AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಶಕ್ತಿ ಉತ್ಪಾದನೆ; ಗುಜರಾತ್, ತಮಿಳುನಾಡನ್ನು ಹಿಂದಿಕ್ಕಿದ ಕರ್ನಾಟಕ ನಂ. 1; ಕೇಂದ್ರದಿಂದ ಪ್ರಶಸ್ತಿ

Karnataka's wind energy capacity: 2024-25ರಲ್ಲಿ ಕರ್ನಾಟಕದಲ್ಲಿ 1,331 ಮೆ.ವ್ಯಾ.ನಷ್ಟು ವಾಯು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಆಗಿದೆ. ಒಂದು ವರ್ಷದಲ್ಲಿ ಅತ್ಯಧಿಕ ವಾಯು ವಿದ್ಯುತ್ ಸಾಮರ್ಥ್ಯ ಏರಿಸಿದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಮೊದಲು ಬಂದಿದೆ. ತಮಿಳುನಾಡು ಮತ್ತು ಗುಜರಾತ್ ರಾಜ್ಯಗಳು 2 ಮತ್ತು 3ನೇ ಸ್ಥಾನ ಪಡೆದಿವೆ.

ವಾಯುಶಕ್ತಿ ಉತ್ಪಾದನೆ; ಗುಜರಾತ್, ತಮಿಳುನಾಡನ್ನು ಹಿಂದಿಕ್ಕಿದ ಕರ್ನಾಟಕ ನಂ. 1; ಕೇಂದ್ರದಿಂದ ಪ್ರಶಸ್ತಿ
ವಾಯುಶಕ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 16, 2025 | 1:52 PM

Share

ಬೆಂಗಳೂರು, ಜೂನ್ 16: ಕಳೆದ ಹಣಕಾಸು ವರ್ಷದಲ್ಲಿ ಅತಿಹೆಚ್ಚು ವಾಯುಶಕ್ತಿ ಸಾಮರ್ಥ್ಯ (Wind energy capacity) ಹೆಚ್ಚಿಸಿದ ಕಾರಣಕ್ಕೆ ಕೇಂದ್ರದಿಂದ ಕರ್ನಾಟಕಕ್ಕೆ ಪ್ರಶಸ್ತಿ ನೀಡಲಾಗಿದೆ. 2024-25ರ ಹಣಕಾಸು ವರ್ಷದಲ್ಲಿ ರಾಜ್ಯದಲ್ಲಿ 1,331.48 ಮೆಗಾವ್ಯಾಟ್ ವಿಂಡ್ ಪವರ್ ಕೆಪಾಸಿಟಿ ಸೇರ್ಪಡೆಯಾಗಿದೆ. ಇತರೆಲ್ಲಾ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕಳೆದ ವರ್ಷ ಅತಿಹೆಚ್ಚು ವಿಂಡ್ ಪವರ್ ತಯಾರಿಕೆ ಸಾಮರ್ಥ್ಯ ವೃದ್ಧಿಯಾಗಿದೆ. ತಮಿಳುನಾಡು, ಗುಜರಾತ್ ರಾಜ್ಯಗಳ ಪೈಪೋಟಿಯನ್ನು ಹಿಂದಿಕ್ಕಿದೆ.

2024-25ರಲ್ಲಿ ಕರ್ನಾಟಕದಲ್ಲಿ 1,331.48 ಮೆಗಾವ್ಯಾಟ್ ವಾಯುಶಕ್ತಿ ಸಾಮರ್ಥ್ಯ ಹೆಚ್ಚಿಸಿಕೊಂಡಿದೆ. ತಮಿಳುನಾಡು 1,136.37 ಮೆ.ವ್ಯಾ. ಮತ್ತು ಗುಜರಾತ್ 954.76 ಮೆ.ವ್ಯಾ. ವಿಂಡ್ ಪವರ್ ಸಾಮರ್ಥ್ಯ ಹೆಚ್ಚಳ ಆಗಿದೆ.

ಬೆಂಗಳೂರಿನಲ್ಲಿ ನಿನ್ನೆ ಭಾನುವಾರ ನಡೆದ ಜಾಗತಿಕ ವಾಯು ದಿನ ಆಚರಣೆ ವೇಳೆ ಕೇಂದ್ರ ನವೀಕರಣ ಇಂಧನ ಸಚಿವ ಪ್ರಲ್ಹಾದ್ ಜೋಷಿ (Pralhad Joshi) ಅವರು ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಇದನ್ನೂ ಓದಿ: ಸ್ಟಾರ್ಟಪ್ ಇಕೋಸಿಸ್ಟಂ: ಭಾರತದಲ್ಲಿ ಬೆಂಗಳೂರೇ ನಂಬರ್ ಒನ್; ಜಾಗತಿಕ ದಿಗ್ಗಜ ನಗರಗಳ ಸಾಲಿನಲ್ಲಿ ಸಿಲಿಕಾನ್ ಸಿಟಿ

ಕರ್ನಾಟಕದಲ್ಲಿರುವ ಸ್ಥಾಪಿತ ವಾಯುಶಕ್ತಿ ಸಾಮರ್ಥ್ಯ 7,351 ಮೆಗಾವ್ಯಾಟ್

ಕರ್ನಾಟಕದಲ್ಲಿ ಒಂದೇ ವರ್ಷದಲ್ಲಿ 1,331 ಮೆಗಾ ವ್ಯಾಟ್​​ನಷ್ಟು ವಾಯು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ವೃದ್ಧಿಯಾಗಿರುವುದು ಗಮನಾರ್ಹ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ವಾಯು ವಿದ್ಯುತ್ ಸಾಮರ್ಥ್ಯ 7,351 ಮೆಗಾವ್ಯಾಟ್​​ಗೆ ಏರಿದೆ. ಅಂದರೆ 7.35 ಗಿಗಾವ್ಯಾಟ್ ವಿಂಡ್ ಎನರ್ಜಿ ಕೆಪಾಸಿಟಿ ನಿರ್ಮಾಣ ಆಗಿದೆ.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿವಿಧ ವಿಂಡ್ ಪವರ್ ಪ್ರಾಜೆಕ್ಟ್​​ಗಳು ಶುರುವಾಗಲಿವೆ. ಅದಕ್ಕೆ ಪೂರಕವಾದ ಸಬ್​ಸ್ಟೇಷನ್ಸ್, ಕಾರಿಡಾರ್ ಹಾಗೂ ನವೀಕರಣ ವಿದ್ಯುತ್ ಮೀಸಲು ವಲಯ ಇತ್ಯಾದಿ ಇನ್​ಫ್ರಾಸ್ಟ್ರಕ್ಚರ್ ಅನ್ನೂ ಬಲಪಡಿಸಲಾಗುತ್ತಿದೆ. ಈ ವಿವಿಧ ವಾಯುಶಕ್ತಿ ಯೋಜನೆಗಳಿಂದ 17 ಗಿಗಾವ್ಯಾಟ್​​ನಷ್ಟು ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ. ಇವು ಜಾರಿಯಾದರೆ ರಾಜ್ಯದಲ್ಲಿ 25 ಗಿ.ವ್ಯಾ. ವಿಂಡ್ ಪವರ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಸೃಷ್ಟಿಯಾಗಬಹುದು.

ಇದನ್ನೂ ಓದಿ: ಭಾರತದಲ್ಲಿ ಮಿಲಿಯನೇರ್​​​ಗಳ ಸಂಖ್ಯೆ 85,000 ಕ್ಕಿಂತ ಹೆಚ್ಚು; ಜಾಗತಿಕವಾಗಿ ಮೂರೇ ದೇಶಗಳು ಭಾರತಕ್ಕಿಂತ ಮುಂದು

2030ಕ್ಕೆ 100 ಗಿಗಾ ವ್ಯಾಟ್ ವಿಂಡ್ ಎನರ್ಜಿ ಗುರಿ ಭಾರತಕ್ಕೆ

ಕೇಂದ್ರ ಸರ್ಕಾರವು 2030ರೊಳಗೆ 500 ಗಿಗಾವ್ಯಾಟ್​​ನಷ್ಟು ಮರುಬಳಕೆ ಇಂಧನ ಅಥವಾ ರಿನಿವಬಲ್ ಎನರ್ಜಿ ಸಾಧನೆಯ ಗುರಿ ನಿಗದಿ ಮಾಡಿದೆ. ಇದರಲ್ಲಿ 100 ಗಿ.ವ್ಯಾ. ವಿಂಡ್ ಎನರ್ಜಿ ಗುರಿ ಇದೆ. ಈ ವಾಯುಶಕ್ತಿಯ ಗುರಿ ಈಡೇರಿಕೆಗೆ ಕರ್ನಾಟಕದ ಕೊಡುಗೆ ಗಮನಾರ್ಹವಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
ರಾಯರ ಬಗ್ಗೆ ಆಲ್ಬಂ ಸಾಂಗ್ ಮಾಡಲು ಕಾರಣ ಏನು? ವಿವರಿಸಿದ ಅಜನೀಶ್
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
Video: ಕೋಲ್ಕತ್ತಾಗೆ ಆಗಮಿಸಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ರುಬಿಯೋ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ