AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ration Card Aadhaar Linking: ಆಧಾರ್, ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆಪ್ಟಂಬರ್ 30ಕ್ಕೆ ವಿಸ್ತರಣೆ; ಯಾರಿಗೆ ಇದು ಕಡ್ಡಾಯ? ಲಿಂಕ್ ಮಾಡುವುದು ಹೇಗೆ?

September 30, Deadline To Link Aadhaar With Ration Card: ಆಧಾರ್​ಗೆ ಪ್ಯಾನ್ ಲಿಂಕ್ ಮಾಡುವ ಡೆಡ್​ಲೈನ್ ಆಯಿತು. ಈಗ ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆ. 30ಕ್ಕೆ ನಿಗದಿಯಾಗಿದೆ. ಇವೆರಡನ್ನು ಜೋಡಿಸುವುದು ಹೇಗೆ ಎಂಬ ವಿವರ ಇಲ್ಲಿದೆ....

Ration Card Aadhaar Linking: ಆಧಾರ್, ರೇಷನ್ ಕಾರ್ಡ್ ಲಿಂಕ್ ಮಾಡುವ ಡೆಡ್​ಲೈನ್ ಸೆಪ್ಟಂಬರ್ 30ಕ್ಕೆ ವಿಸ್ತರಣೆ; ಯಾರಿಗೆ ಇದು ಕಡ್ಡಾಯ? ಲಿಂಕ್ ಮಾಡುವುದು ಹೇಗೆ?
ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 04, 2023 | 4:12 PM

ರೇಷನ್ ಕಾರ್ಡ್​ಗೆ ಆಧಾರ್ ನಂಬರ್ ಲಿಂಕ್ ಮಾಡುವ ಕಾರ್ಯಕ್ಕೆ (Aadhaar and Ration Card Linking) ಜೂನ್ 30 ಎಂದು ಇದ್ದ ಡೆಡ್​ಲೈನ್ ಅನ್ನು ಸೆಪ್ಟಂಬರ್ 30ಕ್ಕೆ ವಿಸ್ತರಿಸಲಾಗಿದೆ. ಎಲ್ಲಾ ಪಡಿತರ ಚೀಟಿದಾರರೂ ಆಧಾರ್​ಗೆ ಲಿಂಕ್ ಮಾಡಬಹುದು. ಆದರೆ, ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟಂಬ ಪಡಿತರ (Priority Household Ration) ಯೋಜನೆಯ ಫಲಾನುಭವಿಗಳು ತಮ್ಮ ರೇಷನ್ ಕಾರ್ಡನ್ನು ಆಧಾರ್​ಗೆ ಲಿಂಕ್ ಮಾಡುವುದು ಕಡ್ಡಾಯಪಡಿಸಲಾಗಿದೆ. ಆಧಾರ್ ನಂಬರ್​ಗೆ ಲಿಂಕ್ ಆಗದ ಪಡಿತರ ಚೀಟಿದಾರರಿಗೆ ಈ ಎರಡು ಯೋಜನೆಗಳು ಲಭ್ಯ ಇರುವುದಿಲ್ಲ. ಈ ಎರಡು ಯೋಜನೆಗಳು ಬಡವರು ಮತ್ತು ನಿರ್ಗತಿಕರಿಗೆಂದು ರೂಪಿಸಲಾಗಿದ್ದು, ಸ್ವಲ್ಪ ಸ್ಥಿತಿವಂತರೂ ಯೋಜನೆಯ ದುರ್ಲಾಭ ಪಡೆಯುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. ಇದರಿಂದಾಗಿ ಅನರ್ಹ ರೇಷನ್ ಕಾರ್ಡ್ ಅನ್ನು ನೀಗಿಸುವ ದೃಷ್ಟಿಯಿಂದ ಆಧಾರ್​ಗೆ ಲಿಂಕ್ ಮಾಡಲಾಗುತ್ತಿದೆ.

ಅಂತ್ಯೋದಯ ಯೋಜನೆ 2002ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಭೂರಹಿತ ಕೃಷಿಕಾರ್ಮಿಕರು, ವಿಧವೆಯರು, ಎಚ್​ಐವಿ ಬಾಧಿತರ ಕುಟುಂಬ ಮುಂತಾದವರಿಗೆಂದು ಇದೆ. ಇದರಲ್ಲಿ ಸಬ್ಸಿಡಿ ದರದಲ್ಲಿ ಪ್ರತೀ ಕುಟುಂಬಕ್ಕೂ 35 ಕಿಲೋನಷ್ಟು ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತದೆ. ಇನ್ನು, ಆದ್ಯತಾ ಕುಟುಂಬ ಪಡಿತರ ಚೀಟಿ, ಅಥವಾ ಪ್ರಯಾರಿಟಿ ರೇಷನ್ ಕಾರ್ಡ್ ಕೂಡ ಬಿಪಿಎಲ್ ಕುಟುಂಬಗಳಿಗೆ ನೀಡಲಾಗುತ್ತದೆ.

ಇದನ್ನೂ ಓದಿPAN Updates: ಆಧಾರ್​ಗೆ ಪ್ಯಾನ್ ನಂಬರ್ ಲಿಂಕ್ ಆಗಿಲ್ಲವಾ? ಮುಂದೇನು ಮಾಡಬೇಕು ನೀವು? ಇಲ್ಲಿದೆ ಮಾರ್ಗೋಪಾಯ

ಆಧಾರ್ ಮತ್ತು ರೇಷನ್ ಕಾರ್ಡ್ ಜೋಡಿಸುವುದು ಹೇಗೆ?

ಸಮೀಪದ ಪಡಿತರ ಕಚೇರಿಗೆ ಹೋಗಿ ಉಚಿತವಾಗಿ ನೀವು ಆಧಾರ್ ನಂಬರ್ ಲಿಂಕ್ ಮಾಡಬಹುದು. ಆನ್​ಲೈನ್​ನಲ್ಲೂ ಸುಲಭವಾಗಿ ಈ ಕಾರ್ಯ ಮಾಡಬಹುದು.

ಸಮೀಪದ ರೇಷನ್ ಅಂಗಡಿಯಲ್ಲಿ ಮಾಡಿಸುವುದಾದರೆ ನಿಮ್ಮ ರೇಷನ್ ಕಾರ್ಡ್​ನಲ್ಲಿರುವ ಎಲ್ಲಾ ಕುಟುಂಬ ಸದಸ್ಯರ ಆಧಾರ್ ಕಾರ್ಡ್​ನ ಫೋಟೋ ಕಾಪಿ ತೆಗೆದುಕೊಂಡು ಹೋಗಬೇಕು. ರೇಷನ್ ಕಾರ್ಡ್ ಯಾರ ಹೆಸರಲ್ಲಿದೆಯೋ ಅವರ ಪಾಸ್​ಪೋರ್ಟ್ ಗಾತ್ರದ ಫೋಟೋ ತೆಗೆದುಕೊಂಡು ಹೋಗಬೇಕು.

ನಿಮ್ಮ ಬ್ಯಾಂಕ್ ಖಾತೆ ಆಧಾರ್​ಗೆ ಲಿಂಕ್ ಆಗಿಲ್ಲದೇ ಇದ್ದರೆ ಬ್ಯಾಂಕ್ ಪಾಸ್​ಬುಕ್​ನ ಒಂದು ಪ್ರತಿ ಹೊಂದಿರಬೇಕು.

ಈ ಎಲ್ಲಾ ದಾಖಲೆಗಳನ್ನು ಪಡಿತರ ಅಂಗಡಿಯಲ್ಲಿ ಸಲ್ಲಿಸಬೇಕು. ಅಲ್ಲಿ ನಿಮ್ಮ ಆಧಾರ್ ಬಯೋಮೆಟ್ರಿಕ್ ಮಾಹಿತಿ ದೃಢಪಡಿಸಲು ಫಿಂಗರ್ ಪ್ರಿಂಟ್ ಪಡೆಯಲಾಗುತ್ತದೆ.

ಎಲ್ಲಾ ದಾಖಲೆಗಳ ಸಲ್ಲಿಕೆಯಾದ ಬಳಿಕ ಆಧಾರ್ ಜೊತೆ ನೊಂದಾಯಿತವಾದ ನಿಮ್ಮ ಮೊಬೈಲ್ ನಂಬರ್​ಗೆ ಎಸ್ಸೆಮ್ಮೆಸ್ ಬರುತ್ತದೆ.

ಇದನ್ನೂ ಓದಿDuplicate PAN: ಆನ್​ಲೈನ್​ನಲ್ಲಿ ಡೂಪ್ಲಿಕೇಟ್ ಪ್ಯಾನ್ ಕಾರ್ಡ್ ಡೌನ್​ಲೋಡ್ ಮಾಡುವುದು ಹೇಗೆ? ಇಲ್ಲಿದೆ ವಿಧಾನ

 ಆನ್​ಲೈನ್​ನಲ್ಲಿ ಆಧಾರ್​ಗೆ ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?

ಯುಐಡಿಎಐನ ವೆಬ್​ಸೈಟ್ ಮೂಲಕ ರೇಷನ್ ಕಾರ್ಡ್ ಲಿಂಕ್ ಮಾಡಬಹುದು. ರಾಜ್ಯ ಪಿಡಿಎಸ್ ವೆಬ್​ಸೈಟ್ ಮೂಲಕವೂ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡಬಹುದು

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!