AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್, ಫ್ಲಿಪ್​ಕಾರ್ಟ್ ವಿರುದ್ಧದ ತನಿಖೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್

ಫ್ಲಿಪ್​ಕಾರ್ಟ್, ಅಮೆಜಾನ್ ವಿರುದ್ಧ ಸಿಸಿಐ ನೀಡಿದ್ದ ತನಿಖೆ ಆದೇಶ ವಿರುದ್ಧ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈ ಕೋರ್ಟ್ ಶುಕ್ರವಾರ ವಜಾ ಮಾಡಿದೆ.

ಅಮೆಜಾನ್, ಫ್ಲಿಪ್​ಕಾರ್ಟ್ ವಿರುದ್ಧದ ತನಿಖೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Jun 12, 2021 | 12:34 AM

Share

ಸ್ಪರ್ಧೆ ಕಾನೂನುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾರತ ಸ್ಪರ್ಧಾ ಆಯೋಗ (ಸಿಸಿಐ) ತನಿಖೆಗೆ ನೀಡಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಇ ಕಾಮರ್ಸ್ ಕಂಪೆನಿಗಳಾದ ಅಮೆಜಾನ್ ಮತ್ತು ಫ್ಲಿಪ್​ಕಾರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ. ನ್ಯಾಯಮೂರ್ತಿ ದಿನೇಶ್​ ಕುಮಾರ್ ಅವರು ಈ ಎರಡು ಕಂಪೆನಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ, ಆದೇಶಿಸಿದ್ದಾರೆ. “ರಿಟ್​ನಲ್ಲಿ ಅರ್ಜಿದಾರರು ಎತ್ತಿದ ಸಮಸ್ಯೆಗಳನ್ನು ಈ ಹಂತದಲ್ಲಿ ಪೂರ್ವಗ್ರಹ ಮಾಡುವುದು ಮತ್ತು ತನಿಖೆಯನ್ನು ತಡೆಯುವುದು ಅವಿವೇಕದ ಸಂಗತಿ ಆಗಲಿದೆ,” ಎಂದು ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಜನವರಿ 13, 2020ರಂದು ಫ್ಲಿಪ್​ಕಾರ್ಟ್ ಮತ್ತು ಅಮೆಜಾನ್​ ಉದ್ಯಮ ನಡೆಸುವ ರೀತಿಯು ಸರಿಯಲ್ಲ ಎಂದು ಆರೋಪಿಸಲಾಗಿತ್ತು. ಭಾರೀ ರಿಯಾಯಿತಿಯಗಳು, ತಮ್ಮ ಪ್ಲಾಟ್​ಫಾರ್ಮ್​ನಲ್ಲಿ ಕೆಲವೇ ಮಾರಾಟಗಾರರ ಜತೆ ಕೈಜೋಡಿಸುತ್ತಿದೆ ಎಂದು ಸಿಸಿಐ ತನಿಖೆಗೆ ಆದೇಶಿಸಿತ್ತು.

ಆ ನಂತರ ಈ ತನಿಖೆಯ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಎರಡು ಕಂಪೆನಿಗಳು ಹೈಕೋರ್ಟ್ ಮೊರೆ ಹೋಗಿದ್ದವು. ಫೆಬ್ರವರಿ 14, 2020ರಂದು ಸಿಸಿಐ ಆದೇಶಕ್ಕೆ ಹೈಕೋರ್ಟ್​ನಿಂದ ಮಧ್ಯಂತರ ತಡೆ ನೀಡಿತ್ತು. ಆ ನಂತರ ಸಿಸಿಐನಿಂದ ಸುಪ್ರೀಮ್ ಕೋರ್ಟ್​ ಮೆಟ್ಟಿಲೇರಲಾಗಿತ್ತು. ಅಕ್ಟೋಬರ್ 26, 2020ರಂದು, ಮತ್ತೆ ಹೈಕೋರ್ಟ್ ಬಳಿಯೇ ತೆರಳುವಂತೆ ಸೂಚಿಸಲಾಗಿತ್ತು.

ಅಂದ ಹಾಗೆ, ಸ್ಮಾರ್ಟ್​ಫೋನ್​ಗಳು ಮತ್ತು ಸಂಬಂಧಿತ ಆಕ್ಸೆಸರಿಗಳ ವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿ ವ್ಯಾಪಾರ್ ಮಹಾಸಂಘ್ ನೀಡಿದ ದೂರಿನ ಹಿನ್ನೆಲೆಯಲ್ಲಿ 2020ರ ಜನವರಿ ತಿಂಗಳಲ್ಲಿ ಸಿಸಿಐ ತನಿಖೆಗೆ ಆದೇಶ ನೀಡಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಕರ್ನಾಟಕ ಹೈಕೋರ್ಟ್ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: Karnataka High Court: ವಿಶೇಷ ಚೇತನರಿಗೆ ಲಸಿಕೆ ವಿತರಣೆಗೆ ಇನ್ನಷ್ಟು ವೇಗ ನೀಡುವಂತೆ ಸರ್ಕಾರಕ್ಕೆ ತಾಕೀತು ಮಾಡಿದ ಹೈಕೋರ್ಟ್

(Karnataka high court on Friday dismissed Amazon and Flipkart plea to stay CCI probe order against these two companies)

Published On - 12:32 am, Sat, 12 June 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!