AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನ ಸೆಳೆಯುತ್ತಿದೆ ಕರ್ನಾಟಕದ ಐಟಿ, ಸ್ಪೇಸ್​ಟೆಕ್, ಸ್ಟಾರ್ಟಪ್ ನೀತಿಗಳು; ಬೆಂಗಳೂರಿನಲ್ಲಿ ದಟ್ಟಣೆ ತಪ್ಪಿಸಲೂ ಕ್ರಮ

Karnataka's new policies on IT, SpaceTech and startups: ಕರ್ನಾಟಕ ಸರ್ಕಾರ ಬೆಂಗಳೂರು ಟೆಕ್ ಸಮಿಟ್​ನಲ್ಲಿ ಮೂರು ಪ್ರಮುಖ ನೀತಿಗಳನ್ನು ಅನಾವರಣಗೊಳಿಸಿದೆ. ಹೊಸ ಐಟಿ ನೀತಿ, ಸ್ಪೇಸ್​ಟೆಕ್ ನೀತಿ ಮತ್ತು ಸ್ಟಾರ್ಟಪ್ ನೀತಿಗಳನ್ನು ಜಾರಿಗೆ ತರಲು ಹೊರಟಿದೆ. ಈ ಮೂರೂ ಕ್ಷೇತ್ರಗಳಲ್ಲಿ ತನ್ನ ಮುಂಚಣಿ ಸ್ಥಾನ ಉಳಿಸಿಕೊಂಡು ಮುಂದುವರಿಯಲು ಈ ನೀತಿ ಸಹಾಯಕವಾಗುವ ನಿರೀಕ್ಷೆ ಇದೆ.

ಗಮನ ಸೆಳೆಯುತ್ತಿದೆ ಕರ್ನಾಟಕದ ಐಟಿ, ಸ್ಪೇಸ್​ಟೆಕ್, ಸ್ಟಾರ್ಟಪ್ ನೀತಿಗಳು; ಬೆಂಗಳೂರಿನಲ್ಲಿ ದಟ್ಟಣೆ ತಪ್ಪಿಸಲೂ ಕ್ರಮ
ಕರ್ನಾಟಕ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 21, 2025 | 5:55 PM

Share

ಬೆಂಗಳೂರು, ನವೆಂಬರ್ 21: ಜನಸಂಖ್ಯೆ, ವಾಹನ ಮತ್ತು ಉದ್ಯಮಗಳ ದಟ್ಟಣೆಯಿಂದ ಬಳಲುತ್ತಿರುವ ಬೆಂಗಳೂರಿಗೆ ಒತ್ತಡ ಕಡಿಮೆ ಮಾಡಲು ರಾಜ್ಯ ಸರ್ಕಾರ ಗಂಭೀರ ಪ್ರಯತ್ನಗಳನ್ನು ಮಾಡುತ್ತಿದೆ. ಬೆಂಗಳೂರಿನಿಂದ ಹೊರಗೆ, ಕರ್ನಾಟಕದ (Karnataka) ಇತರ ಭಾಗಗಳಿಗೆ ಸ್ಟಾರ್ಟಪ್​ಗಳನ್ನು (startups) ನೆಲೆಗೊಳಿಸುವ ದೃಷ್ಟಿಯಲ್ಲಿ ನೀತಿಗಳನ್ನು ರೂಪಿಸಿದೆ. ಬೆಂಗಳೂರು ಹೊರಗೆ ಸ್ಥಾಪನೆಯಾಗುವ ಸ್ಟಾರ್ಟಪ್​ಗಳಿಗೆ ನಾನಾ ರೀತಿಯ ಉತ್ತೇಜನಗಳನ್ನು ಸರ್ಕಾರ ಒದಗಿಸಲು ಸಿದ್ಧವಿದೆ. ಬೆಂಗಳೂರಿನಿಂದ ಹೊರಗೆ ಉದ್ಯೋಗ ಮಾಡಲು ವರ್ಗಾವಣೆ ಆಗುವ ವ್ಯಕ್ತಿಗೂ 50,000 ರೂ ನೀಡಲು ಸರ್ಕಾರ ಸಿದ್ಧವಾಗಿದೆ.

ಬೆಂಗಳೂರು ಟೆಕ್ ಸಮಿಟ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮೂರು ಪ್ರಮುಖ ನೀತಿಗಳನ್ನು ಬಿಡುಗಡೆ ಮಾಡಿದ್ದಾರೆ. 2025-30ರ ಕರ್ನಾಟಕದ ಐಟಿ ನೀತಿ, ಬಾಹ್ಯಾಕಾಶ ತಂತ್ರಜ್ಞಾನ ನೀತಿ, ಮತ್ತು ಸ್ಟಾರ್ಟಪ್ ನೀತಿಗಳನ್ನು ಸರ್ಕಾರ ಅನಾವರಣಗೊಳಿಸಿದೆ. ಐಟಿ, ಸ್ಪೇಸ್ ಮತ್ತು ಸ್ಟಾರ್ಟಪ್ ಸೆಕ್ಟರ್​ಗಳಲ್ಲಿ ರಾಜ್ಯದ ನಾಯಕತ್ವ ಸ್ಥಾನವನ್ನು ಉಳಿಸಿಕೊಂಡು ಹೋಗಲು ಈ ನೀತಿಗಳು ಸಹಕಾರಿಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ; ಹಳೆಯ 29 ಕಾನೂನುಗಳ ಬದಲು ಹೊಸ 4 ಕಾನೂನು ಸಂಹಿತೆ ಜಾರಿಗೆ

ಸ್ಟಾರ್ಟಪ್​ಗಳಿಗೆ ಉತ್ತೇಜನ ನೀಡುವ ನೀತಿ…

ಬೆಂಗಳೂರಲ್ಲಿ ಮಾತ್ರವಲ್ಲದೆ ರಾಜ್ಯದ ಇತರ ನಗರಗಳಲ್ಲಿ ಸ್ಟಾರ್ಟಪ್​ಗಳನ್ನು ಬೆಳೆಸುವ ಗುರಿ ಇಡಲಾಗಿದೆ. ಮೈಸೂರು, ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ ಧಾರವಾಡ, ಕಲಬುರ್ಗಿಯಂತಹ ನಗರಗಳಲ್ಲಿ ಸ್ಟಾರ್ಟಪ್ ಝೋನ್​ಗಳು, ಇನ್ನೋವೇಶನ್ ಕ್ಲಸ್ಟರ್​ಗಳು ಇತ್ಯಾದಿಯನ್ನು ನಿರ್ಮಿಸುವ ಪ್ಲಾನ್ ಮಾಡಲಾಗಿದೆ.

2030ರೊಳಗೆ 30,000 ಸ್ಟಾರ್ಟಪ್​ಗಳನ್ನು ಕರ್ನಾಟಕದಲ್ಲಿ ಸ್ಥಾಪಿಸುವ ಗುರಿ ಇದೆ. ಇದರಲ್ಲಿ 5,000 ಸ್ಟಾರ್ಟಪ್​ಗಳು ಕೆಳ ಸ್ತರದ ನಗರಗಳಲ್ಲಿ ನಿರ್ಮಾಣವಾಗಬೇಕೆಂಬ ಆಶಯ ಇದೆ.

ಹೊಸ ಸ್ಟಾರ್ಟಪ್​ಗಳಿಗೆ ಆಫೀಸ್ ರೆಂಟ್​ನಲ್ಲಿ ಶೇ. 50ರಷ್ಟು ರೀಂಬರ್ಸ್ಮೆಂಟ್, ಪ್ರಾಪರ್ಟಿ ಟ್ಯಾಕ್ಸ್​ನಲ್ಲಿ ಶೇ. 30 ವಿನಾಯಿತಿ ಸಿಗುತ್ತದೆ (ಸೀಮಿತ ಅವಧಿಗೆ).

ಬೆಂಗಳೂರಿನಿಂದ ಹೊರಗೆ ಶಿಫ್ಟ್ ಆಗುವ ಸ್ಟಾರ್ಟಪ್​ಗಳಿಗೆ ಐದು ವರ್ಷ ವಿದ್ಯುತ್ ಸುಂಕದಲ್ಲಿ ವಿನಾಯಿತಿ ಸಿಗುತ್ತದೆ. 12 ಲಕ್ಷ ರೂವರೆಗೆ ಫೋನ್ ಮತ್ತು ಇಂಟರ್ನೆಟ್ ಬಿಲ್​ನಲ್ಲಿ ರಿಯಾಯಿತಿ ಸಿಗುತ್ತದೆ. ಬೆಂಗಳೂರು ಹೊರಗೆ ವರ್ಗಾವಣೆಯಾಗುವ ಉದ್ಯೋಗಿಗೆ ಸರ್ಕಾರವು 50,000 ರೂ ಭತ್ಯೆ ಕೊಡುತ್ತದೆ.

ಇದನ್ನೂ ಓದಿ: ಪಿಎಫ್ ಅರ್ಹತೆಗೆ ವೇತನ ಮಿತಿ 15,000 ರೂನಿಂದ 25,000 ರೂಗೆ ಏರಿಸಲು ಸರ್ಕಾರದಿಂದ ಚಿಂತನೆ

ಇನ್ನೋವೇಶನ್ ಸೆಕ್ಟರ್​ನಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೂ ಸರ್ಕಾರ ಸಾಕಷ್ಟು ಉತ್ತೇಜನ ನೀಡುತ್ತದೆ. ಆರ್ ಅಂಡ್ ಡಿ ವೆಚ್ಚದಲ್ಲಿ ಶೇ. 40ರಷ್ಟನ್ನು ಸರ್ಕಾರ ಭರಿಸುತ್ತದೆ. ಎಐ, ಮೆಷಿನ್ ಲರ್ನಿಂಗ್, ಕ್ವಾಂಟಂ ಕಂಪ್ಯೂಟಿಂಗ್, ಬ್ಲಾಕ್​ಚೇನ್​ನಲ್ಲಿ ಕೆಲಸ ಮಾಡುವ ಸ್ಟಾರ್ಟಪ್​ಗಳಿಗೆ ಹೆಚ್ಚುವರಿ ಬಂಡವಾಳ ಉತ್ತೇಜನವನ್ನು ಸರ್ಕಾರ ನೀಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!