AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ಆದಾಯ ಖೋತಾ: ಕರ್ನಾಟಕ ಸರ್ಕಾರದ ಸಾಲದ ಪ್ರಮಾಣ ಶೇ 31ರಷ್ಟು ಏರಿಕೆ

ಲಾಕ್‌ಡೌನ್​ನಿಂದ ಆದಾಯ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಸಂಕಷ್ಟ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಸರ್ಕಾರವು ಹೆಚ್ಚುವರಿ ಸಾಲ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು

ಲಾಕ್​ಡೌನ್​ನಿಂದ ಆದಾಯ ಖೋತಾ: ಕರ್ನಾಟಕ ಸರ್ಕಾರದ ಸಾಲದ ಪ್ರಮಾಣ ಶೇ 31ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 14, 2021 | 11:31 PM

Share

ಬೆಂಗಳೂರು: ಕರ್ನಾಟಕ ರಾಜ್ಯದ ಸಾರ್ವಜನಿಕ ಸಾಲ ಶೇ 31.38ರಷ್ಟು ಏರಿಕೆಯಾಗಿದೆ ಎಂದು ವಿಧಾನಸಭೆಯಲ್ಲಿ ಮಂಡನೆಯಾದ ಲೆಕ್ಕ ಪರಿಶೋಧಕರ (Comptroller and Auditor General – CAG) ವರದಿಯಲ್ಲಿ ಉಲ್ಲೇಖಿಸಲಾಗಿದೆ. ಲಾಕ್‌ಡೌನ್​ನಿಂದ ಆದಾಯ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಸಂಕಷ್ಟ ಪರಿಸ್ಥಿತಿ ನಿರ್ವಹಿಸಲು ರಾಜ್ಯ ಸರ್ಕಾರವು ಹೆಚ್ಚುವರಿ ಸಾಲ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. 2019-20ರಲ್ಲಿ ₹ 2.34 ಲಕ್ಷ ಕೋಟಿ ಸಾಲ ಮಾಡಿತ್ತು. ಈ ಮೊತ್ತವು 2020-21ನೇ ಸಾಲಿನಲ್ಲಿ ₹ 3.07 ಲಕ್ಷ ಕೋಟಿಗೆ ಏರಿಕೆಯಾಗಿದೆ. 2019-20ರಲ್ಲಿ ರಾಜ್ಯದ ಜಿಎಸ್​ಟಿ ಸಂಗ್ರಹ ₹ 42,147 ಕೋಟಿ ಇತ್ತು. 2020-21ರಲ್ಲಿ ಇದು ₹ 37,711 ಕೋಟಿಗೆ ಇಳಿಕೆಯಾಗಿದೆ ಎಂದು ವರದಿಯು ಹೇಳಿದೆ.

2020-21ನೇ ಸಾಲಿನಲ್ಲಿ ಸಾಲದ ಪ್ರಮಾಣವು ₹ 96,506 ಕೋಟಿ ಇತ್ತು. ರಾಜ್ಯದ ತೆರಿಗೆ ಆದಾಯದಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ಆದಾಯ ಸಂಗ್ರಹದಲ್ಲಿ ₹ 14,535 ಕೋಟಿ ಕೊರತೆ ಕಾಣಿಸಿಕೊಂಡಿದೆ. 2019-20ರಿಂದ 2020-21ರವರೆಗೆ ಸಾಲದ ಪ್ರಮಾಣವು ಹೆಚ್ಚುತ್ತಲೇ ಇದೆ. 2021ರಲ್ಲಿ ಸಾಲದ ಪ್ರಮಾಣವು ₹ 78,000 ಕೋಟಿ ಹೆಚ್ಚಾಗಿದೆ. ಎಸ್​ಜಿಎಸ್​ಟಿ, ರಾಜ್ಯ ಅಬಕಾರಿ ಸುಂಕ, ಮಾರಾಟ ತೆರಿಗೆ, ಮುದ್ರಾಂಕ ತೆರಿಗೆ ಮತ್ತು ನೋಂದಣಿ ತೆರಿಗೆ, ವಾಹನ ತೆರಿಗೆ ಸಂಗ್ರಹದಲ್ಲಿಯೂ ಭಾರಿ ನಷ್ಟವಾಗಿದೆ. ಇದರಿಂದಾಗಿ ಹೆಚ್ಚಿನ ಪ್ರಮಾಣದಲ್ಲಿ ಸಾಲ ಪಡೆಯುವುದು ಅನಿವಾರ್ಯವಾಗಿದೆ. ಸಾಲದ ಪ್ರಮಾಣ ಹೆಚ್ಚಾಗಿರುವ ಕುರಿತು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಕಾಮಗಾರಿಗಳು ಆರಂಭವಾಗಿ ಐದು ವರ್ಷವಾದರೂ ನೀರಾವರಿ ಇಲಾಖೆಯ 13 ಯೋಜನೆಗಳು ಹಾಗೂ 41 ರಸ್ತೆ ಯೋಜನೆ, 2 ಕಟ್ಟಡ ಯೋಜನೆ, 3 ಸೇತುವೆ ಕಾಮಗಾರಿಗಳು ಅಪೂರ್ಣವಾಗಿರುವ ಬಗ್ಗೆ ವರದಿಯು ಆಕ್ಷೇಪಿಸಿದೆ. ಕೇಂದ್ರ ಸರ್ಕಾರಕ್ಕೆ ₹ 68.65 ಕೋಟಿ ಹೆಚ್ಚುವರಿ ಮೊತ್ತವನ್ನು ಮರುಪಾವತಿ ಮಾಡಿರುವ ಬಗ್ಗೆಯೂ ವರದಿಯಲ್ಲಿ ಆಕ್ಷೇಪಿಸಲಾಗಿದೆ.

ಮುಂಗಡ ಮೊತ್ತ ಪರಿಷ್ಕಾರ ಸರ್ಕಾರಿ ನೌಕರರಿಗೆ ಹಬ್ಬದ ಮುಂಗಡ ಮೊತ್ತ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಪ್ರಸ್ತುತ ₹ 10,000 ಮುಂಗಡ ನೀಡಲಾಗುತ್ತಿತ್ತು. ಇದನ್ನು ಸರ್ಕಾರವು ₹ 25,000ಕ್ಕೆ ಪರಿಷ್ಕರಿಸಿದೆ.

ಇದನ್ನೂ ಓದಿ: ಸಿಎಜಿ ಕಚೇರಿಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ ಇದನ್ನೂ ಓದಿ: Petrol and Diesel Tax Collection: 3 ಹಣಕಾಸು ವರ್ಷದಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆಯ 8.02 ಲಕ್ಷ ಕೋಟಿ ರೂ. ಸಂಗ್ರಹ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ