AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸುದ್ದಿಗೋಷ್ಠಿ ಕರೆದ ಬೊಮ್ಮಾಯಿ‌: ಕೇಂದ್ರ ಬಜೆಟ್​​​ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆ ಬಗ್ಗೆ ವಿವರಿಸಲಿರುವ ಸಿಎಂ

ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮಾನ್ ಅವರು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇನ್ನು ಇದಲ್ಲಿ ಕರ್ನಾಟಕ ಏನೆಲ್ಲ ಸಿಕ್ಕಿದೆ ಎನ್ನುವುದರ ಬಗ್ಗೆ ಸಿಎಂ ಬೊಮ್ಮಾಯಿ ಅವರು ನಾಳೆ ಸುದ್ದಿಗೋಷ್ಠಿ ವಿವರಿಸಲಿದ್ದಾರೆ.

ನಾಳೆ ಸುದ್ದಿಗೋಷ್ಠಿ ಕರೆದ ಬೊಮ್ಮಾಯಿ‌: ಕೇಂದ್ರ ಬಜೆಟ್​​​ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆ ಬಗ್ಗೆ ವಿವರಿಸಲಿರುವ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 01, 2023 | 7:54 PM

Share

ಬೆಂಗಳೂರು:  ಬಹುನಿರೀಕ್ಷಿತ 2023-24ನೇ ಸಾಲಿನ ಕೇಂದ್ರ ಬಜೆಟ್​ (Union Budget 2023) ಮಂಡನೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು(ಫೆಬ್ರವರಿ 01) ಬಜೆಟ್​ ಮಂಡಿಸಿದ್ದಾರೆ. ಕೇಂದ್ರ ಬಜೆಟ್ ಮಂಡನೆ ಬಗ್ಗೆ ನಾಳೆ (ಫೆಬ್ರವರಿ 02) ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದು, ಬಜೆಟ್​​​ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವ ಕೊಡುಗೆ ಬಗ್ಗೆ ವಿವರಿಸಲಿದ್ದಾರೆ.

ಇದನ್ನೂ ಓದಿ: Nirmala Sitharaman Pressmeet Highlights: ಮಹಿಳಾ ಸಬಲೀಕರಣ, ಪರಿಸರ ಸ್ನೇಹಿ ಪ್ರಗತಿ ನಮ್ಮ ಆದ್ಯತೆ; ನಿರ್ಮಲಾ ಸೀತಾರಾಮನ್

ಬಸವರಾಜ ಬೊಮ್ಮಾಯಿ ಅವರು ಇಂದು(ಫೆಬ್ರವರಿ 01) ಜಿಲ್ಲಾ ಪ್ರವಾಸದಲ್ಲಿರುವ ಕಾರಣ ನಾಳೆ ಬೆಳಗ್ಗೆ ಸುದ್ದಿಗೊಷ್ಠಿ ನಡೆಸಿ ಕೇಂದ್ರದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಲಿದ್ದಾರೆ. ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಏನೆಲ್ಲ ಕೊಡುಗೆ ಸಿಕ್ಕಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಕರುನಾಡು ಎಲೆಕ್ಷನ್ ರಣೋತ್ಸಾಹದಲ್ಲಿ ಇರೋವಾಗಲೇ ಪ್ರಧಾನಿ ಮೋದಿ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ರಾಜ್ಯದ ಜನರ ದಾಹ ನೀಗಿಸಲು.. ಅನ್ನದಾತರ ಬದುಕು ಹಸನು ಮಾಡಲು ಕೇಂದ್ರ ಸರ್ಕಾರ ಮಹತ್ವದ ಘೊಷಣೆ ಮಾಡಿದೆ. ನೀರಾವರಿ ಉದ್ದೇಶಕ್ಕಾಗಿ ಜಾರಿಗೊಳಿಸಿರೋ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಮೀಸಲಿಡೋದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.

ಇನ್ನು ಈ ಕೇಂದ್ರ ಬಜೆಟ್ ಬಗ್ಗೆ ರಾಜ್ಯದ ನಾಯಕರು ತಮ್ಮದೇ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರದ ಬಜೆಟ್​ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ರೆ, ವಿರೋಧ ಪಕ್ಷಗಳ ನಾಯಕರು ಕಟುವಾಗಿ ಟೀಕಿಸಿದ್ದಾರೆ. ಅದರಲ್ಲೂ ಸಿದ್ದರಾಮಯ್ಯ ಅಂಕಿ-ಅಂಶಗಳೊಂದಿಗೆ ಈ ಬಾರಿ ಕೇಂದ್ರ ಬಜೆಟ್​ನ್ನು ಟೀಕಿಸಿದ್ದಾರೆ.

ಮನ್ರೇಗಾ ಯೋಜನೆಗೂ ಕೇಂದ್ರಸರ್ಕಾರ ಹೆಚ್ಚಿನ ಅನುದಾನ ನೀಡಿಲ್ಲ. ಕೇಂದ್ರ ಬಜೆಟ್‌ ಕನ್ನಡಿ ಒಳಗಿನ ಗಂಟು. ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕೆ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಬಜೆಟ್‌ನಲ್ಲಿ ಯಾವುದೇ ಒತ್ತು ನೀಡಿಲ್ಲ. ಸುಮಾರು 3.5 ಲಕ್ಷ ಕೋಟಿ ಆದಾಯ ಕರ್ನಾಟಕದಿಂದ ಹೋಗುತ್ತೆ. ದೇಶದಲ್ಲಿ ತೆರಿಗೆ ಪಾವತಿಯಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ. ಕರ್ನಾಟಕಕ್ಕೆ ಸೆಸ್‌, ಸರ್‌ ಚಾರ್ಜ್‌ನಲ್ಲಿ ಪಾಲು ಇಲ್ಲ. ಈ ಬಗ್ಗೆ ರಾಜ್ಯ ಪ್ರತಿನಿಧಿಸುವ ಬಿಜೆಪಿ ಸಂಸದರು ಪ್ರಶ್ನೆ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಬಜೆಟ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:20 pm, Wed, 1 February 23

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ