AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat: ಕರ್ನಾಟಕಕ್ಕೆ ನಾಲ್ಕನೇ ವಂದೇ ಭಾರತ್ ಟ್ರೈನ್; ಬೆಂಗಳೂರಿಂದ ತಮಿಳುನಾಡಿನ ಕೊಯಮತ್ತೂರಿಗೆ ಸಾಗಲಿದೆ ಎಕ್ಸ್​ಪ್ರೆಸ್ ರೈಲು

Bengaluru to Coimbatore Vande Bharat Train: ಡಿಸೆಂಬರ್ ಅಂತ್ಯದೊಳಗೆ ಬೆಂಗಳೂರಿನಿಂದ ಕೊಯಮತ್ತೂರಿಗೆ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸೇವೆ ಆರಂಭವಾಗಲಿದೆ ಎಂದು ಸಂಸದ ಪಿ.ಸಿ. ಮೋಹನ್ ತಿಳಿಸಿದ್ದಾರೆ. ಸದ್ಯ ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿವೆ. ಬೆಂಗಳೂರಿನಿಂದ ಹೈದರಾಬಾದ್ ಮತ್ತು ಬೆಳಗಾವಿಗೆ; ಮೈಸೂರಿನಿಂದ ಚೆನ್ನೈಗೆ ಇವು ಸಂಚರಿಸುತ್ತವೆ. ಬೆಂಗಳೂರು ಮತ್ತು ಕೊಯಮತ್ತೂರು ಮಧ್ಯೆ ಈಗಾಗಲೇ ಉದಯ್ ಎಕ್ಸ್​​ಪ್ರೆಸ್ ರೈಲು ಇದೆ. ಇದರ ಜೊತೆಗೆ ವಂದೇ ಭಾರತ್ ಕೂಡ ಸಂಚರಿಸುತ್ತದೆ.

Vande Bharat: ಕರ್ನಾಟಕಕ್ಕೆ ನಾಲ್ಕನೇ ವಂದೇ ಭಾರತ್ ಟ್ರೈನ್; ಬೆಂಗಳೂರಿಂದ ತಮಿಳುನಾಡಿನ ಕೊಯಮತ್ತೂರಿಗೆ ಸಾಗಲಿದೆ ಎಕ್ಸ್​ಪ್ರೆಸ್ ರೈಲು
ವಂದೇ ಭಾರತ್ ರೈಲು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 21, 2023 | 10:49 AM

Share

ಬೆಂಗಳೂರು, ಡಿಸೆಂಬರ್ 21: ಬೆಂಗಳೂರಿನಿಂದ ಕೊಯಮತ್ತೂರಿಗೆ ಹೋಗಿ ಬರುವ ಪ್ರಯಾಣಿಕರಿಗೆ ಈಗ ಎರಡನೇ ರೈಲು ಸಿಗುತ್ತಿದೆ. ಉದಯ್ ಎಕ್ಸ್​ಪ್ರೆಸ್ ರೈಲಿನ ಜೊತೆಗೆ ಈಗ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು (Vande Bharat Express Train) ಈ ಮಾರ್ಗದಲ್ಲಿ ಸಂಚರಿಸಲಿದೆ. ಈ ತಿಂಗಳ ಅಂತ್ಯದ ಒಳಗೆ (ಡಿಸೆಂಬರ್​ನೊಳಗೆ) ವಂದೇ ಭಾರತ್ ಎಕ್ಸ್​ಪ್ರೆಸ್ ರೈಲೊಂದು ಇಲ್ಲಿ ಸೇವೆ ಆರಂಭಿಸಲಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಈ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಕರ್ನಾಟಕಕ್ಕೆ ನಾಲ್ಕನೇ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸಿಕ್ಕಂತಾಗುತ್ತದೆ.

ಕೊಯಮತ್ತೂರಿನಿಂದ ಬಹಳಷ್ಟು ಜನರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಬಹಳ ಅನುಕೂಲವಾಗಲಿದೆ. ಸದ್ಯ ಬೆಂಗಳೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸುತ್ತಿರುವ ಉದಯ್ ಎಕ್ಸ್​ಪ್ರೆಸ್ ರೈಲು 7 ಗಂಟೆ ತೆಗೆದುಕೊಳ್ಳುತ್ತದೆ. ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನಲ್ಲಿ ಒಂದೆರಡು ಗಂಟೆ ಬೇಗ ತಲುಪಲಿದೆ.

ಇದನ್ನೂ ಓದಿ: GST Act: ನ್ಯಾಯಮಂಡಳಿ ನೇಮಕಾತಿ ನಿಯಮದಲ್ಲಿ ತಾಳಮೇಳ ತರಲು ಜಿಎಸ್​ಟಿ ಕಾಯ್ದೆ ತಿದ್ದುಪಡಿ ಮಸೂದೆ ತಂದ ಸರ್ಕಾರ

ಕರ್ನಾಟಕದಲ್ಲಿ ಸದ್ಯ ಮೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳ ಸೇವೆ ಇದೆ. ಮೈಸೂರಿನಿಂದ ಚೆನ್ನೈ ನಡುವೆ ಒಂದು ರೈಲು ಸಾಗುತ್ತದೆ. ಇದು ಬೆಂಗಳೂರು ಮೂಲಕ ಹೋಗುತ್ತದೆ. ಇನ್ನೊಂದು ರೈಲು ಬೆಂಗಳೂರಿನಿಂದ ಹೈದರಾಬಾದ್​ಗೆ ಹೋಗುತ್ತದೆ. ಮೂರನೇ ರೈಲು ಬೆಂಗಳೂರಿನಿಂದ ಹುಬ್ಬಳ್ಳಿ, ಧಾರವಾಡ ಮುಖಾಂತರ ಬೆಳಗಾವಿವರೆಗೂ ಹೋಗುತ್ತದೆ.

ವಂದೇ ಭಾರತ್ ರೈಲು ವಿಶೇಷತೆಗಳು

ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳು ಸಾಮಾನ್ಯ ರೈಲಿಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವಂತೆ ರೂಪಿಸಲಾಗಿದೆ. ಇದರ ವಿನ್ಯಾಸ ಉತ್ತಮವಾಗಿದೆ. ಟಿಕೆಟ್ ಬೆಲೆಯೂ ಹೆಚ್ಚು. ಭಾರತದಲ್ಲಿ ಒಟ್ಟು 400ರಿಂದ 450 ವಂದೇ ಭಾರತ್ ರೈಲುಗಳಿವೆ. ಪ್ರತೀ ವರ್ಷವೂ 200ರಿಂದ 250 ಹೊಸ ರೈಲುಗಳನ್ನು ತಯಾರಿಸುವ ಸಾಮರ್ಥ್ಯ ಭಾರತೀಯ ರೈಲ್ವೆಗೆ ಇದೆ.

ಇದನ್ನೂ ಓದಿ: Inspiring: ಕಾಲೇಜು ಅರ್ಧಕ್ಕೆ ಬಿಟ್ಟು ಸ್ವಂತ ಕಂಪನಿ ಕಟ್ಟಿದ ಬೆಂಗಳೂರು ಹುಡುಗ; ಬಾಲಿವುಡ್ ಸಿನಿಮಾ ಆಗಿದೆ ಇವರ ಸಾಹಸ

ಮುಂದಿನ ನಾಲ್ಕು ವರ್ಷದಲ್ಲಿ ಭಾರತೀಯ ರೈಲ್ವೆ ಒಟ್ಟು 3,000 ಹೊಸ ರೈಲುಗಳನ್ನು (ಎಲ್ಲಾ ರೈಲು) ಬಿಡುಗಡೆ ಮಾಡಲು ಯೋಜಿಸಿದೆ. ಸದ್ಯ ಇರುವ ರೈಲುಗಳಲ್ಲಿ 800 ಕೋಟಿ ಪ್ರಯಾಣಿಕರು ಸಂಚರಿಸಬಹುದಾಗಿದೆ. 3,000 ಹೊಸ ರೈಲುಗಳು ಬಂದರೆ ಇದು 1,000 ಕೋಟಿ ಪ್ರಯಾಣಿಕ ಸಂಖ್ಯೆಗೆ ಏರಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ