AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್​ನಲ್ಲಿನ ಬದಲಾವಣೆಗಳು; ನಿಯಮ, ಜಿಎಸ್​ಟಿ, ಗಡುವು, ಬೆಲೆ ವ್ಯತ್ಯಯಗಳ್ಯಾವುವು? ಇಲ್ಲಿದೆ ಪಟ್ಟಿ

August 1 Rule Changes: ಆಗಸ್ಟ್ ತಿಂಗಳಲ್ಲಿ ವಾಣಿಜ್ಯಾತ್ಮಕವಾಗಿ ಕೆಲವಿಷ್ಟು ಬದಲಾವಣೆಗಳಾಗುತ್ತಿದೆ. ಜಿಎಸ್​ಟಿಯಲ್ಲಿ ಎಲೆಕ್ಟ್ರಾನಿಕ್ ಇನ್ವಾಯ್ಸ್​ಗಳನ್ನು ಒದಗಿಸುವುದು, ಐಟಿ ರಿಟರ್ನ್ ಸಲ್ಲಿಕೆ ವಿಳಂಬವಾದರೆ ದಂಡ ಕಟ್ಟುವುದು, ಬ್ಯಾಂಕ್ ರಜಾ ದಿನಗಳು ಇತ್ಯಾದಿ ವಿವರ ಇಲ್ಲಿದೆ.

ಆಗಸ್ಟ್​ನಲ್ಲಿನ ಬದಲಾವಣೆಗಳು; ನಿಯಮ, ಜಿಎಸ್​ಟಿ, ಗಡುವು, ಬೆಲೆ ವ್ಯತ್ಯಯಗಳ್ಯಾವುವು? ಇಲ್ಲಿದೆ ಪಟ್ಟಿ
ಆಗಸ್ಟ್ ತಿಂಗಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 01, 2023 | 10:29 AM

Share

ಬೆಂಗಳೂರು, ಆಗಸ್ಟ್ 01: ಜುಲೈ ಕಳೆದು ಆಗಸ್ಟ್ ತಿಂಗಳು ಬಂದಿದೆ. ಯಾವುದೇ ತಿಂಗಳಾದರೂ ಮುಂಗಡವಾಗಿ ಪ್ಲಾನ್ (Planning For August) ಮಾಡಲು ಬಹಳ ಮಂದಿ ಮುಂದಾಗುತ್ತಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಏನೇನು ಬದಲಾವಣೆಗಳಾಗಿವೆ? ಯಾವ್ಯಾವ ಪ್ರಮುಖ ಬೆಲೆಗಳಲ್ಲಿ ವ್ಯತ್ಯಯಗಳಾಗಿವೆ ಎಂಬುದನ್ನು ಮೊದಲೇ ತಿಳಿದಿರುವುದು ಉತ್ತಮ. ಅನಿಲ ದರಗಳ ಏರಿಕೆ, ಜಿಎಸ್​ಟಿ ನಿಯಮದಲ್ಲಿ ಬದಲಾವಣೆ ಇತ್ಯಾದಿ ಆಗಿವೆ. ಬ್ಯಾಂಕ್​ಗಳ ರಜಾಪಟ್ಟಿಯನ್ನೂ ತಿಳಿದಿರುವುದು ಉತ್ತಮ. ಈ ಬಗ್ಗೆ ಒಂದು ವರದಿ.

ಐಟಿ ರಿಟರ್ನ್ ಫೈಲಿಂಗ್, ಮುಂದೇನು?

ಐಟಿ ರಿಟರ್ನ್ ಸಲ್ಲಿಸಲು ನಿನ್ನೆ, ಜುಲೈ 31ಕ್ಕೆ ಕೊನೆಯ ದಿನವಾಗಿತ್ತು. ಆಗಸ್ಟ್ 1ರಿಂದ ನೀವು ಐಟಿಆರ್ ಫೈಲ್ ಮಾಡಬಹುದಾದರೂ ದಂಡ ಪಾವತಿಸಬೇಕಾಗುತ್ತದೆ. ನಿಯಮದ ಪ್ರಕಾರ, ನಿಮ್ಮ ವಾರ್ಷಿಕ ಆದಾಯ 5 ಲಕ್ಷ ರೂಗಿಂತ ಹೆಚ್ಚು ಇದ್ದು, ನೀವು ತಡವಾಗಿ ಐಟಿಆರ್ ಸಲ್ಲಿಸಿದರೆ ಆಗ ಕಟ್ಟಬೇಕಾದ ದಂಡದ ಮೊತ್ತ 5,000 ರೂ.

ಜಿಎಸ್​ಟಿ ನಿಯಮವೊಂದರಲ್ಲಿ ಬದಲಾವಣೆ

5 ಕೋಟಿಗೂ ಹೆಚ್ಚು ವ್ಯವಹಾರ ಇರುವ ಕಂಪನಿಗಳು ಆಗಸ್ಟ್ 1ರಿಂದ ಎಲೆಕ್ಟ್ರಾನಿಕ್ ಇನ್ವಾಯ್ಸ್​ಗಳನ್ನು ಒದಗಿಸಬೇಕು.

ಇದನ್ನೂ ಓದಿ: LPG Price: ವಾಣಿಜ್ಯ ಬಳಕೆಯ ಎಲ್​ಪಿಜಿ ಗ್ಯಾಸ್​ ಸಿಲಿಂಡರ್ ಬೆಲೆಯಲ್ಲಿ ಭಾರಿ ಕಡಿತ

ಆಗಸ್ಟ್​ನಲ್ಲಿ ಬ್ಯಾಂಕ್ ರಜಾದಿನಗಳು

ಆಗಸ್ಟ್ ತಿಂಗಳಲ್ಲಿ ದೇಶಾದ್ಯಂತ ವಿವಿಧೆಡೆ ಒಟ್ಟು 14 ದಿನಗಳ ಕಾಲ ರಜೆ ಇರುತ್ತದೆ. ಇದರಲ್ಲಿ ಎಲ್ಲರಿಗೂ ಸಾಮಾನ್ಯವಾಗಿರುವ 4 ಭಾನುವಾರ ಹಾಗು 2 ಶನಿವಾರದ ರಜೆಗಳೂ ಒಳಗೊಂಡಿವೆ. ಕರ್ನಾಟಕದಲ್ಲಿ ಭಾನುವಾರ ಮತ್ತು ಶನಿವಾರದ ರಜೆಗಳನ್ನು ಹೊರತುಪಡಿಸಿ ಆಗಸ್ಟ್ 15ರಂದು ಏಕೈಕ ರಜೆ ಇರುವುದು.

ಆಗಸ್ಟ್ 1: ಎಲ್​ಪಿಜಿ ಸಿಲಿಂಡರ್ ದರಗಳ ಇಳಿಕೆ

ಪ್ರತೀ ತಿಂಗಳ ಆರಂಭದಲ್ಲಿ ಎಲ್​ಪಿಜಿ ದರಗಳನ್ನ ಪರಿಷ್ಕರಿಸಲಾಗುತ್ತದೆ. ಆಗಸ್ಟ್ 1ರಂದು 19 ಕಿಲೋ ಎಲ್​ಪಿಜಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ 99.75 ರೂಗಳಷ್ಟು ಕಡಿಮೆಗೊಂಡಿದೆ. ಆದರೆ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್