಇಲ್ಲಿ ಹೆಚ್ಚು ಮುಖ್ಯ,’ ಎಂದು ಸುದ್ದಿಗೋಷ್ಠಿಯಲ್ಲಿ ಪೀಯುಶ್ ಹೇಳಿದ್ದಾರೆ. ಅವರ ಪ್ರಕಾರ ಈ ಬೆಳವಣಿಗೆಯಲ್ಲಿ ವಿದೇಶೀ ಹೂಡಿಕೆದಾರರು ನಷ್ಟ ಮಾಡಿಕೊಂಡಿದ್ದಾರೆ. ದೇಶೀಯ ಸಾಂಸ್ಥಿಕ ಹೂಡಿಕೆದಾರರು ಲಾಭ ಮಾಡಿದ್ದಾರೆ.

ಇದನ್ನೂ ಓದಿ: ಮೇ 31ಕ್ಕೆ ಭಾರತದ ಫಾರೆಕ್ಸ್ ರಿಸರ್ವ್ಸ್ 651.5 ಬಿಲಿಯನ್ ಡಾಲರ್; ಇದು ಸಾರ್ವಕಾಲಿಕ ದಾಖಲೆ

‘ಜೂನ್ 3ರಂದು ಎಕ್ಸಿಟ್ ಪೋಲ್ ಬಂದಾ ವಿದೇಶೀ ಹೂಡಿಕೆದಾರರು ಹೆಚ್ಚಿನ ವ್ಯಾಲ್ಯುಯೇಶನ್​ನಲ್ಲಿ 6,800 ಕೋಟಿ ರೂ ಮೌಲ್ಯದ ಷೇರುಗಳನ್ನು ಖರೀದಿಸಿದರು. ದೇಶೀಯ ಹೂಡಿಕೆದಾರರು ಹೆಚ್ಚಿನ ಮೌಲ್ಯಕ್ಕೆ ಷೇರುಗಳನ್ನು ಮಾರಿ ಲಾಭ ಮಾಡಿದರು. ಜೂನ್ 4ರಂದು ಷೇರು ಮಾರುಕಟ್ಟೆ ಕುಸಿದಾಗ ವಿದೇಶೀ ಹೂಡಿಕೆದಾರರು ಕಡಿಮೆ ಬೆಲೆಗೆ ಷೇರು ಮಾರಿದರು. ದೇಶೀಯ ಹೂಡಿಕದಾರರು ಮೋದಿ ಸರ್ಕಾರ ಮರಳಿ ಬರುವ ನಿರೀಕ್ಷೆಯಲ್ಲಿ ಷೇರು ಖರೀದಿಸಿದರು. ಇಲ್ಲಿ ಭಾರತೀಯ ಹೂಡಿಕೆದಾರರು ಲಾಭ ಮಾಡಿಕೊಂಡಿದ್ದಾರೆ,’ ಎಂದು ಪೀಯೂಶ್ ಗೋಯಲ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ