AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀನಾ ಏರ್​ಪೋರ್ಟ್ ಗುತ್ತಿಗೆ: ಅದಾನಿಗೆ ಸಿಗಬೇಕಿದ್ದ ಗುತ್ತಿಗೆ ಚೀನೀ ಕಂಪನಿ ಪಾಲಾಯ್ತು

Adani Out, China In: ಕೀನ್ಯಾದ ಜೋಮೋ ಕೆನ್ಯಾಟ್ಟಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನವೀಕರಣ ಗುತ್ತಿಗೆಯನ್ನು ಚೀನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಕಂಪನಿಗೆ ನೀಡಲಾಗಿದೆ. ಸಾರ್ವಜನಿಕ ಪ್ರತಿಭಟನೆಗಳು ಮತ್ತು ಕಾನೂನು ಸವಾಲುಗಳಿಂದಾಗಿ ಅದಾನಿ ಗ್ರೂಪ್‌ನೊಂದಿಗಿನ $2.6 ಬಿಲಿಯನ್ ಒಪ್ಪಂದ ರದ್ದಾದ ನಂತರ, $2.9 ಬಿಲಿಯನ್ ಮೊತ್ತದ ಈ ಬೃಹತ್ ಯೋಜನೆಯನ್ನು ಚೀನಾ ಪಡೆದುಕೊಂಡಿದೆ. ಇದು ಕೀನ್ಯಾದಲ್ಲಿ ಚೀನಾದ ಪ್ರಭಾವವನ್ನು ಹೆಚ್ಚಿಸಿದ್ದು, ಪ್ರಾದೇಶಿಕ ಸ್ಪರ್ಧೆಯಲ್ಲಿ ಕೀನ್ಯಾ ತನ್ನ ಸ್ಥಾನ ಉಳಿಸಿಕೊಳ್ಳಲು ನೆರವಾಗಲಿದೆ.

ಕೀನಾ ಏರ್​ಪೋರ್ಟ್ ಗುತ್ತಿಗೆ: ಅದಾನಿಗೆ ಸಿಗಬೇಕಿದ್ದ ಗುತ್ತಿಗೆ ಚೀನೀ ಕಂಪನಿ ಪಾಲಾಯ್ತು
ಕೀನ್ಯಾ ಏರ್​ಪೋರ್ಟ್Image Credit source: Nairobinews
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 11, 2026 | 7:25 PM

Share

ನೈರೋಬಿ, ಜೂನ್ 11: ಭಾರತದ ಪ್ರಮುಖ ಉದ್ಯಮ ಸಂಸ್ಥೆಯಾದ ‘ಅದಾನಿ ಗ್ರೂಪ್’ (Adani Group) ಜೊತೆಗಿನ ಒಪ್ಪಂದ ರದ್ದಾದ ಬೆನ್ನಲ್ಲೇ, ಕೀನ್ಯಾ ದೇಶವು ತನ್ನ ಅತ್ಯಂತ ದೊಡ್ಡ ವಿಮಾನ ನಿಲ್ದಾಣದ ನವೀಕರಣ ಮತ್ತು ವಿಸ್ತರಣೆಯ ಬೃಹತ್ ಗುತ್ತಿಗೆಯನ್ನು ಚೀನಾದ ಕಂಪನಿಗೆ ನೀಡಿದೆ. ಕೀನ್ಯಾ ರಾಜಧಾನಿನಗರಿ ನೈರೋಬಿಯಲ್ಲಿರುವ ‘ಜೋಮೋ ಕೆನ್ಯಾಟ್ಟಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ’ದ (JKIA- Jomo Kenyatta International Airport) ನವೀಕರಣದ ಜವಾಬ್ದಾರಿಯನ್ನು ಚೀನಾದ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ‘ಚೀನಾ ಕಮ್ಯುನಿಕೇಷನ್ಸ್ ಕನ್ಸ್ಟ್ರಕ್ಷನ್ ಕೋ’ಗೆ (CCCC) ನೀಡಿದೆ.

ಈ ಇಡೀ ಯೋಜನೆಯ ಒಟ್ಟು ವೆಚ್ಚ 2.9 ಬಿಲಿಯನ್ ಡಾಲರ್ (ಸುಮಾರು ₹27,000 ಕೋಟಿಗೂ ಹೆಚ್ಚು) ಎಂದು ಅಂದಾಜಿಸಲಾಗಿದೆ.

ಪ್ರತಿಭಟನೆಗಳಿಂದಾಗಿ ಅದಾನಿ ಗ್ರೂಪ್‌ಗೆ ಕೈತಪ್ಪಿದ ಒಪ್ಪಂದ

ಇದಕ್ಕೂ ಮುನ್ನ ಗೌತಮ್ ಅದಾನಿ ನೇತೃತ್ವದ ಅದಾನಿ ಗ್ರೂಪ್, ಕೀನ್ಯಾದ ಈ ವಿಮಾನ ನಿಲ್ದಾಣವನ್ನು 30 ವರ್ಷಗಳ ಕಾಲ ನಿರ್ವಹಿಸುವ ಮತ್ತು ನವೀಕರಿಸುವ ಸಂಬಂಧ 2.6 ಬಿಲಿಯನ್ ಡಾಲರ್ ಮೊತ್ತದ ಬಿಡ್ ಸಲ್ಲಿಸಿ ಒಪ್ಪಂದವೂ ಆಗಿತ್ತು. ಆದರೆ, ಈ ಒಪ್ಪಂದದಿಂದ ಕೀನ್ಯಾದ ಸಾರ್ವಭೌಮತ್ವಕ್ಕೆ ಧಕ್ಕೆಯಾಗುತ್ತದೆ ಮತ್ತು ಸ್ಥಳೀಯ ಉದ್ಯೋಗ ನಷ್ಟವಾಗುತ್ತದೆ ಎಂದು ಆರೋಪಿಸಿ ಅಲ್ಲಿನ ವಿಮಾನಯಾನ ಕಾರ್ಮಿಕರು ಭಾರಿ ಮುಷ್ಕರ ಮತ್ತು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಮುಂಗಾರು ಬಿತ್ತನೆಗೆ ಮುನ್ನ ರೈತರಿಗೆ ಖುಷಿ ಸುದ್ದಿ, ಯೂರಿಯಾ ಬೆಲೆ ಅರ್ಧಕರ್ಧ ಕುಸಿತ

ಸಾರ್ವಜನಿಕರು ಮತ್ತು ನಾಗರಿಕ ಸಂಘಟನೆಗಳಿಂದ ಬಂದ ತೀವ್ರ ವಿರೋಧ ಹಾಗೂ ನ್ಯಾಯಾಲಯದಲ್ಲಿ ಎದುರಾದ ಕಾನೂನು ಸವಾಲುಗಳ ಕಾರಣದಿಂದಾಗಿ, ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಅವರ ಸರ್ಕಾರವು ಅದಾನಿ ಗ್ರೂಪ್ ಜೊತೆಗಿನ ಒಪ್ಪಂದವನ್ನು ರದ್ದುಗೊಳಿಸಬೇಕಾಯಿತು. ಈಗ ಚೀನೀ ಕಂಪನಿಗೆ ಗುತ್ತಿಗೆ ಸಿಕ್ಕಿದೆ.

ಕೀನ್ಯಾದಲ್ಲಿ ಚೀನಾದ ಪ್ರಭಾವ

ಈ ಹೊಸ ಒಪ್ಪಂದದೊಂದಿಗೆ ಕೀನ್ಯಾದ ಮೂಲಸೌಕರ್ಯ ವಲಯದ ಮೇಲೆ ಚೀನಾದ ಹಿಡಿತ ಮತ್ತಷ್ಟು ಬಲಗೊಂಡಿದೆ. ಚೀನಾದ ಇದೇ ‘CCCC’ ಕಂಪನಿಯು ಈಗಾಗಲೇ ಕೀನ್ಯಾದಲ್ಲಿ ಪ್ರಮುಖ ರೈಲ್ವೆ ಯೋಜನೆ, 60,000 ಆಸನಗಳ ಬೃಹತ್ ಕ್ರೀಡಾಂಗಣ, ಎಕ್ಸ್‌ಪ್ರೆಸ್‌ವೇ ಟೋಲ್ ರಸ್ತೆ ಮತ್ತು ದೊಡ್ಡ ಸಮಾವೇಶ ಕೇಂದ್ರವನ್ನು (Convention Center) ನಿರ್ಮಿಸಿದೆ.

ಯೋಜನೆಗೆ ಹಣಕಾಸು ಒದಗಿಸುವುದು ಹೇಗೆ?

ಕೀನ್ಯಾ ಸರ್ಕಾರವು ಈ ಯೋಜನೆಗೆ ತನ್ನ ಹೊಸ ‘ರಾಷ್ಟ್ರೀಯ ಮೂಲಸೌಕರ್ಯ ನಿಧಿ’ (National Infrastructure Fund) ಮತ್ತು ವಿಮಾನ ಪ್ರಯಾಣಿಕರ ಸೇವಾ ಶುಲ್ಕದಿಂದ (Air-passenger service charge) ಬರುವ ಆದಾಯದ ಆಧಾರದ ಮೇಲೆ ವಾಣಿಜ್ಯ ಸಾಲಗಳನ್ನು ಪಡೆದು ಹಣ ಹೂಡಿಕೆ ಮಾಡಲಿದೆ. ಯೋಜನೆಯ ಕಾಮಗಾರಿಗಳು ಇದೇ ತಿಂಗಳಿನಿಂದ ಆರಂಭವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಅನಿವಾಸಿ ಭಾರತೀಯರ FCNR-B ಠೇವಣಿಗಳಿಗೆ ಭಾರತದ ಬ್ಯಾಂಕುಗಳಿಂದ ಭರ್ಜರಿ ಬಡ್ಡಿ ಆಫರ್

ನೆರೆಯ ದೇಶಗಳಿಂದ ಕೀನ್ಯಾಗೆ ಪೈಪೋಟಿ

ಪೂರ್ವ ಆಫ್ರಿಕಾದ ಪ್ರಮುಖ ವಾಯುಯಾನ ಹಬ್ ಆಗಿರುವ ಕೀನ್ಯಾ, ನೆರೆಹೊರೆಯ ದೇಶಗಳಿಂದ ತೀವ್ರ ಪೈಪೋಟಿ ಎದುರಿಸುತ್ತಿದೆ. ಇಥಿಯೋಪಿಯಾ ದೇಶವು ಈಗಾಗಲೇ 12.5 ಬಿಲಿಯನ್ ಡಾಲರ್ ವೆಚ್ಚದ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸುತ್ತಿದ್ದರೆ, ರುವಾಂಡಾ ದೇಶವು ‘ಕತಾರ್ ಏರ್ವೇಸ್’ ಸಹಭಾಗಿತ್ವದಲ್ಲಿ ಹೊಸ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ. ಹೀಗಾಗಿ ಕೀನ್ಯಾ ತನ್ನ ಅತಿ ದೊಡ್ಡ ವಿಮಾನ ನಿಲ್ದಾಣವನ್ನು ನವೀಕರಿಸುವುದು ಬಹಳ ಅಗತ್ಯವೆನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು