AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧರಿಗೆ ಬಿಜೆಪಿಯಿಂದ ಉಚಿತ ಆರೋಗ್ಯ ವಿಮೆ ಭರವಸೆ; ಏನಿದು ಆಯುಷ್ಮಾನ್ ಭಾರತ್ ಸ್ಕೀಮ್?

Ayushman Bharat scheme details: ಆಡಳಿತಾರೂಢ ಬಿಜೆಪಿ ಪಕ್ಷ ಈ ಬಾರಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಹಲವು ಭರವಸೆಗಳಲ್ಲಿ 70 ವರ್ಷದ ವೃದ್ಧರನ್ನು ಆಯುಷ್ಮಾನ್ ಭಾರತ್ ಸ್ಕೀಮ್ ವ್ಯಾಪ್ತಿಗೆ ತರುವುದು ಒಂದು. 2018ರಲ್ಲಿ ಕೇಂದ್ರ ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಸದ್ಯಕ್ಕೆ ಎಸ್ಸಿ ಎಸ್ಟಿ ಸಮುದಾಯ ಮತ್ತು ಬಡವರಿಗೆ ಮಾತ್ರ ಉಚಿತ ಆರೋಗ್ಯ ವಿಮೆ ಇದೆ. ಒಂದು ಕುಟುಂಬದಲ್ಲಿ ಎಷ್ಟೇ ಜನರಿದ್ದರೂ ವರ್ಷಕ್ಕೆ ಒಟ್ಟು 5 ಲಕ್ಷ ರೂವರೆಗೆ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಫರ್ಟಿಲಿಟಿ, ಏಡ್ಸ್ ಇತ್ಯಾದಿ ಕೆಲ ರೋಗ ಹೊರತುಪಡಿಸಿ ಬಹುತೇಕ ಎಲ್ಲಾ ಕಾಯಿಲೆಗಳಿಗೂ ವಿಮಾ ಕವರೇಜ್ ಇರುತ್ತದೆ.

ವೃದ್ಧರಿಗೆ ಬಿಜೆಪಿಯಿಂದ ಉಚಿತ ಆರೋಗ್ಯ ವಿಮೆ ಭರವಸೆ; ಏನಿದು ಆಯುಷ್ಮಾನ್ ಭಾರತ್ ಸ್ಕೀಮ್?
ಆಯುಷ್ಮಾನ್ ಭಾರತ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 14, 2024 | 12:47 PM

Share

ಲೈಂಗಿಕ ಅಲ್ಪಸಂಖ್ಯಾತರು ಮತ್ತು ಎಪ್ಪತ್ತು ವರ್ಷ ವಯಸ್ಸು ದಾಟಿದ ಪ್ರತಿಯೊಬ್ಬ ವ್ಯಕ್ತಿಯನ್ನೂ ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ತರುವುದಾಗಿ ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ (BJP election manifesto) ಭರವಸೆ ನೀಡಿದೆ. ಆಯುಷ್ಮಾನ್ ಭಾರತ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಕೀಮ್​ಗಳಲ್ಲಿ ಒಂದಾಗಿದೆ. ಸದ್ಯಕ್ಕೆ ಇದು ಬಡವರು ಮತ್ತು ಎಸ್​ಸಿ ಎಸ್​ಟಿ ಜನರಿಗೆ ಲಭ್ಯ ಇರುವ ಸ್ಕೀಮ್ ಆಗಿದೆ. ಈಗ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ 70 ವರ್ಷ ವಯಸ್ಸಿನ ಎಲ್ಲಾ ಜನರಿಗೂ ಯೋಜನೆಯ (Ayushman Bharat scheme) ಲಾಭ ನೀಡಲಾಗುತ್ತದೆ ಎಂದು ಭರವಸೆ ನೀಡಿದೆ.

ಏನಿದು ಆಯುಷ್ಮಾನ್ ಭಾರತ್ ಯೋಜನೆ?

2018ರ ಸೆಪ್ಟಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಅರಂಭಿಸಿದ ಯೋಜನೆ ಇದು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ವರ್ಷಕ್ಕೆ ಐದು ಲಕ್ಷ ರೂವರಗೆ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ. ಇದರ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 60:40 ಅನುಪಾತದಲ್ಲಿ ಭರಿಸಲಿವೆ. ಅಂದರೆ, ಕೇಂದ್ರ ಸರ್ಕಾರ ಶೇ. 60ರಷ್ಟು ವೆಚ್ಚ ಭರಿಸಿದರೆ, ರಾಜ್ಯ ಸರ್ಕಾರಗಳು ಶೇ. 40ರಷ್ಟು ಚಿಕಿತ್ಸಾ ವೆಚ್ಚ ನೋಡಿಕೊಳ್ಳುತ್ತವೆ.

ಇದನ್ನೂ ಓದಿ: ವೃದ್ಧರಿಗೆ ಉಚಿತ ಚಿಕಿತ್ಸೆ, ಬಡವರಿಗೆ ಉಚಿತ ಪಡಿತರ, ಬಿಜೆಪಿ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳಿವು

ಒಂದು ಕುಟುಂಬದಲ್ಲಿ ಫಲಾನುಭವಿಗಳಿಗೆ ಮಿರಿ ಇರುವುದಿಲ್ಲ. ಎಷ್ಟು ಜನರಿದ್ದರೂ, ಯಾವುದೇ ವಯಸ್ಸಿನವರಿದ್ದರೂ ಅವರೆಲ್ಲರಿಗೂ ಕವರೇಜ್ ಇರುತ್ತದೆ. ಆದರೆ ಕುಟುಂಬ ಸದಸ್ಯರು ಇಬ್ಬರಿರಲಿ ಅಥವಾ ಹತ್ತು ಇರಲಿ, ಕವರೇಜ್ ಮಿತಿ ವರ್ಷಕ್ಕೆ 5 ಲಕ್ಷ ರೂ ಮಾತ್ರವೇ ಇರುತ್ತದೆ.

ಬಹಳಷ್ಟು ಹೆಲ್ತ್ ಇನ್ಷೂರೆನ್ಸ್ ಕಂಪನಿಗಳು ಮೊದಲೇ ರೋಗಗಳಿದ್ದಲ್ಲಿ ಅಂಥವರಿಗೆ ಇನ್ಷೂರೆನ್ಸ್ ಕೊಡುವುದಿಲ್ಲ. ಆಯುಷ್ಮಾನ್ ಭಾರತ್​ನಲ್ಲಿ ಇವರಿಗೆ ಕವರೇಜ್ ಇರುತ್ತದೆ.

ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರವಲ್ಲ, ಖಾಸಗಿ ಆಸ್ಪತ್ರೆಗಳಲ್ಲೂ ದಾಖಲಾಗಿ ಚಿಕಿತ್ಸೆ ಪಡೆಯಬಹುದು. ಕ್ಯಾಷ್​ಲೆಸ್ ಟ್ರೀಟ್ಮೆಂಟ್ ಪಡೆಯಬಹುದು. ಕ್ಯಾನ್ಸರ್ ರೋಗ, ಕಿಡ್ನಿ, ಹೃದಯ ರೋಗ, ಸುಟ್ಟಗಾಯ ಇತ್ಯಾದಿ ರೋಗಗಳಿಗೆ ಚಿಕಿತ್ಸಾ ಕವರೇಜ್ ಇರುತ್ತದೆ.

ಇದನ್ನೂ ಓದಿ: ಅಶ್ನೀರ್ ಗ್ರೋವರ್​ರಿಂದ ಹೊಸ ಸ್ಟಾರ್ಟಪ್; ಆಸ್ಪತ್ರೆ ಚಿಕಿತ್ಸೆಗೆ ಸಾಲ ಕೊಡುವ ಝೀರೋ ಪೇ; ಹೇಗೆ ಪಡೆಯುವುದು ಈ ಪ್ರೀ ಅಪ್ರೂವ್ಡ್ ಲೋನ್?

ಈ ರೋಗಗಳಿಗೆ ಆಯುಷ್ಮಾನ್ ಭಾರತ್​ನಲ್ಲಿ ಕವರೇಜ್ ಇರುವುದಿಲ್ಲ

  • ಒಪಿಡಿ ಚಿಕಿತ್ಸೆ (ಔಟ್​ಪೇಶೆಂಟ್ ಡಿಪಾರ್ಟ್ಮೆಂಟ್)
  • ಐವಿಎಫ್ ಇತ್ಯಾದಿ ಫರ್ಟಿಲಿಟಿ ಟ್ರೀಟ್ಮೆಂಟ್
  • ಕಾಸ್ಮೆಟಿಕ್ ಸರ್ಜರಿ
  • ದಂತ್ಯ ಚಿಕಿತ್ಸೆ
  • ಎಚ್​ಐವಿ ಚಿಕಿತ್ಸೆ
  • ಡ್ರಗ್ ಮತ್ತು ಮದ್ಯ ವ್ಯಸನಿಗಳ ಚಿಕಿತ್ಸೆ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ