AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM-KISAN eKYC: ಪಿಎಂ ಕಿಸಾನ್ ಸಮ್ಮಾನ್ ನಿಧಿ ಇ-ಕೆವೈಸಿ ಕೊನೆ ದಿನ ಯಾವುದು ಎಂಬುದನ್ನು ಗಮನಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಇಕೆವೈಸಿಗೆ ಕೊನೆ ದಿನ ಯಾವುದು ಎಂಬ ಬಗ್ಗೆ ವಿವರಣೆ ಈ ಲೇಖನದಲ್ಲಿದೆ. ಫಲಾನುಭವಿಗಳು ಈ ಬಗ್ಗೆ ಗಮನ ಹರಿಸಿ.

PM-KISAN eKYC: ಪಿಎಂ ಕಿಸಾನ್ ಸಮ್ಮಾನ್ ನಿಧಿ ಇ-ಕೆವೈಸಿ ಕೊನೆ ದಿನ ಯಾವುದು ಎಂಬುದನ್ನು ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Mar 25, 2022 | 2:05 PM

Share

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಪ್ರಯೋಜನಗಳನ್ನು ಪಡೆಯಲು ರೈತರು ತಮ್ಮ ಇ-ಕೆವೈಸಿಯನ್ನು (eKYC) ಇಂದೇ ಪೂರ್ಣಗೊಳಿಸಬೇಕು. ನೋಯ್ಡಾ ಜಿಲ್ಲಾಡಳಿತವು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ PM-Kisanನ eKYC ಅನ್ನು ಪೂರ್ಣಗೊಳಿಸಲು ಮಾರ್ಚ್ 25 ಅನ್ನು ಗಡುವು ಎಂದು ನಿಗದಿಪಡಿಸಿದೆ. ಪಿಎಂ-ಕಿಸಾನ್ ಯೋಜನೆಯು ಕೇಂದ್ರೀಯ ವಲಯದ ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯಾಗಿದ್ದು, ದೇಶಾದ್ಯಂತ ಎಲ್ಲ ಭೂಹಿಡುವಳಿ ರೈತ ಕುಟುಂಬಗಳಿಗೆ ಲಭ್ಯವಿದೆ. ಪಿಎಂ-ಕಿಸಾನ್​ನ ಅಧಿಕೃತ ವೆಬ್‌ಸೈಟ್‌ನಲ್ಲಿ “PMKISAN ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ” ಎಂಬ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನೋಯ್ಡಾ ಜಿಲ್ಲೆಯಲ್ಲಿ ರೈತರು ತಮ್ಮ ಇಕೆವೈಸಿಯನ್ನು ಮಾರ್ಚ್ 25 ರೊಳಗೆ ಪೂರ್ಣಗೊಳಿಸಲು ವಿಫಲವಾದರೆ ಅವರು ಏಪ್ರಿಲ್‌ನಲ್ಲಿ ನೇರ ಲಾಭ ವರ್ಗಾವಣೆಗೆ ಅರ್ಹರಾಗಿರುವುದಿಲ್ಲ. ಆದರೆ ದೇಶದ ಉಳಿದ ಭಾಗಗಳ ರೈತರು 11ನೇ ಕಂತಿನ ಭಾಗವಾಗಿ ತಮ್ಮ ಬ್ಯಾಂಕ್ ಖಾತೆಗಳಲ್ಲಿ ರೂ. 2,000 ಪಡೆಯಲು ಮಾರ್ಚ್ 31ರ ಮೊದಲು ಪಿಎಂ ಕಿಸಾನ್ ಕೆವೈಸಿ ಪೂರ್ಣಗೊಳಿಸಬೇಕು.

ಇದಕ್ಕೂ ಮೊದಲು ಈ ವರ್ಷದ ಜನವರಿಯಲ್ಲಿ ಪಿಎಂ-ಕಿಸಾನ್ ಅಡಿ 10ನೇ ಕಂತಿನ ಆರ್ಥಿಕ ಪ್ರಯೋಜನವನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು. ಇದರ ಅಡಿಯಲ್ಲಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ರೂ. 20,000 ಕೋಟಿಗಿಂತ ಹೆಚ್ಚು ವರ್ಗಾಯಿಸಲಾಯಿತು. ಕಾರ್ಯಕ್ರಮದ ಸಮಯದಲ್ಲಿ ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ (ಎಫ್‌ಪಿಒ) ರೂ. 14 ಕೋಟಿಗೂ ಹೆಚ್ಚು ಇಕ್ವಿಟಿ ಅನುದಾನವನ್ನು ಪ್ರಧಾನಿ ಬಿಡುಗಡೆ ಮಾಡಿದ್ದರು. ಇದು 1.24 ಲಕ್ಷಕ್ಕೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡುತ್ತದೆ.

ಪಿಎಂ-ಕಿಸಾನ್ ಅಡಿಯಲ್ಲಿ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಸಂಬಂಧಿಸಿದ ವೆಚ್ಚಗಳನ್ನು ಮತ್ತು ದೇಶೀಯ ಅಗತ್ಯಗಳನ್ನು ನೋಡಿಕೊಳ್ಳಲು ಅನುಕೂಲವಾಗುವಂತೆ, ಹೆಚ್ಚಿನ ಆದಾಯದ ಸ್ತರಗಳಿಗೆ ಸಂಬಂಧಿಸಿದ ಕೆಲವರನ್ನು ಹೊರಗಿಡುವ ಮಾನದಂಡಗಳಿಗೆ ಒಳಪಟ್ಟು, ದೇಶದಾದ್ಯಂತ ಎಲ್ಲ ಭೂಹಿಡುವಳಿ ರೈತ ಕುಟುಂಬಗಳಿಗೆ ವಾರ್ಷಿಕ ರೂ. 6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು 4-ತಿಂಗಳಿಗೊಮ್ಮೆ ಎಂಬಂತೆ ಮೂರು ಕಂತುಗಳಲ್ಲಿ ತಲಾ ರೂ. 2000 ನೇರವಾಗಿ ರಾಜ್ಯ/UT ಸರ್ಕಾರಗಳು ಗುರುತಿಸಿದ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.

ಇ-ಕೆವೈಸಿ ಪ್ರಕ್ರಿಯೆಯನ್ನು ಹೇಗೆ ಪೂರ್ಣಗೊಳಿಸುವುದು ಎಂಬ ವಿವರ ಇಲ್ಲಿದೆ?

ಹಂತ 1 – PM-Kisanನ ಅಧಿಕೃತ ವೆಬ್‌ಸೈಟ್ www.pmkisan.gov.inಗೆ ಭೇಟಿ ನೀಡಿ.

ಹಂತ 2 – ಆಧಾರ್ ಆಧಾರಿತ ಜೋಡಣೆಗಾಗಿ ಫಾರ್ಮರ್ ಕಾರ್ನರ್‌ನಲ್ಲಿ eKYC ಕ್ಲಿಕ್ ಮಾಡಿ. ಫಾರ್ಮರ್ ಕಾರ್ನರ್ ವೆಬ್‌ಸೈಟ್‌ನ ಬಲಭಾಗದಲ್ಲಿದೆ.

ಹಂತ 3 – eKYC ಮೇಲೆ ಕ್ಲಿಕ್ ಮಾಡಿದ ನಂತರ, ನಿಮ್ಮನ್ನು ಹೊಸ ಪುಟಕ್ಕೆ ನಿರ್ದೇಶಿಸಲಾಗುತ್ತದೆ. ಆಧಾರ್ ಕಾರ್ಡ್ ಸಂಖ್ಯೆ, ಕ್ಯಾಪ್ಚಾ ಕೋಡ್ ನಮೂದಿಸಿ ಮತ್ತು ಹುಡುಕಾಟ ಕ್ಲಿಕ್ ಮಾಡಿ.

ಹಂತ 4 – ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಜೋಡಣೆ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.

ಹಂತ 5 – OTP ಪಡೆಯಿರಿ ಮತ್ತು ಅದನ್ನು ನಮೂದಿಸಿ.

ಹಂತ 6 – ‘ಸಲ್ಲಿಸು’ ಕ್ಲಿಕ್ ಮಾಡಿ, KYC ಪ್ರಕ್ರಿಯೆಯು ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: PM Kisan Yojana: ಪಿಎಂ ಕಿಸಾನ್ ಯೋಜನೆ ಫಲಾನುಭವಿ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹೇಗೆ? ಇಲ್ಲಿದೆ ವಿವರಣೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್