AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಲಿದೆ ಆಲ್ಕೋಹಾಲ್ ಆಧಾರಿತ ಸುಂಕ; ಇಲ್ಲಿವೆ ಕರ್ನಾಟಕದ ಪ್ರಸ್ತಾಪಿತ ಹೊಸ ಮದ್ಯ ನೀತಿ ಮುಖ್ಯಾಂಶಗಳು

Karnataka's proposed new liquor rules: ಕರ್ನಾಟಕ ಬಜೆಟ್ 2026-27ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುವಂತೆ, ದಶಕಗಳ ಹಳೆಯದಾದ ಅಬಕಾರಿ ನಿಯಮಗಳನ್ನು ಆಧುನೀಕರಿಸಲಾಗುತ್ತಿದೆ. ಇದರ ಮುಖ್ಯ ಉದ್ದೇಶವೆಂದರೆ ಪಾರದರ್ಶಕತೆ ತರುವುದು ಮತ್ತು ವ್ಯವಹಾರವನ್ನು ಸುಲಭಗೊಳಿಸುವುದು. ಆಲ್ಕೋಹಾಲ್ ಪ್ರಮಾಣ ಆಧಾರಿತ ತೆರಿಗೆ, ಮದ್ಯದ ಬೆಲೆ ನಿಗದಿಯಲ್ಲಿ ಬದಲಾವಣೆ ಇತ್ಯಾದಿ ಕ್ರಮಗಳಿಗೆ ಪ್ರಸ್ತಾಪಿಸಲಾಗಿದೆ.

ಬರಲಿದೆ ಆಲ್ಕೋಹಾಲ್ ಆಧಾರಿತ ಸುಂಕ; ಇಲ್ಲಿವೆ ಕರ್ನಾಟಕದ ಪ್ರಸ್ತಾಪಿತ ಹೊಸ ಮದ್ಯ ನೀತಿ ಮುಖ್ಯಾಂಶಗಳು
ಕರ್ನಾಟಕದ ಹೊಸ ಮದ್ಯ ನೀತಿImage Credit source: AI/Mediaforge/TV9
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 21, 2026 | 5:48 PM

Share

ಬೆಂಗಳೂರು, ಏಪ್ರಿಲ್ 21: ಕರ್ನಾಟಕ ಸರ್ಕಾರವು ಇತ್ತೀಚೆಗೆ ರಾಜ್ಯದ ಅಬಕಾರಿ ನೀತಿಯಲ್ಲಿ (Karnataka Excise Policy) ಐತಿಹಾಸಿಕ ಬದಲಾವಣೆಗಳನ್ನು ತರಲು ಪ್ರಸ್ತಾಪಿಸಿದೆ. ಈ ಹೊಸ ನಿಯಮಗಳು ಮದ್ಯದ ಬೆಲೆ, ಮಾರಾಟ ಮತ್ತು ಪರವಾನಗಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಗಳನ್ನು ತರಲಿವೆ. ಹೆಚ್ಚು ಪಾರದರ್ಶಕವಾದ ಮತ್ತು ವೈಜ್ಞಾನಿಕವಾದ ಟ್ಯಾಕ್ಸ್ ಸಿಸ್ಟಂ ತರುವುದು ಇದರ ಉದ್ದೇಶ. 1968ರ ಕರ್ನಾಟಕ ಅಬಕಾರಿ ನಿಯಮಗಳಿಗೆ ಕರಡು ತಿದ್ದುಪಡಿಯನ್ನು ಸರ್ಕಾರ ಹೊರಡಿಸಿದೆ. ಡ್ರಿಂಕ್ಸ್​ನಲ್ಲಿ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ಅಬಕಾರಿ ಸುಂಕ ವಿಧಿಸುವ ಕ್ರಮವನ್ನು ಯೋಜಿಸಲಾಗಿದೆ.

ಕರ್ನಾಟಕದ ಹೊಸ ಮದ್ಯ ನೀತಿ: ಕರಡು ನಿಯಮಗಳ ಮುಖ್ಯಾಂಶಗಳು

1. ಮದ್ಯದ ಬೆಲೆ ನಿಗದಿ ಪ್ರಕ್ರಿಯೆಯಲ್ಲಿ ಬದಲಾವಣೆ

ಪ್ರಸ್ತುತ ಮದ್ಯದ ಬೆಲೆಯನ್ನು ಸರ್ಕಾರವೇ ನಿರ್ಧರಿಸುತ್ತದೆ. ಆದರೆ ಕರಡು ಪ್ರಸ್ತಾವನೆಯಲ್ಲಿ, ಮದ್ಯದ ಬೆಲೆ ನಿಗದಿಪಡಿಸುವ ಹಕ್ಕನ್ನು ಮಾರುಕಟ್ಟೆ ಅಥವಾ ಉತ್ಪಾದಕರಿಗೆ ಬಿಟ್ಟುಕೊಡುವ ಬಗ್ಗೆ ಚರ್ಚೆಯಲ್ಲಿದೆ. ಇದರಿಂದ ಪ್ರೀಮಿಯಂ ಮದ್ಯದ ಬೆಲೆಗಳಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ.

2. ಆಲ್ಕೋಹಾಲ್ ಪ್ರಮಾಣದ ಆಧಾರಿತ ತೆರಿಗೆ (AIB)

ಮದ್ಯದ ಮೇಲಿನ ತೆರಿಗೆಯನ್ನು ಬಾಟಲಿಯ ಗಾತ್ರಕ್ಕಿಂತ ಹೆಚ್ಚಾಗಿ, ಅದರಲ್ಲಿರುವ ಆಲ್ಕೋಹಾಲ್ ಅಂಶದ (Alcohol content) ಆಧಾರದ ಮೇಲೆ ವಿಧಿಸಲು ಸರ್ಕಾರ ಉದ್ದೇಶಿಸಿದೆ.

ಇದನ್ನೂ ಓದಿ: ಬೆಂಗಳೂರು ಟೆಕ್ಕಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ರಾದ್ದಾಂತ; ಬ್ಲ್ಯಾಕ್​ಮೈಲ್, ಆತ್ಮಹತ್ಯೆ ಬೆದರಿಕೆ, ಅಶ್ಲೀಲ ಚಿತ್ರಗಳ ಕರ್ಮಕಾಂಡ

ಈ ನಿಯಮ ಜಾರಿಯಾದರೆ ಕಡಿಮೆ ಆಲ್ಕೋಹಾಲ್ ಇರುವ ಬಿಯರ್, ವೈನ್ ಇತ್ಯಾದಿ ಪಾನೀಯಗಳಿಗೆ ಕಡಿಮೆ ಸುಂಕ ಇರುತ್ತದೆ. ವೈನ್ ಮತ್ತು ಬಿಯರ್​ಗಳಲ್ಲಿ ಆಲ್ಕೋಹಾಲ್ ಪ್ರಮಾಣ ಶೇ. 5ರಿಂದ 10ರಷ್ಟು ಇರುತ್ತದೆ. ಕಂಟ್ರಿ ಸಾರಾಯಿಗಳಲ್ಲಿ ಶೇ. 40ಕ್ಕಿಂತಲೂ ಹೆಚ್ಚು ಆಲ್ಕೋಹಾಲ್ ಇರುವುದರಿಂದ, ಅಂಥವು ದುಬಾರಿಗೊಳ್ಳಬಹುದು. ಪ್ರೀಮಿಯಮ್ ವಿಸ್ಕಿ, ಬ್ರಾಂಡಿ ಇತ್ಯಾದಿ ಹಾಟ್ ಡ್ರಿಂಕ್ಸ್​ಗಳಲ್ಲಿ ಆಲ್ಕೋಹಾಲ್ ಪ್ರಮಾಣ ಸುಮಾರು ಶೇ. 40ರಷ್ಟು ಇರುತ್ತದೆ.

3. ಪರವಾನಗಿ (Licence) ಅವಧಿಯ ವಿಸ್ತರಣೆ

ಈಗಿರುವ ನಿಯಮದಂತೆ ಪ್ರತಿ ವರ್ಷ ಮದ್ಯದ ಅಂಗಡಿಗಳ ಪರವಾನಗಿ ನವೀಕರಿಸಬೇಕು. ಆದರೆ ಹೊಸ ಕರಡು ಪ್ರಸ್ತಾವನೆಯಲ್ಲಿ ಈ ಅವಧಿಯನ್ನು 5 ವರ್ಷಗಳವರೆಗೆ ವಿಸ್ತರಿಸುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಇದು ವ್ಯಾಪಾರಿಗಳಿಗೆ ಪದೇ ಪದೇ ಪರವಾನಗಿ ನವೀಕರಣದ ಕಿರಿಕಿರಿ ತಪ್ಪಿಸಲಿದೆ.

4. ಇ-ಹರಾಜು ಮೂಲಕ ಹೊಸ ಪರವಾನಗಿ

ರಾಜ್ಯದಲ್ಲಿ ವರ್ಷಗಳಿಂದ ಬಾಕಿ ಉಳಿದಿರುವ ಅಥವಾ ಹಂಚಿಕೆಯಾಗದ CL-2 (Retail) ಮತ್ತು CL-9 (Bar and Restaurant) ಪರವಾನಗಿಗಳನ್ನು ಪಾರದರ್ಶಕವಾಗಿ ಇ-ಹರಾಜಿನ (E-auction) ಮೂಲಕ ನೀಡಲು ಸರ್ಕಾರ ಯೋಜಿಸುತ್ತಿದೆ.

5. ಮದ್ಯ ಪ್ರವಾಸೋದ್ಯಮಕ್ಕೆ ಉತ್ತೇಜನ

ಬ್ರೂವರಿ ಮತ್ತು ಡಿಸ್ಟಿಲರಿಗಳಲ್ಲಿ ಪ್ರವಾಸಿಗರಿಗೆ ಭೇಟಿ ನೀಡಲು ಅವಕಾಶ ನೀಡುವುದು ಮತ್ತು ಅಲ್ಲಿಯೇ ಮದ್ಯದ ರುಚಿ ನೋಡುವ (Tasting units) ವ್ಯವಸ್ಥೆಯನ್ನು ಕಲ್ಪಿಸುವ ಬಗ್ಗೆ ಕರಡಿನಲ್ಲಿ ಉಲ್ಲೇಖಿಸಲಾಗಿದೆ. ಇದು ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ನಡೆಯುವ ಸಾಧ್ಯತೆಯಿದೆ.

ಇದನ್ನೂ ಓದಿ: ರಾಜ್‌ಕೋಟ್ ಸೈಬರ್ ವಂಚನೆ: 2,500 ಕೋಟಿ ರೂ ಹಗರಣ ಬಯಲು, ಪ್ರಮುಖ ಬ್ಯಾಂಕ್ ಅಧಿಕಾರಿಗಳ ಬಂಧನ

ಇವುಗಳು ಕೇವಲ ಪ್ರಸ್ತಾವನೆಗಳು. ಸಾರ್ವಜನಿಕರು ಮತ್ತು ಮದ್ಯ ಮಾರಾಟಗಾರರ ಸಂಘದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆದ ನಂತರವೇ ಸರ್ಕಾರ ಅಂತಿಮ ಅಧಿಸೂಚನೆಯನ್ನು ಹೊರಡಿಸಲಿದೆ. ಅಲ್ಲಿಯವರೆಗೆ ಈಗಿರುವ ಹಳೆಯ ನಿಯಮಗಳೇ ಮುಂದುವರಿಯಲಿವೆ. ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆ ಅಥವಾ ನಿಯಮಗಳ ಬದಲಾವಣೆಯ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸರ್ಕಾರವು ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಲಿದೆ.

(ಗಮನಿಸಿ: ಆಲ್ಕೋಹಾಲ್​ಯುಕ್ತ ಪಾನೀಯ ಅಥವಾ ಮದ್ಯ ಆರೋಗ್ಯಕ್ಕೆ ಹಾನಿಕರ.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?