Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021: ಕೈಗೆಟುಕುವ ದರದ ಫ್ಲ್ಯಾಟ್ ಖರೀದಿಗೆ 70 ಸಾವಿರದಿಂದ 90 ಸಾವಿರ ರೂ. ಉಳಿತಾಯ

ಕರ್ನಾಟಕ ಬಜೆಟ್​ 2021ರಲ್ಲಿ ಕೈಗೆಟುಕುವ ದರದ ಫ್ಲ್ಯಾಟ್​ ಖರೀದಿಗೆ ರೂ. 70 ಸಾವಿರದಿಂದ ರೂ. 90 ಸಾವಿರದ ತನಕ ಉಳಿತಾಯ ಮಾಡುವ ಅವಕಾಶ ನೀಡಲಾಗಿದೆ. ಮುದ್ರಾಂಕ ಶುಲ್ಕವನ್ನು ಶೇಕಡಾ 5ರಿಂದ ಶೇಕಡಾ 3ಕ್ಕೆ ಇಳಿಸಲಾಗಿದೆ.

Karnataka Budget 2021: ಕೈಗೆಟುಕುವ ದರದ ಫ್ಲ್ಯಾಟ್ ಖರೀದಿಗೆ 70 ಸಾವಿರದಿಂದ 90 ಸಾವಿರ ರೂ. ಉಳಿತಾಯ
ಪ್ರಾತಿನಿಧಿಕ ಚಿತ್ರ
Follow us
Srinivas Mata
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 08, 2021 | 8:20 PM

ಬೆಂಗಳೂರು: ಕೈಗೆಟುಕುವ ದರದ ಫ್ಲ್ಯಾಟ್​ಗಳ ಖರೀದಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಬಜೆಟ್ 2021ರಲ್ಲಿ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುದ್ರಾಂಕ ಶುಲ್ಕವನ್ನು ಇಳಿಕೆ ಮಾಡುವ ಪ್ರಸ್ತಾಪವನ್ನು ಇಟ್ಟಿದ್ದಾರೆ. 35 ಲಕ್ಷದಿಂದ 45 ಲಕ್ಷ ರೂಪಾಯಿ ತನಕದ ಅಪಾರ್ಟ್​ಮೆಂಟ್​ಗಳ ಮುದ್ರಾಂಕ ಶುಲ್ಕವನ್ನು ಈಗಿರುವ ಶೇಕಡಾ 5ರಿಂದ ಶೇಕಡಾ 3ಕ್ಕೆ ಇಳಿಸಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಈ ಮೂಲಕವಾಗಿ ಮುದ್ರಾಂಕ ಶುಲ್ಕದಲ್ಲಿ ಖರೀದಿದಾರರಿಗೆ 70 ಸಾವಿರ ರೂಪಾಯಿಯಿಂದ 90 ಸಾವಿರ ರೂಪಾಯಿ ತನಕ ಉಳಿತಾಯ ಆಗುತ್ತದೆ.

ಭಾರತದ ಐಟಿ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರಿನಲ್ಲಿ ಕೋವಿಡ್- 19 ಕಾರಣಕ್ಕೆ ರಿಯಲ್ ಎಸ್ಟೇಟ್ ವಲಯಕ್ಕೆ ಪೆಟ್ಟು ಬಿದ್ದಿದೆ. ಇನ್ನು ಅಪಾರ್ಟ್​ಮೆಂಟ್​ಗಳ ಮಾರಾಟ ಕುಸಿದಿದ್ದು, ಮಾರಾಟವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಬಜೆಟ್​ನಲ್ಲಿ ಪರಿಹಾರ ಒದಗಿಸಬೇಕು ಎಂದು ರಿಯಲ್ ಎಸ್ಟೇಟ್ ಕಂಪೆನಿಗಳು ಮನವಿ ಮಾಡಿಕೊಂಡಿದ್ದವು.

ಕೋವಿಡ್ 19ನಿಂದಾಗಿ ಹೌಸಿಂಗ್ ವಲಯ ನಿಧಾನಗತಿಯಲ್ಲಿದೆ. ಇನ್ನು ಮಾರಾಟ ಕೂಡ ಹಿಂಜರಿತ ಅನುಭವಿಸುತ್ತಿದ್ದು, ಮಾರದೆ ಉಳಿದು ಹೋದ ವಸತಿ ಸಮುಚ್ಚಯಗಳ ಸಂಖ್ಯೆ ಜಾಸ್ತಿ ಆಗುತ್ತಲೇ ಇದೆ. ಮುದ್ರಾಂಕ ಮತ್ತು ನೋಂದಣಿ ಮೂಲಕದ ಆದಾಯದ ನಿರೀಕ್ಷೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಕೊಳ್ಳದೆ ರೂ. 12,655 ಕೋಟಿಯಲ್ಲೇ ಉಳಿಸಿಕೊಳ್ಳಲಾಗಿದೆ. ಅಂದಹಾಗೆ ಕಳೆದ ವರ್ಷ ಎರಡು ಸಲ ಅಬಕಾರಿ ಸುಂಕವನ್ನು ಏರಿಸಿದ ಮೇಲೆ ಅದರಲ್ಲಿ ಕೂಡ ಯಾವುದೇ ಬದಲಾವಣೆ ಮಾಡದೆ ಯಡಿಯೂರಪ್ಪ ಹಾಗೇ ಉಳಿಸಿದ್ದಾರೆ.

ಅಬಕಾರಿಯಿಂದ ಬರುವ ಆದಾಯದ ಗುರಿಯನ್ನು ಕಳೆದ ವರ್ಷ ಇರಿಸಿಕೊಂಡಿದ್ದ 22,700 ಕೋಟಿ ರೂ.ನಿಂದ 2021-22ರ ಹಣಕಾಸು ವರ್ಷಕ್ಕೆ 24,580 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಇನ್ನು ಫೆಬ್ರವರಿ ಕೊನೆ ಹೊತ್ತಿಗೆ ರಾಜ್ಯಕ್ಕೆ ಅಬಕಾರಿ ಆದಾಯ 20,900 ಕೋಟಿ ರೂಪಾಯಿ ಬಂದಿದೆ. “2020- 2ರಲ್ಲಿ ಕೋವಿಡ್- 19 ಪರಿಣಾಮವಾಗಿ ಸಾರ್ವಜನಿಕರಿಗೆ ಹೇಳಲಾಗದಷ್ಟು ಸಮಸ್ಯೆ ಆಗಿದೆ. ಜನರ ಮೇಲೆ ನಾನಿನ್ನು ಹೆಚ್ಚುವರಿ ಹೊರೆ ಹೊರೆಸುವುದಿಲ್ಲ,” ಎಂದು ಪೆಟ್ರೋಲ್- ಡೀಸೆಲ್ ಮೇಲೆ ರಾಜ್ಯ ಸರ್ಕಾರದಿಂದ ಯಾವುದೇ ತೆರಿಗೆ ಹೆಚ್ಚಿಸದೆ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಪೆಟ್ರೋಲ್ ದರದಲ್ಲಿ ಯಾವ ಇಳಿಕೆಯೂ ಆಗಲಿಲ್ಲ; ಇಂದು ರಾಜ್ಯದಲ್ಲಿ ರೂ. 96ರ ಗಡಿಯಲ್ಲಿ ಪೆಟ್ರೋಲ್​ ಬೆಲೆ

ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ

ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್