AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸುದ್ದಿಗೋಷ್ಠಿ ಕರೆದ ಬೊಮ್ಮಾಯಿ‌: ಕೇಂದ್ರ ಬಜೆಟ್​​​ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆ ಬಗ್ಗೆ ವಿವರಿಸಲಿರುವ ಸಿಎಂ

ಇಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮಾನ್ ಅವರು ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇನ್ನು ಇದಲ್ಲಿ ಕರ್ನಾಟಕ ಏನೆಲ್ಲ ಸಿಕ್ಕಿದೆ ಎನ್ನುವುದರ ಬಗ್ಗೆ ಸಿಎಂ ಬೊಮ್ಮಾಯಿ ಅವರು ನಾಳೆ ಸುದ್ದಿಗೋಷ್ಠಿ ವಿವರಿಸಲಿದ್ದಾರೆ.

ನಾಳೆ ಸುದ್ದಿಗೋಷ್ಠಿ ಕರೆದ ಬೊಮ್ಮಾಯಿ‌: ಕೇಂದ್ರ ಬಜೆಟ್​​​ನಲ್ಲಿ ರಾಜ್ಯಕ್ಕೆ ಸಿಕ್ಕಿರುವ ಕೊಡುಗೆ ಬಗ್ಗೆ ವಿವರಿಸಲಿರುವ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 01, 2023 | 7:54 PM

ಬೆಂಗಳೂರು:  ಬಹುನಿರೀಕ್ಷಿತ 2023-24ನೇ ಸಾಲಿನ ಕೇಂದ್ರ ಬಜೆಟ್​ (Union Budget 2023) ಮಂಡನೆಯಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು(ಫೆಬ್ರವರಿ 01) ಬಜೆಟ್​ ಮಂಡಿಸಿದ್ದಾರೆ. ಕೇಂದ್ರ ಬಜೆಟ್ ಮಂಡನೆ ಬಗ್ಗೆ ನಾಳೆ (ಫೆಬ್ರವರಿ 02) ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ಕರೆದಿದ್ದು, ಬಜೆಟ್​​​ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವ ಕೊಡುಗೆ ಬಗ್ಗೆ ವಿವರಿಸಲಿದ್ದಾರೆ.

ಇದನ್ನೂ ಓದಿ: Nirmala Sitharaman Pressmeet Highlights: ಮಹಿಳಾ ಸಬಲೀಕರಣ, ಪರಿಸರ ಸ್ನೇಹಿ ಪ್ರಗತಿ ನಮ್ಮ ಆದ್ಯತೆ; ನಿರ್ಮಲಾ ಸೀತಾರಾಮನ್

ಬಸವರಾಜ ಬೊಮ್ಮಾಯಿ ಅವರು ಇಂದು(ಫೆಬ್ರವರಿ 01) ಜಿಲ್ಲಾ ಪ್ರವಾಸದಲ್ಲಿರುವ ಕಾರಣ ನಾಳೆ ಬೆಳಗ್ಗೆ ಸುದ್ದಿಗೊಷ್ಠಿ ನಡೆಸಿ ಕೇಂದ್ರದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಲಿದ್ದಾರೆ. ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಏನೆಲ್ಲ ಕೊಡುಗೆ ಸಿಕ್ಕಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಕರುನಾಡು ಎಲೆಕ್ಷನ್ ರಣೋತ್ಸಾಹದಲ್ಲಿ ಇರೋವಾಗಲೇ ಪ್ರಧಾನಿ ಮೋದಿ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. ರಾಜ್ಯದ ಜನರ ದಾಹ ನೀಗಿಸಲು.. ಅನ್ನದಾತರ ಬದುಕು ಹಸನು ಮಾಡಲು ಕೇಂದ್ರ ಸರ್ಕಾರ ಮಹತ್ವದ ಘೊಷಣೆ ಮಾಡಿದೆ. ನೀರಾವರಿ ಉದ್ದೇಶಕ್ಕಾಗಿ ಜಾರಿಗೊಳಿಸಿರೋ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಮೀಸಲಿಡೋದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.

ಇನ್ನು ಈ ಕೇಂದ್ರ ಬಜೆಟ್ ಬಗ್ಗೆ ರಾಜ್ಯದ ನಾಯಕರು ತಮ್ಮದೇ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಬಿಜೆಪಿ ನಾಯಕರು ತಮ್ಮ ಸರ್ಕಾರದ ಬಜೆಟ್​ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ರೆ, ವಿರೋಧ ಪಕ್ಷಗಳ ನಾಯಕರು ಕಟುವಾಗಿ ಟೀಕಿಸಿದ್ದಾರೆ. ಅದರಲ್ಲೂ ಸಿದ್ದರಾಮಯ್ಯ ಅಂಕಿ-ಅಂಶಗಳೊಂದಿಗೆ ಈ ಬಾರಿ ಕೇಂದ್ರ ಬಜೆಟ್​ನ್ನು ಟೀಕಿಸಿದ್ದಾರೆ.

ಮನ್ರೇಗಾ ಯೋಜನೆಗೂ ಕೇಂದ್ರಸರ್ಕಾರ ಹೆಚ್ಚಿನ ಅನುದಾನ ನೀಡಿಲ್ಲ. ಕೇಂದ್ರ ಬಜೆಟ್‌ ಕನ್ನಡಿ ಒಳಗಿನ ಗಂಟು. ಕೃಷಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕೆ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಬಜೆಟ್‌ನಲ್ಲಿ ಯಾವುದೇ ಒತ್ತು ನೀಡಿಲ್ಲ. ಸುಮಾರು 3.5 ಲಕ್ಷ ಕೋಟಿ ಆದಾಯ ಕರ್ನಾಟಕದಿಂದ ಹೋಗುತ್ತೆ. ದೇಶದಲ್ಲಿ ತೆರಿಗೆ ಪಾವತಿಯಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ. ಕರ್ನಾಟಕಕ್ಕೆ ಸೆಸ್‌, ಸರ್‌ ಚಾರ್ಜ್‌ನಲ್ಲಿ ಪಾಲು ಇಲ್ಲ. ಈ ಬಗ್ಗೆ ರಾಜ್ಯ ಪ್ರತಿನಿಧಿಸುವ ಬಿಜೆಪಿ ಸಂಸದರು ಪ್ರಶ್ನೆ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಬಜೆಟ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:20 pm, Wed, 1 February 23

ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ