AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Target: ಬಜೆಟ್​ಗಾಗಿ ಕರ್ನಾಟಕ ಸರ್ಕಾರ ಎಲ್ಲಿಂದ ಆದಾಯ ಸೃಷ್ಟಿಸುತ್ತದೆ? ಇಲ್ಲಿದೆ ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿರುವ ತೆರಿಗೆ ಗುರಿ

Karnataka Budget 2023: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದಿನ ವರ್ಷದಕ್ಕಿಂತ ಬಹಳ ಡೊಡ್ಡ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಇಷ್ಟು ಹಣವನ್ನು ಸರ್ಕಾರ ಹೇಗೆ ಹೊಂದಿಸುತ್ತದೆ ಎಂಬುದು ಕುತೂಹಲ. ವಿವಿಧ ಇಲಾಖೆಗಳಿಗೆ ತೆರಿಗೆ ಸಂಗ್ರಹದ ಗುರಿಯನ್ನು ಸರ್ಕಾರ ನೀಡಿದೆ.

Tax Target: ಬಜೆಟ್​ಗಾಗಿ ಕರ್ನಾಟಕ ಸರ್ಕಾರ ಎಲ್ಲಿಂದ ಆದಾಯ ಸೃಷ್ಟಿಸುತ್ತದೆ? ಇಲ್ಲಿದೆ ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿರುವ ತೆರಿಗೆ ಗುರಿ
ಸಿಎಂ ಸಿದ್ದರಾಮಯ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 2:18 PM

Share

ಬೆಂಗಳೂರು: ಕರ್ನಾಟಕ ಸರ್ಕಾರ ಈ ಬಾರಿ ದಾಖಲೆಯ 3.27 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2023) ನೀಡಿದೆ. ಹಿಂದಿನ ಸರ್ಕಾರದ 2.65 ಲಕ್ಷ ಕೋಟಿ ರೂ ಬಜೆಟ್ ಗಾತ್ರಕ್ಕಿಂತ ಈ ಬಾರಿ ಶೇ. 20ಕ್ಕಿಂತಲೂ ಹೆಚ್ಚಿದೆ. ಇದರಲ್ಲಿ 5 ಗ್ಯಾರಂಟಿ ಯೋಜನೆಗಳಿಗೆಯೇ 52,000 ಕೋಟಿ ರೂ ಅನುದಾನ ಕೊಡಲಾಗಿದೆ. ಈ ಬಜೆಟ್ ಹಣದಲ್ಲಿ ಸಾಲ ಪಾವತಿಗಳಿಗೆಯೇ 22,441 ಕೋಟಿ ರೂ ವೆಚ್ಚವಾಗುತ್ತದೆ. ಬಂಡವಾಳ ಹೂಡಿಕೆ ವೆಚ್ಚ 54,374 ಕೋಟಿ ರೂ ಇದೆ. ಈಗ ಬಜೆಟ್​ಗೆ ಇಷ್ಟೊಂದು ಹಣವನ್ನು ಸರ್ಕಾರ ಹೇಗೆ ಹೊಂದಿಸುತ್ತದೆ ಎಂಬುದು ಕುತೂಹಲ. ಅಬಕಾರಿ ಸುಂಕವನ್ನು ಶೇ. 20ರಷ್ಟು ಹೆಚ್ಚಿಸಲಾಗಿದೆ. ವಾಣಿಜ್ಯ ಇಲಾಖೆಗೆ ಈ ಬಾರಿ ತೆರಿಗೆ ಗುರಿ 1 ಲಕ್ಷ ಕೋಟಿ ರೂಗಿಂತ ಹೆಚ್ಚು ಇಡಲಾಗಿದೆ. ಸರ್ಕಾರದ ಬಹುತೇಕ ಆದಾಯ ಕಮರ್ಷಿಯಲ್ ಟ್ಯಾಕ್ಸ್​ಗಳಿಂದ ಬರುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ವಾಣಿಜ್ಯ ಇಲಾಖೆಗೆ ಶೇ. 20ಕ್ಕಿಂತ ಹೆಚ್ಚು ತೆರಿಗೆ ಗುರಿ ಕೊಡಲಾಗಿದೆ. ಅಬಕಾರಿ ಇಲಾಖೆ, ನೊಂದಣಿ ಮುದ್ರಾಂಕ ಮತ್ತು ಸಾರಿಗೆ ಇಲಾಖೆಗೂ ಹೆಚ್ಚಿನ ತೆರಿಗೆ ಗುರಿ ನೀಡಲಾಗಿದೆ.

ಸರ್ಕಾರದಿಂದ 2023-24ಕ್ಕೆ ತೆರಿಗೆ ಗುರಿ

ಒಟ್ಟು ರಾಜಸ್ವ ನಿರೀಕ್ಷೆ: 1,62,000 ಕೋಟಿ ರೂ

  • ವಾಣಿಜ್ಯ ತೆರಿಗೆ ಇಲಾಖೆ: 1,01,000 ಕೋಟಿ ರೂ
  • ಅಬಕಾರಿ ಇಲಾಖೆ: 36,000 ಕೋಟಿ ರೂ
  • ನೊಂದಣಿ ಮತ್ತು ಮುದ್ರಾಂಕ ಇಲಾಖೆ: 25,000 ಕೋಟಿ ರೂ
  • ಸಾರಿಗೆ ಇಲಾಖೆ: 11,500 ಕೋಟಿ ರೂ
  • ಇತರೆ ಮೂಲಗಳಿಂದ: 2,153 ಕೋಟಿ ರೂ

ಇದನ್ನೂ ಓದಿKarnataka Budget 2023 Size: ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ

2022-23ರ ಬಜೆಟ್​ನಲ್ಲಿ ಇದ್ದ ತೆರಿಗೆ ಗುರಿ

  • ವಾಣಿಜ್ಯ ತೆರಿಗೆ ಇಲಾಖೆ: 77,017 ಕೋಟಿ ರೂ
  • ರಾಜ್ಯ ಅಬಕಾರಿ ಇಲಾಖೆ: 29,000 ಕೋಟಿ ರೂ
  • ನೊಂದಣಿ ಮತ್ತು ಮುದ್ರಾಂಕ ಶುಲ್ಕ: 15,000 ಕೋಟಿ ರೂ
  • ಸಾರಿಗೆ ಇಲಾಖೆ: 8,007 ಕೋಟಿ ರೂ

ಈ ಮಧ್ಯೆ ಹೆಚ್ಚು ವಿತ್ತೀಯ ಕೊರತೆ ಎದುರಾಗದ ರೀತಿ ಬಜೆಟ್ ಆಶ್ವಾಸನೆಗಳನ್ನು ಈಡೇರಿಸಬೇಕಾದ ಕಠಿಣ ಹೊಣೆಗಾರಿಗೆ ಸಿದ್ದರಾಮಯ್ಯ ಹೆಗಲಿಗಿದೆ. ನಿರೀಕ್ಷಿಸಿದಷ್ಟು ತೆರಿಗೆ ಸಂಗ್ರಹ ಆಗುತ್ತದಾ ಎಂಬುದು ಕುತೂಹಲ ಮೂಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ