AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Target: ಬಜೆಟ್​ಗಾಗಿ ಕರ್ನಾಟಕ ಸರ್ಕಾರ ಎಲ್ಲಿಂದ ಆದಾಯ ಸೃಷ್ಟಿಸುತ್ತದೆ? ಇಲ್ಲಿದೆ ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿರುವ ತೆರಿಗೆ ಗುರಿ

Karnataka Budget 2023: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದಿನ ವರ್ಷದಕ್ಕಿಂತ ಬಹಳ ಡೊಡ್ಡ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಇಷ್ಟು ಹಣವನ್ನು ಸರ್ಕಾರ ಹೇಗೆ ಹೊಂದಿಸುತ್ತದೆ ಎಂಬುದು ಕುತೂಹಲ. ವಿವಿಧ ಇಲಾಖೆಗಳಿಗೆ ತೆರಿಗೆ ಸಂಗ್ರಹದ ಗುರಿಯನ್ನು ಸರ್ಕಾರ ನೀಡಿದೆ.

Tax Target: ಬಜೆಟ್​ಗಾಗಿ ಕರ್ನಾಟಕ ಸರ್ಕಾರ ಎಲ್ಲಿಂದ ಆದಾಯ ಸೃಷ್ಟಿಸುತ್ತದೆ? ಇಲ್ಲಿದೆ ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿರುವ ತೆರಿಗೆ ಗುರಿ
ಸಿಎಂ ಸಿದ್ದರಾಮಯ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 2:18 PM

Share

ಬೆಂಗಳೂರು: ಕರ್ನಾಟಕ ಸರ್ಕಾರ ಈ ಬಾರಿ ದಾಖಲೆಯ 3.27 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2023) ನೀಡಿದೆ. ಹಿಂದಿನ ಸರ್ಕಾರದ 2.65 ಲಕ್ಷ ಕೋಟಿ ರೂ ಬಜೆಟ್ ಗಾತ್ರಕ್ಕಿಂತ ಈ ಬಾರಿ ಶೇ. 20ಕ್ಕಿಂತಲೂ ಹೆಚ್ಚಿದೆ. ಇದರಲ್ಲಿ 5 ಗ್ಯಾರಂಟಿ ಯೋಜನೆಗಳಿಗೆಯೇ 52,000 ಕೋಟಿ ರೂ ಅನುದಾನ ಕೊಡಲಾಗಿದೆ. ಈ ಬಜೆಟ್ ಹಣದಲ್ಲಿ ಸಾಲ ಪಾವತಿಗಳಿಗೆಯೇ 22,441 ಕೋಟಿ ರೂ ವೆಚ್ಚವಾಗುತ್ತದೆ. ಬಂಡವಾಳ ಹೂಡಿಕೆ ವೆಚ್ಚ 54,374 ಕೋಟಿ ರೂ ಇದೆ. ಈಗ ಬಜೆಟ್​ಗೆ ಇಷ್ಟೊಂದು ಹಣವನ್ನು ಸರ್ಕಾರ ಹೇಗೆ ಹೊಂದಿಸುತ್ತದೆ ಎಂಬುದು ಕುತೂಹಲ. ಅಬಕಾರಿ ಸುಂಕವನ್ನು ಶೇ. 20ರಷ್ಟು ಹೆಚ್ಚಿಸಲಾಗಿದೆ. ವಾಣಿಜ್ಯ ಇಲಾಖೆಗೆ ಈ ಬಾರಿ ತೆರಿಗೆ ಗುರಿ 1 ಲಕ್ಷ ಕೋಟಿ ರೂಗಿಂತ ಹೆಚ್ಚು ಇಡಲಾಗಿದೆ. ಸರ್ಕಾರದ ಬಹುತೇಕ ಆದಾಯ ಕಮರ್ಷಿಯಲ್ ಟ್ಯಾಕ್ಸ್​ಗಳಿಂದ ಬರುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ವಾಣಿಜ್ಯ ಇಲಾಖೆಗೆ ಶೇ. 20ಕ್ಕಿಂತ ಹೆಚ್ಚು ತೆರಿಗೆ ಗುರಿ ಕೊಡಲಾಗಿದೆ. ಅಬಕಾರಿ ಇಲಾಖೆ, ನೊಂದಣಿ ಮುದ್ರಾಂಕ ಮತ್ತು ಸಾರಿಗೆ ಇಲಾಖೆಗೂ ಹೆಚ್ಚಿನ ತೆರಿಗೆ ಗುರಿ ನೀಡಲಾಗಿದೆ.

ಸರ್ಕಾರದಿಂದ 2023-24ಕ್ಕೆ ತೆರಿಗೆ ಗುರಿ

ಒಟ್ಟು ರಾಜಸ್ವ ನಿರೀಕ್ಷೆ: 1,62,000 ಕೋಟಿ ರೂ

  • ವಾಣಿಜ್ಯ ತೆರಿಗೆ ಇಲಾಖೆ: 1,01,000 ಕೋಟಿ ರೂ
  • ಅಬಕಾರಿ ಇಲಾಖೆ: 36,000 ಕೋಟಿ ರೂ
  • ನೊಂದಣಿ ಮತ್ತು ಮುದ್ರಾಂಕ ಇಲಾಖೆ: 25,000 ಕೋಟಿ ರೂ
  • ಸಾರಿಗೆ ಇಲಾಖೆ: 11,500 ಕೋಟಿ ರೂ
  • ಇತರೆ ಮೂಲಗಳಿಂದ: 2,153 ಕೋಟಿ ರೂ

ಇದನ್ನೂ ಓದಿKarnataka Budget 2023 Size: ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ

2022-23ರ ಬಜೆಟ್​ನಲ್ಲಿ ಇದ್ದ ತೆರಿಗೆ ಗುರಿ

  • ವಾಣಿಜ್ಯ ತೆರಿಗೆ ಇಲಾಖೆ: 77,017 ಕೋಟಿ ರೂ
  • ರಾಜ್ಯ ಅಬಕಾರಿ ಇಲಾಖೆ: 29,000 ಕೋಟಿ ರೂ
  • ನೊಂದಣಿ ಮತ್ತು ಮುದ್ರಾಂಕ ಶುಲ್ಕ: 15,000 ಕೋಟಿ ರೂ
  • ಸಾರಿಗೆ ಇಲಾಖೆ: 8,007 ಕೋಟಿ ರೂ

ಈ ಮಧ್ಯೆ ಹೆಚ್ಚು ವಿತ್ತೀಯ ಕೊರತೆ ಎದುರಾಗದ ರೀತಿ ಬಜೆಟ್ ಆಶ್ವಾಸನೆಗಳನ್ನು ಈಡೇರಿಸಬೇಕಾದ ಕಠಿಣ ಹೊಣೆಗಾರಿಗೆ ಸಿದ್ದರಾಮಯ್ಯ ಹೆಗಲಿಗಿದೆ. ನಿರೀಕ್ಷಿಸಿದಷ್ಟು ತೆರಿಗೆ ಸಂಗ್ರಹ ಆಗುತ್ತದಾ ಎಂಬುದು ಕುತೂಹಲ ಮೂಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ