AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Share Market: ಅಂತಾರಾಷ್ಟ್ರೀಯ ಯೋಗ ದಿನ: ಬಿಎಸ್​ಇ, ಎನ್​ಎಸ್​ಇ ಷೇರುಮಾರುಕಟ್ಟೆಗಳಿಗೆ ರಜೆಯಾ? ಇಲ್ಲಿದೆ ಈ ವರ್ಷದ ಉಳಿದ ದಿನಗಳ ರಜಾ ಪಟ್ಟಿ

International Yoga Day, Share Market- ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ 21ರಂದು ಬಿಎಸ್​ಇ ಅಥವಾ ಎನ್​​ಎಸ್​ಇ ಷೇರು ಮಾರುಕಟ್ಟೆಗಳಲ್ಲಿ ರಜೆ ಇರುವುದಿಲ್ಲ. ಈ ತಿಂಗಳ 28ಕ್ಕೆ ಬಕ್ರೀದ್ ನಿಮಿತ್ತ ರಜೆ ಇದೆ.

Share Market: ಅಂತಾರಾಷ್ಟ್ರೀಯ ಯೋಗ ದಿನ: ಬಿಎಸ್​ಇ, ಎನ್​ಎಸ್​ಇ ಷೇರುಮಾರುಕಟ್ಟೆಗಳಿಗೆ ರಜೆಯಾ? ಇಲ್ಲಿದೆ ಈ ವರ್ಷದ ಉಳಿದ ದಿನಗಳ ರಜಾ ಪಟ್ಟಿ
ಷೇರುಪೇಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 20, 2023 | 7:20 PM

Share

ನವದೆಹಲಿ: ಜೂನ್ 21, ಅಂತಾರಾಷ್ಟ್ರೀಯ ಯೋಗ ದಿನ. ಅಮೆರಿಕದಲ್ಲಿ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ. ಜಾಗತಿಕವಾಗಿ ಈ ದಿನಕ್ಕೆ ಮಾನ್ಯತೆ ಮತ್ತು ಜನಪ್ರಿಯತೆ ಹೆಚ್ಚುತ್ತಿದೆ. ಈ ದಿನದಂದು (International Yoga Day) ಭಾರತದಲ್ಲಿ ಷೇರುಪೇಟೆಗಳು ಬಂದ್ ಆಗಿರುತ್ತವಾ? 2023 ಜೂನ್ 21ರಂದು ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಹಾಗೂ ಇತರ ಷೇರುಮಾರುಕಟ್ಟೆಗಳಿಗೆ ರಜೆ ಇರುವುದಿಲ್ಲ. ಯಥಾಪ್ರಕಾರ ಕಾರ್ಯನಿರ್ವಹಿಸುತ್ತವೆ. ಈ ಎರಡು ಸ್ಟಾಕ್ ಎಕ್ಸ್​ಚೇಂಜ್​ಗಳ ವೆಬ್​​ಸೈಟ್​ನಲ್ಲಿ ಪ್ರಕಟಿಸಲಾಗಿರುವ ರಜಾ ದಿನಗಳ ಪಟ್ಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ 21 ಸೇರಿಲ್ಲ.

2023ರ ಜೂನ್​ನಿಂದ ಡಿಸೆಂಬರ್​ವರೆಗೆ ಷೇರು ಮಾರುಕಟ್ಟೆ ರಜಾ ದಿನಗಳ ಪಟ್ಟಿ

  • ಜೂನ್ 18: ಬಕ್ರೀದ್
  • ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ
  • ಸೆಪ್ಟಂಬರ್ 19: ಗಣೇಶ ಚತುರ್ಥಿ
  • ಅಕ್ಟೋಬರ್ 2: ಗಾಂಧಿ ಜಯಂತಿ
  • ಅಕ್ಟೋಬರ್ 24: ದಸರಾ
  • ನವೆಂಬರ್ 12: ದೀಪಾವಳಿ
  • ನವೆಂಬರ್ 14: ಬಲಿಪಾಡ್ಯಮಿ
  • ನವೆಂಬರ್ 27: ಗುರುನಾನಕ್ ಜಯಂತಿ
  • ಡಿಸೆಂಬರ್ 25: ಕ್ರಿಸ್ಮಸ್ ಹಬ್ಬ

ಇದನ್ನೂ ಓದಿCredit Card: ಕ್ರೆಡಿಟ್ ಕಾರ್ಡ್​ನಲ್ಲಿ ನಾವು ನೀವು ಹೆಚ್ಚು ಗಮನಿಸದ ಶುಲ್ಕಗಳು ಹಲವಿವೆ; ಮುಂದಿನ ಬಾರಿ ಬಿಲ್ ನೋಡುವಾಗ ಜೋಪಾನ

ಇವು ಬಿಎಸ್​ಇ ಮತ್ತು ಎನ್​ಎಸ್​ಇ ಎರಡರಲ್ಲೂ ಇರುವ ರಜಾ ದಿನಗಳು. ಈ ವರ್ಷ ಈ ಮೇಲಿನವೂ ಸೇರಿದಂತೆ ಷೇರುಪೇಟೆಗಳಿಗೆ 15 ರಜಾ ದಿನಗಳಿವೆ. ಕರೆನ್ಸಿ ಡಿರೈವೇಟಿವ್ ಸೆಗ್ಮೆಂಟ್, ಎನ್​ಡಿಎಸ್ ಆರ್​ಎಸ್​ಟಿಗಳಿಗೆ 4 ಹೆಚ್ಚುವರಿ ರಜಾ ದಿನಗಳಿವೆ.

ನವೆಂಬರ್ ತಿಂಗಳಲ್ಲಿ 3 ದಿನಗಳು ಷೇರುಪೇಟೆಗೆ ರಜೆ ಇದೆ. ಜುಲೈ ತಿಂಗಳಲ್ಲಿ ಒಂದು ದಿನವೂ ರಜೆ ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು