ಚಂದ್ರಯಾನ ಯೋಜನೆಗೆ ಕೈಜೋಡಿಸಿದ ದಕ್ಷಿಣ ಭಾರತೀಯ ಸಂಸ್ಥೆಗಳು; ಇವುಗಳ ಕೊಡುಗೆ ಏನು, ಇಲ್ಲಿದೆ ವಿವರ

South Indian Companies Role In Chandrayaan-3 Success ಎಚ್​ಎಎಲ್, ಮಿಧಾನಿ ಸೇರಿದಂತೆ ದಕ್ಷಿಣ ಭಾರತದ ಕೆಲ ಸಂಸ್ಥೆಗಳು ಚಂದ್ರಯಾನ ಯೋಜನೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ಹೊಂದಿವೆ. ರಾಕೆಟ್ ನಿರ್ಮಾಣದಿಂದ ಹಿಡಿದು ಪ್ರಮುಖ ಬಿಡಿಭಾಗಗಳನ್ನು ಈ ಸಂಸ್ಥೆಗಳು ಇಸ್ರೋಗೆ ಪೂರೈಕೆ ಮಾಡಿವೆ.

ಚಂದ್ರಯಾನ ಯೋಜನೆಗೆ ಕೈಜೋಡಿಸಿದ ದಕ್ಷಿಣ ಭಾರತೀಯ ಸಂಸ್ಥೆಗಳು; ಇವುಗಳ ಕೊಡುಗೆ ಏನು, ಇಲ್ಲಿದೆ ವಿವರ
ಚಂದ್ರಯಾನ-3 ಯೋಜನೆ
Follow us
|

Updated on: Aug 23, 2023 | 7:19 PM

ಬೆಂಗಳೂರು, ಆಗಸ್ಟ್ 23: ಇಸ್ರೋ ನಿರ್ಮಿಸಿ ಕಳುಹಿಸಿದ ಚಂದ್ರಯಾನ-3 (Chandrayaan) ನೌಕೆ ಚಂದ್ರನ ದಕ್ಷಿಣ ಧ್ರುವದ ನೆಲದ ಮೇಲೆ ಯಶಸ್ವಿಯಾಗಿ ಇಳಿದಿದೆ. ಭಾರತದಿಂದ ಅನ್ಯಗ್ರಹದ ಮೇಲೆ ನೌಕೆ ಇಳಿಸಲಾಗಿದ್ದು ಇದೇ ಮೊದಲು. ಚಂದ್ರನ ದಕ್ಷಿಣ ಧ್ರುವದಲ್ಲಿ (Lunar South Pole) ನೌಕೆ ಇಳಿಸಿದ ಮೊದಲ ದೇಶ ಭಾರತ. ಬಹಳ ಕಡಿಮೆ ಬಜೆಟ್​ನಲ್ಲಿ ನಿರ್ಮಾಣಗೊಂಡು ಸುದೀರ್ಘ 41 ದಿನಗಳ ಕಾಲ ಆಗಸದಲ್ಲಿ ಪ್ರಯಾಣಿಸಿ ಚಂದ್ರನನ್ನು ಸ್ಪರ್ಧಿಸಿದೆ ಭಾರತದ ನೌಕೆ. ಈ ಮಹತ್ವದ ಸಾಧನೆಗೆ ಇಸ್ರೋ ಜೊತೆ ಹಲವು ಸಂಸ್ಥೆಗಳ ಸಹಕಾರ ಮತ್ತು ಕೊಡುಗೆ ಇದೆ. ಅದರಲ್ಲೂ ದಕ್ಷಿಣ ಭಾರತದ ಕೆಲ ಸಂಸ್ಥೆಗಳು ಚಂದ್ರಯಾನ ಯೋಜನೆಗೆ ಮಹತ್ವದ ಕೊಡುಗೆ ನೀಡಿವೆ.

ಎಚ್​ಎಎಲ್​ನಿಂದ ಪಿಎಸ್​ಎಲ್​ವಿ ರಾಕೆಟ್ ನಿರ್ಮಾಣ

1940ರಲ್ಲಿ ಶುರುವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ (ಎಚ್​ಎಎಲ್) ಸಂಸ್ಥೆ ಚಂದ್ರಯಾನ-3 ಯೋಜನೆಯಲ್ಲಿ ಮಹತ್ವದ ಪಾತ್ರ ಹೊಂದಿದೆ. ಯುದ್ಧವಿಮಾನಗಳನ್ನು ತಯಾರಿಸುವಲ್ಲಿ ಕೌಶಲ್ಯ ಹೊಂದಿರುವ ಎಚ್​ಎಎಲ್ ಸಂಸ್ಥೆ ಚಂದ್ರಯಾನ ನೌಕೆಯನ್ನು ಹೊತ್ತುಹೋದ ಪಿಎಸ್​ಎಲ್​ವಿ ರಾಕೆಟ್ ನಿರ್ಮಾಣದ ಪಾತ್ರ ಹೊಂದಿದೆ. ಎಂಜಿನಿಯರಿಂಗ್ ಸಂಸ್ಥೆ ಎಲ್ ಅಂಡ್ ಟಿ ಜೊತೆ ಸೇರಿ ಎಚ್​ಎಎಲ್ ಸಂಸ್ಥೆ ಪಿಎಸ್​ಎಲ್​ವಿ ರಾಕೆಟ್​ಗಳನ್ನು ತಯಾರಿಸುತ್ತದೆ.

ಇದನ್ನೂ ಓದಿ: ಭಾರತದ ಚಂದ್ರಯಾನ ಯೋಜನೆ ಬಗ್ಗೆ ವಿಶ್ವಶ್ರೀಮಂತ ಇಲಾನ್ ಮಸ್ಕ್ ಪ್ರತಿಕ್ರಿಯೆ ವಿಶೇಷವಾದುದು

ಸೆಂಟಮ್ ಎಲೆಕ್ಟ್ರಾನಿಕ್ಸ್​ನಿಂದ 300ಕ್ಕೂ ಹೆಚ್ಚು ಬಿಡಿಭಾಗಗಳ ಸರಬರಾಜು

ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಚಂದ್ರಯಾನ-3 ಯೋಜನೆಗೆ 300ಕ್ಕೂ ಹೆಚ್ಚು ಪ್ರಮುಖ ಬಿಡಿಭಾಗಗಳನ್ನು ಸರಬರಾಜು ಮಾಡಿದೆ. 1994ರಲ್ಲಿ ಸ್ಥಾಪನೆಯಾದ ಸೆಂಟಮ್ ಎಲೆಕ್ಟ್ರಾನಿಕ್ಸ್ ಮೈಕ್ರೋ ಎಲೆಕ್ಟ್ರಾನಿಕ್ಸ್ ಮತ್ತು ಸಬ್​ಸಿಸ್ಟಂನಗಳ ಡಿಸೈನ್ ಮತ್ತು ತಯಾರಿಕಾ ಕ್ಷೇತ್ರದಲ್ಲಿ ಪರಿಣಿತಿ ಹೊಂದಿದೆ.

ಮಿಧಾನಿಯಿಂದ ಟೈಟೇನಿಯಮ್ ಅಲಾಯ್

ಮಿಧಾನಿ (Midhani) ಎಂದೇ ಪರಿಚಿತವಾಗಿರುವ ಹೈದರಾಬಾದ್​ನ ಮಿಶ್ರಾ ಧಾತು ನಿಗಮ್ ಲಿ ಸಂಸ್ಥೆ ಚಂದ್ರಯಾನದ ಲ್ಯಾಂಡರ್ ಮತ್ತು ರೋವರ್ ತಯಾರಿಕೆಗೆ ಟೈಟೇನಿಯಮ್ ಅಲಾಯ್​ಗಳನ್ನು ಪೂರೈಸಿದೆ. ಚಂದ್ರಯಾನದ ವೇಳೆ ಎದುರಾಗುವ ಹವಾಮಾನ ವೈಪರೀತ್ಯಗಳನ್ನು ತಾಳಿಕೊಳ್ಳಲು ಈ ಟೈಟೇನಿಯಮ್ ಲೋಹಗಳು ಬಹಳ ಮುಖ್ಯ.

ಇದನ್ನೂ ಓದಿ: Chandrayaan-3: ಯೂಟ್ಯೂಬ್​ನಲ್ಲಿ ದಾಖಲೆ ಧೂಳೀಪಟ; ಇಲ್ಲಿದೆ ಅತಿಹೆಚ್ಚು ನೇರ ವೀಕ್ಷಣೆ ಕಂಡ ಘಟನೆಗಳ ಪಟ್ಟಿ; ಚಂದ್ರಯಾನ ಯಶಸ್ಸು ಕಂಡು ರೋಮಾಂಚಿತಗೊಂಡ ವೀಕ್ಷಕರು

ಎಂಟಿಎಆರ್ ಟೆಕ್ನಾಲಜೀಸ್

ಹೈದರಾಬಾದ್​ನ ಎಂಟಿಎಆರ್ ಟೆಕ್ನಾಲಜೀಸ್ ಸಂಸ್ಥೆ ಪ್ರಿಸಿಶನ್ ಎಂಜಿನಿಯರಿಂಗ್​ನಲ್ಲಿ ನಿಷ್ಣಾತಿ ಹೊಂದಿದೆ. ಚಂದ್ರಯಾನ ಯೋಜನೆಗೆ ಬೇಕಾದ ಕೆಲ ಪ್ರಮುಖ ಭಾಗಗಳನ್ನು ಎಂಟಿಎಆರ್ ತಯಾರಿಸಿ ಕೊಟ್ಟಿದೆ.

ಖಾಸಗಿ ಮತ್ತು ಸರ್ಕಾರಿ ಸ್ವಾಮ್ಯದ ಹಲವು ಕಂಪನಿಗಳು ಇಸ್ರೋದ ಚಂದ್ರಯಾನಕ್ಕೆ ಕೊಡುಗೆ ನೀಡಿವೆ. ಇದರೊಂದಿಗೆ ಭಾರತದಲ್ಲಿ ಆರೋಗ್ಯಯುತವಾದ ಬಾಹ್ಯಾಕಾಶ ಯೋಜನೆಗಳ ಪರಿಸರ ನಿರ್ಮಾಣವಾದಂತಾಗಿದೆ. ಈಗಾಗಲೇ ಬಹಳಷ್ಟು ಖಾಸಗಿ ಕಂಪನಿಗಳು ಬಾಹ್ಯಾಕಾಶ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?