AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021: ಕೈಗೆಟುಕುವ ದರದ ಫ್ಲ್ಯಾಟ್ ಖರೀದಿಗೆ 70 ಸಾವಿರದಿಂದ 90 ಸಾವಿರ ರೂ. ಉಳಿತಾಯ

ಕರ್ನಾಟಕ ಬಜೆಟ್​ 2021ರಲ್ಲಿ ಕೈಗೆಟುಕುವ ದರದ ಫ್ಲ್ಯಾಟ್​ ಖರೀದಿಗೆ ರೂ. 70 ಸಾವಿರದಿಂದ ರೂ. 90 ಸಾವಿರದ ತನಕ ಉಳಿತಾಯ ಮಾಡುವ ಅವಕಾಶ ನೀಡಲಾಗಿದೆ. ಮುದ್ರಾಂಕ ಶುಲ್ಕವನ್ನು ಶೇಕಡಾ 5ರಿಂದ ಶೇಕಡಾ 3ಕ್ಕೆ ಇಳಿಸಲಾಗಿದೆ.

Karnataka Budget 2021: ಕೈಗೆಟುಕುವ ದರದ ಫ್ಲ್ಯಾಟ್ ಖರೀದಿಗೆ 70 ಸಾವಿರದಿಂದ 90 ಸಾವಿರ ರೂ. ಉಳಿತಾಯ
ಪ್ರಾತಿನಿಧಿಕ ಚಿತ್ರ
Srinivas Mata
| Edited By: |

Updated on: Mar 08, 2021 | 8:20 PM

Share

ಬೆಂಗಳೂರು: ಕೈಗೆಟುಕುವ ದರದ ಫ್ಲ್ಯಾಟ್​ಗಳ ಖರೀದಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಬಜೆಟ್ 2021ರಲ್ಲಿ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುದ್ರಾಂಕ ಶುಲ್ಕವನ್ನು ಇಳಿಕೆ ಮಾಡುವ ಪ್ರಸ್ತಾಪವನ್ನು ಇಟ್ಟಿದ್ದಾರೆ. 35 ಲಕ್ಷದಿಂದ 45 ಲಕ್ಷ ರೂಪಾಯಿ ತನಕದ ಅಪಾರ್ಟ್​ಮೆಂಟ್​ಗಳ ಮುದ್ರಾಂಕ ಶುಲ್ಕವನ್ನು ಈಗಿರುವ ಶೇಕಡಾ 5ರಿಂದ ಶೇಕಡಾ 3ಕ್ಕೆ ಇಳಿಸಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಈ ಮೂಲಕವಾಗಿ ಮುದ್ರಾಂಕ ಶುಲ್ಕದಲ್ಲಿ ಖರೀದಿದಾರರಿಗೆ 70 ಸಾವಿರ ರೂಪಾಯಿಯಿಂದ 90 ಸಾವಿರ ರೂಪಾಯಿ ತನಕ ಉಳಿತಾಯ ಆಗುತ್ತದೆ.

ಭಾರತದ ಐಟಿ ರಾಜಧಾನಿ ಎನಿಸಿಕೊಂಡಿರುವ ಬೆಂಗಳೂರಿನಲ್ಲಿ ಕೋವಿಡ್- 19 ಕಾರಣಕ್ಕೆ ರಿಯಲ್ ಎಸ್ಟೇಟ್ ವಲಯಕ್ಕೆ ಪೆಟ್ಟು ಬಿದ್ದಿದೆ. ಇನ್ನು ಅಪಾರ್ಟ್​ಮೆಂಟ್​ಗಳ ಮಾರಾಟ ಕುಸಿದಿದ್ದು, ಮಾರಾಟವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಬಜೆಟ್​ನಲ್ಲಿ ಪರಿಹಾರ ಒದಗಿಸಬೇಕು ಎಂದು ರಿಯಲ್ ಎಸ್ಟೇಟ್ ಕಂಪೆನಿಗಳು ಮನವಿ ಮಾಡಿಕೊಂಡಿದ್ದವು.

ಕೋವಿಡ್ 19ನಿಂದಾಗಿ ಹೌಸಿಂಗ್ ವಲಯ ನಿಧಾನಗತಿಯಲ್ಲಿದೆ. ಇನ್ನು ಮಾರಾಟ ಕೂಡ ಹಿಂಜರಿತ ಅನುಭವಿಸುತ್ತಿದ್ದು, ಮಾರದೆ ಉಳಿದು ಹೋದ ವಸತಿ ಸಮುಚ್ಚಯಗಳ ಸಂಖ್ಯೆ ಜಾಸ್ತಿ ಆಗುತ್ತಲೇ ಇದೆ. ಮುದ್ರಾಂಕ ಮತ್ತು ನೋಂದಣಿ ಮೂಲಕದ ಆದಾಯದ ನಿರೀಕ್ಷೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಕೊಳ್ಳದೆ ರೂ. 12,655 ಕೋಟಿಯಲ್ಲೇ ಉಳಿಸಿಕೊಳ್ಳಲಾಗಿದೆ. ಅಂದಹಾಗೆ ಕಳೆದ ವರ್ಷ ಎರಡು ಸಲ ಅಬಕಾರಿ ಸುಂಕವನ್ನು ಏರಿಸಿದ ಮೇಲೆ ಅದರಲ್ಲಿ ಕೂಡ ಯಾವುದೇ ಬದಲಾವಣೆ ಮಾಡದೆ ಯಡಿಯೂರಪ್ಪ ಹಾಗೇ ಉಳಿಸಿದ್ದಾರೆ.

ಅಬಕಾರಿಯಿಂದ ಬರುವ ಆದಾಯದ ಗುರಿಯನ್ನು ಕಳೆದ ವರ್ಷ ಇರಿಸಿಕೊಂಡಿದ್ದ 22,700 ಕೋಟಿ ರೂ.ನಿಂದ 2021-22ರ ಹಣಕಾಸು ವರ್ಷಕ್ಕೆ 24,580 ಕೋಟಿ ರೂ.ಗೆ ಹೆಚ್ಚಿಸಲಾಗಿದೆ. ಇನ್ನು ಫೆಬ್ರವರಿ ಕೊನೆ ಹೊತ್ತಿಗೆ ರಾಜ್ಯಕ್ಕೆ ಅಬಕಾರಿ ಆದಾಯ 20,900 ಕೋಟಿ ರೂಪಾಯಿ ಬಂದಿದೆ. “2020- 2ರಲ್ಲಿ ಕೋವಿಡ್- 19 ಪರಿಣಾಮವಾಗಿ ಸಾರ್ವಜನಿಕರಿಗೆ ಹೇಳಲಾಗದಷ್ಟು ಸಮಸ್ಯೆ ಆಗಿದೆ. ಜನರ ಮೇಲೆ ನಾನಿನ್ನು ಹೆಚ್ಚುವರಿ ಹೊರೆ ಹೊರೆಸುವುದಿಲ್ಲ,” ಎಂದು ಪೆಟ್ರೋಲ್- ಡೀಸೆಲ್ ಮೇಲೆ ರಾಜ್ಯ ಸರ್ಕಾರದಿಂದ ಯಾವುದೇ ತೆರಿಗೆ ಹೆಚ್ಚಿಸದೆ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಪೆಟ್ರೋಲ್ ದರದಲ್ಲಿ ಯಾವ ಇಳಿಕೆಯೂ ಆಗಲಿಲ್ಲ; ಇಂದು ರಾಜ್ಯದಲ್ಲಿ ರೂ. 96ರ ಗಡಿಯಲ್ಲಿ ಪೆಟ್ರೋಲ್​ ಬೆಲೆ

ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ