Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Target: ಬಜೆಟ್​ಗಾಗಿ ಕರ್ನಾಟಕ ಸರ್ಕಾರ ಎಲ್ಲಿಂದ ಆದಾಯ ಸೃಷ್ಟಿಸುತ್ತದೆ? ಇಲ್ಲಿದೆ ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿರುವ ತೆರಿಗೆ ಗುರಿ

Karnataka Budget 2023: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದಿನ ವರ್ಷದಕ್ಕಿಂತ ಬಹಳ ಡೊಡ್ಡ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಇಷ್ಟು ಹಣವನ್ನು ಸರ್ಕಾರ ಹೇಗೆ ಹೊಂದಿಸುತ್ತದೆ ಎಂಬುದು ಕುತೂಹಲ. ವಿವಿಧ ಇಲಾಖೆಗಳಿಗೆ ತೆರಿಗೆ ಸಂಗ್ರಹದ ಗುರಿಯನ್ನು ಸರ್ಕಾರ ನೀಡಿದೆ.

Tax Target: ಬಜೆಟ್​ಗಾಗಿ ಕರ್ನಾಟಕ ಸರ್ಕಾರ ಎಲ್ಲಿಂದ ಆದಾಯ ಸೃಷ್ಟಿಸುತ್ತದೆ? ಇಲ್ಲಿದೆ ವಿವಿಧ ಇಲಾಖೆಗಳಿಗೆ ಸರ್ಕಾರ ನೀಡಿರುವ ತೆರಿಗೆ ಗುರಿ
ಸಿಎಂ ಸಿದ್ದರಾಮಯ್ಯ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 07, 2023 | 2:18 PM

ಬೆಂಗಳೂರು: ಕರ್ನಾಟಕ ಸರ್ಕಾರ ಈ ಬಾರಿ ದಾಖಲೆಯ 3.27 ಲಕ್ಷ ಕೋಟಿ ರೂ ಗಾತ್ರದ ಬಜೆಟ್ (Karnataka Budget 2023) ನೀಡಿದೆ. ಹಿಂದಿನ ಸರ್ಕಾರದ 2.65 ಲಕ್ಷ ಕೋಟಿ ರೂ ಬಜೆಟ್ ಗಾತ್ರಕ್ಕಿಂತ ಈ ಬಾರಿ ಶೇ. 20ಕ್ಕಿಂತಲೂ ಹೆಚ್ಚಿದೆ. ಇದರಲ್ಲಿ 5 ಗ್ಯಾರಂಟಿ ಯೋಜನೆಗಳಿಗೆಯೇ 52,000 ಕೋಟಿ ರೂ ಅನುದಾನ ಕೊಡಲಾಗಿದೆ. ಈ ಬಜೆಟ್ ಹಣದಲ್ಲಿ ಸಾಲ ಪಾವತಿಗಳಿಗೆಯೇ 22,441 ಕೋಟಿ ರೂ ವೆಚ್ಚವಾಗುತ್ತದೆ. ಬಂಡವಾಳ ಹೂಡಿಕೆ ವೆಚ್ಚ 54,374 ಕೋಟಿ ರೂ ಇದೆ. ಈಗ ಬಜೆಟ್​ಗೆ ಇಷ್ಟೊಂದು ಹಣವನ್ನು ಸರ್ಕಾರ ಹೇಗೆ ಹೊಂದಿಸುತ್ತದೆ ಎಂಬುದು ಕುತೂಹಲ. ಅಬಕಾರಿ ಸುಂಕವನ್ನು ಶೇ. 20ರಷ್ಟು ಹೆಚ್ಚಿಸಲಾಗಿದೆ. ವಾಣಿಜ್ಯ ಇಲಾಖೆಗೆ ಈ ಬಾರಿ ತೆರಿಗೆ ಗುರಿ 1 ಲಕ್ಷ ಕೋಟಿ ರೂಗಿಂತ ಹೆಚ್ಚು ಇಡಲಾಗಿದೆ. ಸರ್ಕಾರದ ಬಹುತೇಕ ಆದಾಯ ಕಮರ್ಷಿಯಲ್ ಟ್ಯಾಕ್ಸ್​ಗಳಿಂದ ಬರುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ವಾಣಿಜ್ಯ ಇಲಾಖೆಗೆ ಶೇ. 20ಕ್ಕಿಂತ ಹೆಚ್ಚು ತೆರಿಗೆ ಗುರಿ ಕೊಡಲಾಗಿದೆ. ಅಬಕಾರಿ ಇಲಾಖೆ, ನೊಂದಣಿ ಮುದ್ರಾಂಕ ಮತ್ತು ಸಾರಿಗೆ ಇಲಾಖೆಗೂ ಹೆಚ್ಚಿನ ತೆರಿಗೆ ಗುರಿ ನೀಡಲಾಗಿದೆ.

ಸರ್ಕಾರದಿಂದ 2023-24ಕ್ಕೆ ತೆರಿಗೆ ಗುರಿ

ಒಟ್ಟು ರಾಜಸ್ವ ನಿರೀಕ್ಷೆ: 1,62,000 ಕೋಟಿ ರೂ

  • ವಾಣಿಜ್ಯ ತೆರಿಗೆ ಇಲಾಖೆ: 1,01,000 ಕೋಟಿ ರೂ
  • ಅಬಕಾರಿ ಇಲಾಖೆ: 36,000 ಕೋಟಿ ರೂ
  • ನೊಂದಣಿ ಮತ್ತು ಮುದ್ರಾಂಕ ಇಲಾಖೆ: 25,000 ಕೋಟಿ ರೂ
  • ಸಾರಿಗೆ ಇಲಾಖೆ: 11,500 ಕೋಟಿ ರೂ
  • ಇತರೆ ಮೂಲಗಳಿಂದ: 2,153 ಕೋಟಿ ರೂ

ಇದನ್ನೂ ಓದಿKarnataka Budget 2023 Size: ಕರ್ನಾಟಕ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ; 5 ಗ್ಯಾರಂಟಿಗಳ ಜಾರಿಗೆ 52,000 ಕೋಟಿ ರೂ

2022-23ರ ಬಜೆಟ್​ನಲ್ಲಿ ಇದ್ದ ತೆರಿಗೆ ಗುರಿ

  • ವಾಣಿಜ್ಯ ತೆರಿಗೆ ಇಲಾಖೆ: 77,017 ಕೋಟಿ ರೂ
  • ರಾಜ್ಯ ಅಬಕಾರಿ ಇಲಾಖೆ: 29,000 ಕೋಟಿ ರೂ
  • ನೊಂದಣಿ ಮತ್ತು ಮುದ್ರಾಂಕ ಶುಲ್ಕ: 15,000 ಕೋಟಿ ರೂ
  • ಸಾರಿಗೆ ಇಲಾಖೆ: 8,007 ಕೋಟಿ ರೂ

ಈ ಮಧ್ಯೆ ಹೆಚ್ಚು ವಿತ್ತೀಯ ಕೊರತೆ ಎದುರಾಗದ ರೀತಿ ಬಜೆಟ್ ಆಶ್ವಾಸನೆಗಳನ್ನು ಈಡೇರಿಸಬೇಕಾದ ಕಠಿಣ ಹೊಣೆಗಾರಿಗೆ ಸಿದ್ದರಾಮಯ್ಯ ಹೆಗಲಿಗಿದೆ. ನಿರೀಕ್ಷಿಸಿದಷ್ಟು ತೆರಿಗೆ ಸಂಗ್ರಹ ಆಗುತ್ತದಾ ಎಂಬುದು ಕುತೂಹಲ ಮೂಡಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್