AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eid: ಬಕ್ರೀದ್ ಹಬ್ಬದಂದು ಷೇರುಮಾರುಕಟ್ಟೆಗಳಿಗೆ ರಜೆ; ಆದರೆ, ಜೂನ್ 28 ಬದಲು ಮರುದಿನ ಬಂದ್

Share Market During Bakr Eid: ಈದ್ ಉಲ್ ಜುಹಾ ಅಥವಾ ಬಕ್ರೀದ್ ಹಬ್ಬಕ್ಕೆ ಬಿಎಸ್​ಇ, ಎನ್​​ಎಸ್​ಇ, ಎಂಸಿಎಕ್ಸ್, ಫಾರೆಕ್ಸ್ ಇತ್ಯಾದಿ ಹಣಕಾಸು ಮಾರುಕಟ್ಟೆಗಳಿಗೆ ರಜೆ ಇರಲಿದೆ. ಇದೂ ಸೇರಿ ಡಿಸೆಂಬರ್​ವರೆಗೆ ಇನ್ನೂ 8 ದಿನಗಳ ಕಾಲ ಷೇರುಪೇಟೆಗೆ ರಜೆ ಇರುತ್ತದೆ.

Eid: ಬಕ್ರೀದ್ ಹಬ್ಬದಂದು ಷೇರುಮಾರುಕಟ್ಟೆಗಳಿಗೆ ರಜೆ; ಆದರೆ, ಜೂನ್ 28 ಬದಲು ಮರುದಿನ ಬಂದ್
ಷೇರುಪೇಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 27, 2023 | 12:04 PM

Share

ನವದೆಹಲಿ: ನಾಳೆ (ಜೂನ್ 28) ಮುಸ್ಲಿಮರ ಪವಿತ್ರ ಈದ್ ಉಲ್ ಜುಹಾ (Eid Ul-Zuha) ಇರುವುದರಿಂದ ದೇಶದ ಬಹುತೇಕ ಎಲ್ಲೆಡೆ ರಜೆ ಇದೆ. ಬಕ್ರೀದ್ ಪ್ರಯುಕ್ತ ಭಾರತದ ಷೇರು ಮಾರುಕಟ್ಟೆಗಳಿಗೂ ಬುಧವಾರ ರಜೆ ನಿಗದಿಯಾಗಿತ್ತು. ಆದರೆ, ಇಂದು ಅಚಾನಕ್ಕಾಗಿ ರಜಾ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಜೂನ್ 28 ಬದಲು ಮರುದಿನ ರಜೆ ಕೊಡಲು ನಿರ್ಧರಿಸಲಾಗಿದೆ. ಅಂದರೆ ಜೂನ್ 29, ಗುರುವಾದಂದು ಷೇರುಪೇಟೆಗಳು ಬಂದ್ ಆಗಿರುತ್ತವೆ. ಬುಧವಾರ ಯಥಾ ಪ್ರಕಾರ ಕಾರ್ಯನಿರ್ವಹಿಸಲಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್ (BSE), ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (NSE) ಮತ್ತಿತರ ಷೇರು ಎಕ್ಸ್​ಜೇಂಜ್ ಕೇಂದ್ರಗಳಿಗೆ (Stock Exchange Markets) ರಜೆ ಇದೆ. ವಿದೇಶೀ ಕರೆನ್ಸಿ ವಿನಿಮಯ ಮಾರುಕಟ್ಟೆಯೂ ಇರುವುದಿಲ್ಲ. ಜೂನ್ 29ರಂದು ಯಾವುದೇ ಷೇರು ವಹಿವಾಟು, ಬಾಂಡ್ ಮಾರಾಟ, ಫಾರೆಕ್ ವಹಿವಾಟುಗಳು ನಡೆಯುವುದಿಲ್ಲ. ನಾಳೆ ಬುಧವಾರ ಸಂಜೆ ಬಂದ್ ಆಗುವ ಷೇರುಪೇಟೆ ಮತ್ತೆ ಬಾಗಿಲು ತೆರೆಯುವುದು ಜೂನ್ 30ರ ಬೆಳಗ್ಗೆಯೇ.

ಬಹು ಸರಕು ವಿನಿಯಮ ಮಾರುಕಟ್ಟೆ ಎನಿಸಿದ ಎಂಸಿಎಕ್ಸ್ (MCX- Multi Commodity Exchange) ಜೂನ್ 29ರಂದು ಸಂಜೆಯವರೆಗೂ ಬಂದ್ ಆಗಿರುತ್ತದೆ. ಸಂಜೆ 5ರ ಬಳಿಕ ಮಧ್ಯರಾತ್ರಿಯವರೆಗೂ ಅದು ತೆರೆದಿರುತ್ತದೆ. ಕಮಾಡಿಟಿ ಡಿರೈವೇಟಿವ್ ಸೆಗ್ಮೆಂಟ್​ನಲ್ಲೂ ಸಂಜೆಯ ಬಳಿಕ ವಹಿವಾಟು ಇರುತ್ತದೆ.

ಇದನ್ನೂ ಓದಿAadhaar PAN Linking: ಆಧಾರ್ ಮತ್ತು ಪ್ಯಾನ್​ನಲ್ಲಿ ಹೆಸರು ಇತ್ಯಾದಿ ಮ್ಯಾಚ್ ಆಗದೇ ಲಿಂಕ್ ಆಗುತ್ತಿಲ್ಲವಾ? ಐಟಿ ಇಲಾಖೆ ಕೊಟ್ಟ ಸಲಹೆಗಳಿವು

ಷೇರು ಮಾರುಕಟ್ಟೆಗಳಿಗೆ ಈ ವರ್ಷದ ಮುಂದಿನ ರಜಾ ದಿನಗಳ ಪಟ್ಟಿ

  • ಜೂನ್ 29: ಬಕ್ರೀದ್ ಹಬ್ಬ
  • ಆಗಸ್ಟ್ 15: ಸ್ವಾತಂತ್ರ್ಯೋತ್ಸವ
  • ಸೆಪ್ಟಂಬರ್ 19: ಗಣೇಶ ಹಬ್ಬ
  • ಅಕ್ಟೋಬರ್ 2: ಮಹಾತ್ಮ ಗಾಂಧಿ ಜಯಂತಿ
  • ಅಕ್ಟೋಬರ್ 24: ದಸರಾ ಹಬ್ಬ
  • ನವೆಂಬರ್ 14: ದೀಪಾವಳಿ ಹಬ್ಬ
  • ನವೆಂಬರ್ 27: ಗುರುನಾನಕ್ ಜಯಂತಿ
  • ಡಿಸೆಂಬರ್ 25: ಕ್ರಿಸ್ಮಸ್ ಹಬ್ಬ

ಮಂಗಳವಾರ ಷೇರುಪೇಟೆ ಮಿಂಚಿನ ಆರಂಭ

ಜೂನ್ 27, ಮಂಗಳವಾರದಂದು ಭಾರತದ ಬಿಎಸ್​ಇ ಮತ್ತು ಎನ್​ಎಸ್​ಇ ಷೇರು ವಿನಿಮಯ ಕೇಂದ್ರಗಳು ಭರ್ಜರಿ ವಹಿವಾಟು ಕಾಣುತ್ತಿವೆ. ಸೆನ್ಸೆಕ್ಸ್ ಬೆಳ್ಳಂಬೆಳಗ್ಗೆಯೇ 100 ಅಂಕಗಳನ್ನು ಹೆಚ್ಚಿಸಿಕೊಂಡಿದೆ. ಎನ್​ಎಸ್​ಇ ನಿಫ್ಟಿ ಸೂಚ್ಯಂಕ ಮತ್ತೆ 18,700 ಅಂಕಗಳ ಮಟ್ಟಕ್ಕಿಂತ ಮೇಲೇರಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?