AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

For Farmers: ರೈತರ ಆದಾಯ ಹೆಚ್ಚಿಸಲು ಸರ್ಕಾರ ಕೈಗೊಂಡ 9 ಯೋಜನೆಗಳಿವು…

Central Govt schemes for farmers: ರೈತರ ಆದಾಯ ದ್ವಿಗುಣಗೊಳ್ಳದಿದ್ದರೂ ಅವರ ಆದಾಯ ಹೆಚ್ಚಿಸಲು ಪ್ರಯತ್ನವಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ನಡೆಸುತ್ತಿದೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪಿಎಂ ಫಸಲ್ ಬಿಮಾ ಯೋಜನೆ, ಪಿಎಂ ಕೃಷಿ ಸಿಂಚಯ್ ಯೋಜನೆ ಮೊದಲಾದವು ಇವೆ. ಆಗ್ರಿ ಇನ್​ಫ್ರಾಸ್ಟ್ರಕ್ಚರ್ ಫಂಡ್, ರೈತ ಉತ್ಪಾದಕರ ಸಂಘಗಳು, ಡ್ರೋನ್ ತಂತ್ರಜ್ಞಾನ ಬಳಕೆ ಇತ್ಯಾದಿ ಯೋಜನೆಗಳು ಕೃಷಿ ಕ್ಷೇತ್ರಕ್ಕೆ ಪುಷ್ಟಿ ತರಬಹುದು.

For Farmers: ರೈತರ ಆದಾಯ ಹೆಚ್ಚಿಸಲು ಸರ್ಕಾರ ಕೈಗೊಂಡ 9 ಯೋಜನೆಗಳಿವು...
ಕೃಷಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 13, 2024 | 5:07 PM

Share

ನವದೆಹಲಿ, ಫೆಬ್ರುವರಿ 13: ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಜನತೆಗೆ ನೀಡಿದ ಭರವಸೆಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದು ಒಂದು. ರೈತರ ಆದಾಯ (farmers income) ಬೆಳೆದಿದೆಯಾದರೂ ದ್ವಿಗುಣಗೊಂಡಿಲ್ಲ ಎನ್ನುವುದು ವಾಸ್ತವ. ಆದರೆ, ಕೃಷಿ ಕ್ಷೇತ್ರ ಹಾಗೂ ರೈತರಿಗೆ ಉತ್ತೇಜನ ಕೊಡಲು ಸರ್ಕಾರದಿಂದ ಪ್ರಯತ್ನಗಳಂತೂ ನಡೆದಿವೆ. ಹೊಸ ತಂತ್ರಜ್ಞಾನ ಮತ್ತು ಬಂಡವಾಳ ಕೃಷಿ ಕ್ಷೇತ್ರಕ್ಕೆ ಹರಿದುಬರುವಂತೆ ಮಾಡಲಾಗುತ್ತಿದೆ. ಖಾಸಗಿ ವಲಯ ಈ ಕ್ಷೇತ್ರದಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳುತ್ತಿದೆ.

ಕೃಷಿ ಕ್ಷೇತ್ರಕ್ಕೆ ಪುಷ್ಟಿ ಕೊಡಲು ಮತ್ತು ರೈತರ ಆದಾಯ ಹೆಚ್ಚಿಸಲು ನೆರವಾಗುವಂತಹ ಕೆಲ ಯೋಜನೆಗಳನ್ನು ಸರ್ಕಾರ ಕೈಗೊಂಡಿದೆ. ಇಂಥ ಯೋಜನೆಗಳ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರ ರೈತರಿಗಾಗಿ ಕೈಗೊಂಡಿರುವ ಯೋಜನೆಗಳಿವು

  • ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಜಮೀನು ಹೊಂದಿರುವ ಪ್ರತಿಯೊಬ್ಬ ರೈತರಿಗೂ ಸರ್ಕಾರ ವರ್ಷಕ್ಕೆ 6,000 ರೂ ಧನಸಹಾಯ ನೀಡುತ್ತದೆ.
  • ಬೆಳೆ ವಿಮೆ ಯೋಜನೆ: ಪಿಎಂ ಫಸಲ್ ಬಿಮಾ ಯೋಜನೆ ಮೂಲಕ ರೈತರ ಬೆಳೆಗೆ ಬಹಳ ಕಡಿಮೆ ದರದಲ್ಲಿ ಬೆಳೆ ವಿಮೆಯ ಸೇವೆ ಒದಗಿಸಲಾಗುತ್ತಿದೆ.
  • ನೀರಾವರಿ ಯೋಜನೆ: ಪಿಎಂ ಕೃಷಿ ಸಂಚಯ ಯೋಜನೆ (ಪಿಎಂ ಕೆಎಸ್​ವೈ) ಅಡಿಯಲ್ಲಿ ರೈತರಿಗೆ ನೀರಾವರಿ ಸೌಲಭ್ಯ ನೀಡಲಾಗುತ್ತದೆ.

ಇದನ್ನೂ ಓದಿ: ಸೂರ್ಯೋದಯ ಸ್ಕೀಮ್: ಮನೆಯಲ್ಲಿ ಸೌರ ವಿದ್ಯುತ್ ವ್ಯವಸ್ಥೆ ತರಲು ಎಷ್ಟು ವೆಚ್ಚವಾಗುತ್ತೆ? ಇಲ್ಲಿದೆ ಡೀಟೇಲ್ಸ್

  • ಸೌಕರ್ಯ ಅಭಿವೃದ್ಧಿ: ಒಂದು ಲಕ್ಷ ಕೋಟಿ ರೂ ಮೊತ್ತದ ಕೃಷಿ ಇನ್​ಫ್ರಾಸ್ಟ್ರಕ್ಚರ್ ಫಂಡ್ ಮೂಲಕ ಮೂಲಸೌಕರ್ಯ ಬಲಪಡಿಸಲಾಗುತ್ತಿದೆ.
  • ಕ್ರೆಡಿಟ್ ಕಾರ್ಡ್: ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಸಾಲ ಸೌಲಭ್ಯ
  • ರೈತ ಉತ್ಪಾದಕರ ಸಂಘಟನೆ: ದೇಶಾದ್ಯಂತ ಹತ್ತು ಸಾವಿರ ಎಫ್​ಪಿಒಗಳ (fpo) ಮೂಲಕ ರೈತರನ್ನು ಆರ್ಥಿಕವಾಗಿ ಬಲಪಡಿಸುವ ಮತ್ತು ಮಾರುಕಟ್ಟೆ ಬೆಳೆಸುವ ಆಶಯ ಇದೆ.
  • ಸುಸ್ಥಿರ ಕೃಷಿ: ರಾಷ್ಟ್ರೀಯ ಸುಸ್ಥಿರ ಕೃಷಿಗಾರಿಕೆ ಯೋಜನೆ ಮೂಲಕ ಬದಲಾದ ಹವಾಮಾನಕ್ಕೆ ತಕ್ಕಂತೆ ಕೃಷಿ ಕ್ಷೇತ್ರದಲ್ಲಿ ತಂತ್ರಗಾರಿಕೆ ರೂಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ.
  • ಡ್ರೋನ್ ಬಳಕೆ: ಕೃಷಿ ಕ್ಷೇತ್ರದಲ್ಲಿ ಡ್ರೋನ್ ತಂತ್ರಜ್ಞಾನದ ಬಳಕೆ ಮಾಡಲು ಸರ್ಕಾರ ಗಮನ ಕೊಡುತ್ತಿದೆ. ಇದು ಈ ಕ್ಷೇತ್ರದಲ್ಲಿ ದೊಡ್ಡ ಪರಿವರ್ತನೆ ತರುವ ನಿರೀಕ್ಷೆ ಇದೆ.
  • ಜೇನು ಸಾಕಾಣಿಕೆ ಯೋಜನೆ, ರಾಷ್ಟ್ರೀಯ ಗೋಕುಲ ಯೋಜನೆ, ನೀಲಿ ಕ್ರಾಂತಿ, ಬಡ್ಡಿ ಸಬ್ಸಿಡಿ ಯೋಜನೆ, ಕೃಷಿ ಅರಣ್ಯಗಾರಿಕೆ, ಬಿದಿರು ಮರುರಚನೆ ಯೋಜನೆ, ಜಲಾನಯನ ಅಭಿವೃದ್ಧಿ ಯೋಜನೆ ಇತ್ಯಾದಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ