AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳು ಕೋಟಿಗೂ ಅಧಿಕ ರೈತರಿಗೆ ಕಿಸಾನ್ ಪೆಹಚಾನ್ ಪತ್ರ; ಏನಿದರ ವಿಶೇಷತೆ?

Kisan Pehchaan patra, multipurpose ID for farmers: ರೈತರ ರಾಷ್ಟ್ರೀಯ ನೊಂದಣಿ ರಚಿಸುತ್ತಿರುವ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕಿಸಾನ್ ಪೆಹಚಾನ್ ಕಾರ್ಡ್ ಯೋಜನೆ ಜಾರಿ ತಂದಿದೆ. ಈಗಾಗಲೇ 16 ರಾಜ್ಯಗಳಿಂದ 7.4 ಕೋಟಿ ರೈತರಿಗೆ ಪೆಹಚಾನ್ ಕಾರ್ಡ್ ವಿತರಿಸಲಾಗಿದೆ. ಮತ್ತಷ್ಟು ರಾಜ್ಯಗಳಲ್ಲಿ ಈ ಅಭಿಯಾನ ನಡೆಯುತ್ತಿದೆ. ದೇಶಾದ್ಯಂತ ಅಂದಾಜು 14 ಕೋಟಿ ರೈತರಿದ್ದಾರೆ.

ಏಳು ಕೋಟಿಗೂ ಅಧಿಕ ರೈತರಿಗೆ ಕಿಸಾನ್ ಪೆಹಚಾನ್ ಪತ್ರ; ಏನಿದರ ವಿಶೇಷತೆ?
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 10, 2025 | 12:08 PM

Share

ನವದೆಹಲಿ, ನವೆಂಬರ್ 10: ರೈತರಿಗೆ (farmer) ವಿಶೇಷ ಗುರುತಿನ ಚೀಟಿ ಕೊಡುವ ಕೇಂದ್ರ ಸರ್ಕಾರದ ಕಿಸಾನ್ ಪೆಹಚಾನ್ ಕಾರ್ಡ್ ಯೋಜನೆ (Kisan Pehchaan Patra) ಭರದಿಂದ ಸಾಗಿದೆ. ವರದಿಗಳ ಪ್ರಕಾರ 16 ರಾಜ್ಯಗಳಿಂದ 7.4 ಕೋಟಿ ರೈತರಿಗೆ ಈ ಐಡಿಯನ್ನು ನೀಡಲಾಗಿದೆ. ಈಗ ಪಂಜಾಬ್, ಹಿಮಾಚಲ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲೂ ಅಭಿಯಾನ ನಡೆಯುತ್ತಿದೆ. ಈ ಹಣಕಾಸು ವರ್ಷದೊಳಗೆ 9 ಕೋಟಿ ಕಿಸಾನ್ ಪೆಹಚಾನ್ ಕಾರ್ಡ್ ವಿತರಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ದೇಶಾದ್ಯಂತ ಒಂದು ಅಂದಾಜು ಪ್ರಕಾರ 14 ಕೋಟಿ ರೈತರಿದ್ದಾರೆ. ಇವರ ಪೈಕಿ ಶೇ. 30-40ರಷ್ಟು ಮಂದಿಗೆ ಸ್ವಂತ ಜಮೀನು ಇಲ್ಲ. ಇವರು ಗುತ್ತಿಗೆ ಪಡೆದು ಕೃಷಿಗಾರಿಕೆ ಮಾಡುತ್ತಿದ್ದಾರೆ. ಸ್ವಂತ ಜಮೀನು ಹೊಂದಿರುವ ರೈತರಿಗೆ ಪೆಹಚಾನ್ ಕಾರ್ಡ್ ಕೊಡಲಾಗುತ್ತದೆ.

ಇದನ್ನೂ ಓದಿ: ನಿರೀಕ್ಷೆಮೀರಿಸುತ್ತದಾ ಭಾರತದ ಈ ವರ್ಷದ ಆರ್ಥಿಕ ಬೆಳವಣಿಗೆ?; ವಿ ಅನಂತನಾಗೇಶ್ವರನ್ ವಿಶ್ವಾಸ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ 11.2 ಕೋಟಿ ಮಂದಿ ನೊಂದಾಯಿಸಿಕೊಂಡಿದ್ದಾರೆ. ಇವರೆಲ್ಲರೂ ಕೂಡ ಕಿಸಾನ್ ಪೆಹಚಾನ್ ಕಾರ್ಡ್​ಗಳನ್ನು ಪಡೆಯಲು ಅರ್ಹರಾಗಿರಬಹುದು. 2026-27ರ ವರ್ಷದೊಳಗೆ 11 ಕೋಟಿ ಕಿಸಾನ್ ಪೆಹಚಾನ್ ಕಾರ್ಡ್ ವಿತರಿಸುವ ಗುರಿ ಇಡಲಾಗಿದೆ.

ಕಿಸಾನ್ ಪೆಹಚಾನ್ ಕಾರ್ಡ್ ಮೂಲಕ ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ರೈತರ ಡಿಜಿಟಲ್ ರಿಜಿಸ್ಟ್ರಿಯನ್ನು ಸ್ಥಾಪಿಸುವ ಉದ್ದೇಶ ಹೊಂದಿದೆ. ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಅಡಿಯಲ್ಲಿ ಈ ಹೆಜ್ಜೆ ಇಡಲಾಗುತ್ತಿದೆ. ಈ ಡಿಜಿಟಲ್ ಅಗ್ರಿಕಲ್ಚರ್ ಮಿಷನ್ ಅಡಿಯಲ್ಲಿ ರೈತರಿಗೆ ಹಲವ ಯೋಜನೆಗಳನ್ನು ವಿತರಿಸಲು ಅನುಕೂಲವಾಗುತ್ತದೆ. ಹೀಗಾಗಿ, ರೈತರನ್ನು ಗುರುತಿಸಿ ಕಿಸಾನ್ ಪೆಹಚಾನ್ ಕಾರ್ಡ್​ಗಳನ್ನು ವಿತರಿಸುವುದು ಬಹಳ ಮುಖ್ಯ ಹೆಜ್ಜೆ ಎನ್ನಲಾಗಿದೆ. ಪಿಎಂ ಕಿಸಾನ್ ಸೇರಿದಂತೆ ರೈತರಿಗೆ ಸರ್ಕಾರ ರೂಪಿಸುವ ವಿವಿಧ ಯೋಜನೆಗಳಿಗೆ ಈ ಕಾರ್ಡ್ ಮುಖ್ಯ ದಾಖಲೆಯಾಗಿ ಅಥವಾ ಆಧಾರವಾಗಿ ಇರುತ್ತದೆ.

ಇದನ್ನೂ ಓದಿ: ಸ್ಕ್ರ್ಯಾಪ್​ಗಳನ್ನು ಮಾರಿ ಒಂದೇ ತಿಂಗಳಲ್ಲಿ 800 ಕೋಟಿ ರೂ ಗಳಿಸಿದ ಸರ್ಕಾರ; 4 ವರ್ಷದಲ್ಲಿ ಬಂದ ಆದಾಯ 4,000 ಕೋಟಿ ರೂಗೂ ಹೆಚ್ಚು

ಅತಿಹೆಚ್ಚು ರೈತರಿಗೆ ಈ ಗುರುತಿನ ಕಾರ್ಡ್ ವಿತರಿಸಿರುವುದು ಉತ್ತರ ಪ್ರದೇಶ ರಾಜ್ಯ. ಇಲ್ಲಿ 1.56 ಕೋಟಿ ರೈತರಿಗೆ ಪೆಹಚಾನ್ ಕಾರ್ಡ್ ಕೊಡಲಾಗಿದೆ. ಮಹಾರಾಷ್ಟ್ರದಲ್ಲೂ ಕೋಟಿಗಿಂತ ಹೆಚ್ಚು ರೈತರಿಗೆ ಕಾರ್ಡ್ ಕೊಡಲಾಗಿದೆ. ಮಧ್ಯಪ್ರದೇಶ ರಾಜಸ್ಥಾನ್, ಗುಜರಾತ್, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲೂ ಸಾಕಷ್ಟು ಪೆಹಚಾನ್ ಕಾರ್ಡ್​ಗಳನ್ನು ವಿತರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ