AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Share Market: ಅಂತಾರಾಷ್ಟ್ರೀಯ ಯೋಗ ದಿನ: ಬಿಎಸ್​ಇ, ಎನ್​ಎಸ್​ಇ ಷೇರುಮಾರುಕಟ್ಟೆಗಳಿಗೆ ರಜೆಯಾ? ಇಲ್ಲಿದೆ ಈ ವರ್ಷದ ಉಳಿದ ದಿನಗಳ ರಜಾ ಪಟ್ಟಿ

International Yoga Day, Share Market- ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ 21ರಂದು ಬಿಎಸ್​ಇ ಅಥವಾ ಎನ್​​ಎಸ್​ಇ ಷೇರು ಮಾರುಕಟ್ಟೆಗಳಲ್ಲಿ ರಜೆ ಇರುವುದಿಲ್ಲ. ಈ ತಿಂಗಳ 28ಕ್ಕೆ ಬಕ್ರೀದ್ ನಿಮಿತ್ತ ರಜೆ ಇದೆ.

Share Market: ಅಂತಾರಾಷ್ಟ್ರೀಯ ಯೋಗ ದಿನ: ಬಿಎಸ್​ಇ, ಎನ್​ಎಸ್​ಇ ಷೇರುಮಾರುಕಟ್ಟೆಗಳಿಗೆ ರಜೆಯಾ? ಇಲ್ಲಿದೆ ಈ ವರ್ಷದ ಉಳಿದ ದಿನಗಳ ರಜಾ ಪಟ್ಟಿ
ಷೇರುಪೇಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 20, 2023 | 7:20 PM

Share

ನವದೆಹಲಿ: ಜೂನ್ 21, ಅಂತಾರಾಷ್ಟ್ರೀಯ ಯೋಗ ದಿನ. ಅಮೆರಿಕದಲ್ಲಿ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿದ್ದಾರೆ. ಜಾಗತಿಕವಾಗಿ ಈ ದಿನಕ್ಕೆ ಮಾನ್ಯತೆ ಮತ್ತು ಜನಪ್ರಿಯತೆ ಹೆಚ್ಚುತ್ತಿದೆ. ಈ ದಿನದಂದು (International Yoga Day) ಭಾರತದಲ್ಲಿ ಷೇರುಪೇಟೆಗಳು ಬಂದ್ ಆಗಿರುತ್ತವಾ? 2023 ಜೂನ್ 21ರಂದು ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ ಹಾಗೂ ಇತರ ಷೇರುಮಾರುಕಟ್ಟೆಗಳಿಗೆ ರಜೆ ಇರುವುದಿಲ್ಲ. ಯಥಾಪ್ರಕಾರ ಕಾರ್ಯನಿರ್ವಹಿಸುತ್ತವೆ. ಈ ಎರಡು ಸ್ಟಾಕ್ ಎಕ್ಸ್​ಚೇಂಜ್​ಗಳ ವೆಬ್​​ಸೈಟ್​ನಲ್ಲಿ ಪ್ರಕಟಿಸಲಾಗಿರುವ ರಜಾ ದಿನಗಳ ಪಟ್ಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನವಾದ ಜೂನ್ 21 ಸೇರಿಲ್ಲ.

2023ರ ಜೂನ್​ನಿಂದ ಡಿಸೆಂಬರ್​ವರೆಗೆ ಷೇರು ಮಾರುಕಟ್ಟೆ ರಜಾ ದಿನಗಳ ಪಟ್ಟಿ

  • ಜೂನ್ 18: ಬಕ್ರೀದ್
  • ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ
  • ಸೆಪ್ಟಂಬರ್ 19: ಗಣೇಶ ಚತುರ್ಥಿ
  • ಅಕ್ಟೋಬರ್ 2: ಗಾಂಧಿ ಜಯಂತಿ
  • ಅಕ್ಟೋಬರ್ 24: ದಸರಾ
  • ನವೆಂಬರ್ 12: ದೀಪಾವಳಿ
  • ನವೆಂಬರ್ 14: ಬಲಿಪಾಡ್ಯಮಿ
  • ನವೆಂಬರ್ 27: ಗುರುನಾನಕ್ ಜಯಂತಿ
  • ಡಿಸೆಂಬರ್ 25: ಕ್ರಿಸ್ಮಸ್ ಹಬ್ಬ

ಇದನ್ನೂ ಓದಿCredit Card: ಕ್ರೆಡಿಟ್ ಕಾರ್ಡ್​ನಲ್ಲಿ ನಾವು ನೀವು ಹೆಚ್ಚು ಗಮನಿಸದ ಶುಲ್ಕಗಳು ಹಲವಿವೆ; ಮುಂದಿನ ಬಾರಿ ಬಿಲ್ ನೋಡುವಾಗ ಜೋಪಾನ

ಇವು ಬಿಎಸ್​ಇ ಮತ್ತು ಎನ್​ಎಸ್​ಇ ಎರಡರಲ್ಲೂ ಇರುವ ರಜಾ ದಿನಗಳು. ಈ ವರ್ಷ ಈ ಮೇಲಿನವೂ ಸೇರಿದಂತೆ ಷೇರುಪೇಟೆಗಳಿಗೆ 15 ರಜಾ ದಿನಗಳಿವೆ. ಕರೆನ್ಸಿ ಡಿರೈವೇಟಿವ್ ಸೆಗ್ಮೆಂಟ್, ಎನ್​ಡಿಎಸ್ ಆರ್​ಎಸ್​ಟಿಗಳಿಗೆ 4 ಹೆಚ್ಚುವರಿ ರಜಾ ದಿನಗಳಿವೆ.

ನವೆಂಬರ್ ತಿಂಗಳಲ್ಲಿ 3 ದಿನಗಳು ಷೇರುಪೇಟೆಗೆ ರಜೆ ಇದೆ. ಜುಲೈ ತಿಂಗಳಲ್ಲಿ ಒಂದು ದಿನವೂ ರಜೆ ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ