AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ration Card Aadhaar Linking: ಆಧಾರ್, ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆಪ್ಟಂಬರ್ 30ಕ್ಕೆ ವಿಸ್ತರಣೆ; ಯಾರಿಗೆ ಇದು ಕಡ್ಡಾಯ? ಲಿಂಕ್ ಮಾಡುವುದು ಹೇಗೆ?

September 30, Deadline To Link Aadhaar With Ration Card: ಆಧಾರ್​ಗೆ ಪ್ಯಾನ್ ಲಿಂಕ್ ಮಾಡುವ ಡೆಡ್​ಲೈನ್ ಆಯಿತು. ಈಗ ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆ. 30ಕ್ಕೆ ನಿಗದಿಯಾಗಿದೆ. ಇವೆರಡನ್ನು ಜೋಡಿಸುವುದು ಹೇಗೆ ಎಂಬ ವಿವರ ಇಲ್ಲಿದೆ....

Ration Card Aadhaar Linking: ಆಧಾರ್, ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆಪ್ಟಂಬರ್ 30ಕ್ಕೆ ವಿಸ್ತರಣೆ; ಯಾರಿಗೆ ಇದು ಕಡ್ಡಾಯ? ಲಿಂಕ್ ಮಾಡುವುದು ಹೇಗೆ?
ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 04, 2023 | 4:12 PM

Share

ರೇಷನ್ ಕಾರ್ಡ್​ಗೆ ಆಧಾರ್ ನಂಬರ್ ಲಿಂಕ್ ಮಾಡುವ ಕಾರ್ಯಕ್ಕೆ (Aadhaar and Ration Card Linking) ಜೂನ್ 30 ಎಂದು ಇದ್ದ ಡೆಡ್​ಲೈನ್ ಅನ್ನು ಸೆಪ್ಟಂಬರ್ 30ಕ್ಕೆ ವಿಸ್ತರಿಸಲಾಗಿದೆ. ಎಲ್ಲಾ ಪಡಿತರ ಚೀಟಿದಾರರೂ ಆಧಾರ್​ಗೆ ಲಿಂಕ್ ಮಾಡಬಹುದು. ಆದರೆ, ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟಂಬ ಪಡಿತರ (Priority Household Ration) ಯೋಜನೆಯ ಫಲಾನುಭವಿಗಳು ತಮ್ಮ ರೇಷನ್ ಕಾರ್ಡನ್ನು ಆಧಾರ್​ಗೆ ಲಿಂಕ್ ಮಾಡುವುದು ಕಡ್ಡಾಯಪಡಿಸಲಾಗಿದೆ. ಆಧಾರ್ ನಂಬರ್​ಗೆ ಲಿಂಕ್ ಆಗದ ಪಡಿತರ ಚೀಟಿದಾರರಿಗೆ ಈ ಎರಡು ಯೋಜನೆಗಳು ಲಭ್ಯ ಇರುವುದಿಲ್ಲ. ಈ ಎರಡು ಯೋಜನೆಗಳು ಬಡವರು ಮತ್ತು ನಿರ್ಗತಿಕರಿಗೆಂದು ರೂಪಿಸಲಾಗಿದ್ದು, ಸ್ವಲ್ಪ ಸ್ಥಿತಿವಂತರೂ ಯೋಜನೆಯ ದುರ್ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. ಇದರಿಂದಾಗಿ ಅನರ್ಹ ರೇಷನ್ ಕಾರ್ಡ್ ಅನ್ನು ನೀಗಿಸುವ ದೃಷ್ಟಿಯಿಂದ ಆಧಾರ್​ಗೆ ಲಿಂಕ್ ಮಾಡಲಾಗುತ್ತಿದೆ.

ಅಂತ್ಯೋದಯ ಯೋಜನೆ 2002ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಭೂರಹಿತ ಕೃಷಿಕಾರ್ಮಿಕರು, ವಿಧವೆಯರು, ಎಚ್​ಐವಿ ಬಾಧಿತರ ಕುಟುಂಬ ಮುಂತಾದವರಿಗೆಂದು ಇದೆ. ಇದರಲ್ಲಿ ಸಬ್ಸಿಡಿ ದರದಲ್ಲಿ ಪ್ರತೀ ಕುಟುಂಬಕ್ಕೂ 35 ಕಿಲೋನಷ್ಟು ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತದೆ. ಇನ್ನು, ಆದ್ಯತಾ ಕುಟುಂಬ ಪಡಿತರ ಚೀಟಿ, ಅಥವಾ ಪ್ರಯಾರಿಟಿ ರೇಷನ್ ಕಾರ್ಡ್ ಕೂಡ ಬಿಪಿಎಲ್ ಕುಟುಂಬಗಳಿಗೆ ನೀಡಲಾಗುತ್ತದೆ.

ಇದನ್ನೂ ಓದಿPAN Updates: ಆಧಾರ್​ಗೆ ಪ್ಯಾನ್ ನಂಬರ್ ಲಿಂಕ್ ಆಗಿಲ್ಲವಾ? ಮುಂದೇನು ಮಾಡಬೇಕು ನೀವು? ಇಲ್ಲಿದೆ ಮಾರ್ಗೋಪಾಯ

ಆಧಾರ್ ಮತ್ತು ರೇಷನ್ ಕಾರ್ಡ್ ಜೋಡಿಸುವುದು ಹೇಗೆ?

ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು. ಆನ್​ಲೈನ್​ನಲ್ಲೂ ಸುಲಭವಾಗಿ ಈ ಕಾರ್ಯ ಮಾಡಬಹುದು.

ಸಮೀಪದ ರೇಷನ್ ಅಂಗಡಿಯಲ್ಲಿ ಮಾಡಿಸುವುದಾದರೆ ನಿಮ್ಮ ರೇಷನ್ ಕಾರ್ಡ್​ನಲ್ಲಿರುವ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್​ನ ಫೋಟೋ ಕಾಪಿ ತೆಗೆದುಕೊಂಡು ಹೋಗಬೇಕು. ರೇಷನ್ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರ ಪಾಸ್​ಪೋರ್ಟ್ ಗಾತ್ರದ ಫೋಟೋ ತೆಗೆದುಕೊಂಡು ಹೋಗಬೇಕು.

ನಿಮ್ಮ ಬ್ಯಾಂಕ್ ಖಾತೆ ಆಧಾರ್​ಗೆ ಲಿಂಕ್ ಆಗಿಲ್ಲದೇ ಇದ್ದರೆ ಬ್ಯಾಂಕ್ ಪಾಸ್​ಬುಕ್​ನ ಒಂದು ಪ್ರತಿ ಹೊಂದಿರಬೇಕು.

ಈ ಎಲ್ಲಾ ದಾಖಲೆಗಳನ್ನು ಪಡಿತರ ಅಂಗಡಿಯಲ್ಲಿ ಸಲ್ಲಿಸಬೇಕು. ಅಲ್ಲಿ ನಿಮ್ಮ ಆಧಾರ್ ಬಯೋಮೆಟ್ರಿಕ್ ಮಾಹಿತಿ ದೃಢಪಡಿಸಲು ಫಿಂಗರ್ ಪ್ರಿಂಟ್ ಪಡೆಯಲಾಗುತ್ತದೆ.

ಎಲ್ಲಾ ದಾಖಲೆಗಳ ಸಲ್ಲಿಕೆಯಾದ ಬಳಿಕ ಆಧಾರ್ ಜೊತೆ ನೊಂದಾಯಿತವಾದ ನಿಮ್ಮ ಮೊಬೈಲ್ ನಂಬರ್​ಗೆ ಎಸ್ಸೆಮ್ಮೆಸ್ ಬರುತ್ತದೆ.

ಇದನ್ನೂ ಓದಿDuplicate PAN: ಆನ್​ಲೈನ್​ನಲ್ಲಿ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಡೌನ್​ಲೋಡ್ ಮಾಡುವುದು ಹೇಗೆ? ಇಲ್ಲಿದೆ ವಿಧಾನ

 ಆನ್​ಲೈನ್​ನಲ್ಲಿ ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?

ಯುಐಡಿಎಐನ ವೆಬ್​ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್​ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!