AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Financial Crisis: ಕೇರಳದಲ್ಲಿ ಭಾರೀ ಹಣಕಾಸು ಬಿಕ್ಕಟ್ಟು; ಹಣಕಾಸು ಸಚಿವರು ಕೊಟ್ಟ ಕಾರಣ ಇಲ್ಲಿದೆ

ರಾಜ್ಯದ ಆರ್ಥಿಕತೆಯು ಹಿಂದೆಂದೂ ಕಂಡಿರದಂಥ ಬಿಕ್ಕಟ್ಟು ಎದುರಿಸುತ್ತಿರುವುದು ನಿಜ. ಈ ಬಿಕ್ಕಟ್ಟಿಗೆ ಕಾರಣವಾಗಿರುವ ಅಂಶವು ರಾಜ್ಯದ ನಿಯಂತ್ರಣ ವ್ಯಾಪ್ತಿಯ ಹೊರಗಿದೆ. ಇದು ವಾಸ್ತವ ಎಂದು ಅಲ್ಲಿನ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಹೇಳಿದ್ದಾರೆ.

Kerala Financial Crisis: ಕೇರಳದಲ್ಲಿ ಭಾರೀ ಹಣಕಾಸು ಬಿಕ್ಕಟ್ಟು; ಹಣಕಾಸು ಸಚಿವರು ಕೊಟ್ಟ ಕಾರಣ ಇಲ್ಲಿದೆ
ಕೆ.ಎನ್. ಬಾಲಗೋಪಾಲ್
TV9 Web
| Edited By: |

Updated on: Dec 06, 2022 | 3:23 PM

Share

ತಿರುವನಂತಪುರ: ಕೇರಳ (Kerala) ರಾಜ್ಯವು ಹಿಂದೆಂದೂ ಕಂಡಿರದಂಥ ಭಾರೀ ಹಣಕಾಸು ಬಿಕ್ಕಟ್ಟು ಎದುರಿಸುತ್ತಿದೆ ಎಂದು ಅಲ್ಲಿನ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ (KN Balagopal) ಮಂಗಳವಾರ ಹೇಳಿದ್ದಾರೆ. ಕೇರಳದ ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರದ ಅಸಮರ್ಪಕ ಹಣಕಾಸು ನೀತಿಗಳು, ಕೋವಿಡ್ ಸಾಂಕ್ರಾಮಿಕ ಮತ್ತು ನೈಸರ್ಗಿಕ ವಿಕೋಪಗಳು ಕಾರಣ. ಆದಾಗ್ಯೂ ರಾಜ್ಯ ಸರ್ಕಾರವು ಆರ್ಥಿಕ ಶಿಸ್ತು ರೂಪಿಸಲು ಸ್ಪಷ್ಟವಾದ ರೂಪುರೇಷೆ ಹೊಂದಿದೆ ಎಂದು ಅವರು ಹೇಳಿದ್ದಾರೆ. ಕೇರಳ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅವರು ಈ ಮಾಹಿತಿ ನೀಡಿದ್ದಾರೆ.

‘ರಾಜ್ಯದ ಆರ್ಥಿಕತೆಯು ಹಿಂದೆಂದೂ ಕಂಡಿರದಂಥ ಬಿಕ್ಕಟ್ಟು ಎದುರಿಸುತ್ತಿರುವುದು ನಿಜ. ಈ ಬಿಕ್ಕಟ್ಟಿಗೆ ಕಾರಣವಾಗಿರುವ ಅಂಶವು ರಾಜ್ಯದ ನಿಯಂತ್ರಣ ವ್ಯಾಪ್ತಿಯ ಹೊರಗಿದೆ. ಇದು ವಾಸ್ತವ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೇಂದ್ರದಿಂದ ದೊರೆತ ಕಂದಾಯ ಕೊರತೆ ಅನುದಾನ ಕಡಿಮೆ ಇದೆ. ಕೇಂದ್ರದಿಂದ 6,716 ಕೋಟಿ ರೂ. ಮಾತ್ರ ದೊರೆತಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?

ಸದ್ಯದ ಹಣಕಾಸು ಬಿಕ್ಕಟ್ಟಿಗೆ ರಾಜ್ಯ ಸರ್ಕಾರವು ಸಮರ್ಪಕವಾಗಿ ಹಣಕಾಸು ನಿರ್ವಹಣೆ ಮಾಡದೇ ಇರುವುದು ಕಾರಣವೇ ಎಂಬ ಪ್ರಶ್ನೆಗೆ ಸಚಿವರು ಸೂಕ್ತ ಉತ್ತರ ನೀಡಿಲ್ಲ. ನೈಸರ್ಗಿಕ ವಿಕೋಪಗಳು, ಕೋವಿಡ್ ಸಾಂಕ್ರಾಮಿಕ, ಕೇಂದ್ರ ಸರ್ಕಾರದ ಅಸಮರ್ಪಕ ನೀತಿಗಳು, ಜಿಎಸ್​ಟಿ ಪರಿಹಾರ ವಿತರಣೆ ವಿಳಂಬ ಮಾಡಿರುವುದು ರಾಜ್ಯದ ಆರ್ಥಿಕ ಬಿಕ್ಕಟ್ಟಿಗೆ ಪ್ರಮುಖ ಕಾರಣ ಎಂದು ಅವರು ಹೇಳಿದ್ದಾರೆ.

ಕಟ್ಟುನಿಟ್ಟಿನ ತೆರಿಗೆ ಸಂಗ್ರಹ, ಅನವಶ್ಯಕ ವೆಚ್ಚ ಕಡಿಮೆ ಮಾಡುವುದು, ವೆಚ್ಚ ಕಡಿತ ಹಾಗೂ ಇತರ ಕಠಿಣ ಕ್ರಮಗಳ ಮೂಲಕ ಆರ್ಥಿಕ ಬಿಕ್ಕಟ್ಟಿನಿಂದ ಹೊರಬರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಬಾಲಗೋಪಾಲ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ (ನವೆಂಬರ್ 25) ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿತ್ತು. ಒಟ್ಟು 75 ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಕೇರಳಕ್ಕೆ 713 ಕೋಟಿ ರೂ. ಜಿಎಸ್​ಟಿ ಬಾಕಿ ಪರಿಹಾರ ನೀಡಿತ್ತು. ಕೇಂದ್ರ ಸರ್ಕಾರ 2022-23ರ ಸಾಲಿನಲ್ಲಿ ಈವರೆಗೆ ಒಟ್ಟು 1,15,662 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?