AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kingfisher Airlines Case: ಕಿಂಗ್​ಫಿಷರ್ ಪ್ರಕರಣದಲ್ಲಿ 792 ಕೋಟಿ ರೂ. ಪಡೆದ ಎಸ್​ಬಿಐ ನೇತೃತ್ವದ ಒಕ್ಕೂಟ

ವಿಜಯ್ ಮಲ್ಯ ನೇತೃತ್ವದ ಕಿಂಗ್ ಫಿಷರ್ ಏರ್‌ಲೈನ್ಸ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಸ್ತಾಂತರಿಸಿದ ಷೇರುಗಳನ್ನು ಮಾರಾಟ ಮಾಡುವ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಸಾಲಗಾರರ ಒಕ್ಕೂಟವು 792 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಸೂಲು ಮಾಡಿದೆ

Kingfisher Airlines Case: ಕಿಂಗ್​ಫಿಷರ್ ಪ್ರಕರಣದಲ್ಲಿ 792 ಕೋಟಿ ರೂ. ಪಡೆದ ಎಸ್​ಬಿಐ ನೇತೃತ್ವದ ಒಕ್ಕೂಟ
ವಿಜಯ್ ಮಲ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 16, 2021 | 8:01 PM

Share

ನವದೆಹಲಿ: ಕಿಂಗ್‌ಫಿಷರ್ ಏರ್‌ಲೈನ್ಸ್ (Kingfisher Airlines) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಎನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ -ಇಡಿ) ಹಸ್ತಾಂತರಿಸಿದ ಷೇರುಗಳನ್ನು ಮಾರಾಟ ಮಾಡುವ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ನೇತೃತ್ವದ ಸಾಲಗಾರರ ಒಕ್ಕೂಟವು 792 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಸೂಲು ಮಾಡಿದೆ ಎಂದು ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಬ್ಯಾಡ್ ಲೋನ್ ವಸೂಲಿಯ ಭಾಗವಾಗಿ ಈ ನಡೆ ಇಟ್ಟಿದೆ.

ತನಿಖಾ ಸಂಸ್ಥೆಯಿಂದ ಮುಟ್ಟುಗೋಲು ಹಾಕಿಕೊಂಡ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನಲ್ಲಿನ ಷೇರುಗಳ ಮಾರಾಟದಿಂದ ಈ ಒಕ್ಕೂಟವು ಸುಮಾರು 800 ಕೋಟಿ ರೂಪಾಯಿಗಳನ್ನು ದೊರೆಯುವ ನಿರೀಕ್ಷೆಯಿದೆ ಎಂದು ಇ.ಡಿ. ಜೂನ್‌ನಲ್ಲಿ ತಿಳಿಸಿತ್ತು. ಸಾಲ ನೀಡಿದ ಸಂಸ್ಥೆಗಳು ಈ ಹಿಂದೆ ಆಸ್ತಿಗಳನ್ನು ಮಾರಾಟ ಮಾಡಿ, 7,181.5 ಕೋಟಿ ವಸೂಲಿ ಮಾಡಿದ್ದರು ಮತ್ತು ಅಕ್ರಮ ಹಣ ವರ್ಗಾವಣೆ ವಿರೋಧಿ ಕಾಯ್ದೆ ಅಡಿಯಲ್ಲಿ ಇ.ಡಿ.ಯಿಂದ ಮುಟ್ಟುಗೋಲು ಹಾಕಿಕೊಂಡ ಸ್ವತ್ತುಗಳ ಮಾರಾಟದ ಮೂಲಕ ಒಟ್ಟು 9,041.5 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆಯಿದೆ.

ದೇಶದಿಂದ ಪರಾರಿ ಆಗಿರುವ ಆರ್ಥಿಕ ಅಪರಾಧಿ ವಿಜಯ್ ಮಲ್ಯರನ್ನು ಯುಕೆಯಿಂದ ಹಸ್ತಾಂತರಿಸಲು ನರೇಂದ್ರ ಮೋದಿ ನೇತೃತ್ವದ ಆಡಳಿತವು ಎಲ್ಲ ಪ್ರಯತ್ನಗಳನ್ನು ಮಾಡುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ಆಗಿದೆ. ದೇಶಭ್ರಷ್ಟ ಆರ್ಥಿಕ ಕಾಯ್ದೆ ಅಡಿಯಲ್ಲಿ ಪರಾರಿಯಾದ ಆರ್ಥಿಕ ಅಪರಾಧಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಯಾವುದೇ ನಾಗರಿಕ ಹಕ್ಕನ್ನು ಸಮರ್ಥಿಸಿಕೊಳ್ಳಲು ಆಗದಂತೆ ಅಪರಾಧಿಯನ್ನು ನಿರಾಕರಿಸಲಾಗುವುದು.

ಜಾರಿ ನಿರ್ದೇಶನಾಲಯ ಹೇಳಿರುವ ಪ್ರಕಾರ, ಪಂಜಾಬ್ ನ್ಯಾಷನಲ್ ಬ್ಯಾಂಕ್ – ನೀರವ್ ಮೋದಿ ಪ್ರಕರಣದಲ್ಲಿ ದೇಶಭ್ರಷ್ಟ ಆರ್ಥಿಕ ಅಪರಾಧ ನ್ಯಾಯಾಲಯವು 1,060 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮಾರಾಟ ಮಾಡಲು ಬ್ಯಾಂಕ್‌ಗಳಿಗೆ ಅನುಮತಿಸಲಾಗಿದೆ ಮತ್ತು ತನಿಖಾ ಸಂಸ್ಥೆಗಳು ದೇಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯಡಿ 329.67 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಅಥವಾ ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನು ಅಡಿಯಲ್ಲಿ 18,217.27 ಕೋಟಿ ರೂಪಾಯಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ವಿಜಯ್ ಮಲ್ಯ ಆಸ್ತಿ, ಸೆಕ್ಯೂರಿಟೀಸ್ ಹರಾಜಿಗೆ ಬ್ಯಾಂಕ್​ಗಳಿಗೆ ಅನುಮತಿ ನೀಡಿದ ಪಿಎಂಎಲ್ಎ ಕೋರ್ಟ್

(SBI led consortium gets Rs 792 crore in Kingfisher Airlines case. Here is the details)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ