AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheaper Items: ಹೊಸ ಜಿಎಸ್​ಟಿ ದರ: ಅಗ್ಗವಾಗಲಿರುವ ವಸ್ತುಗಳಿವು

49th GST Council Meeting: ಶನಿವಾರ ನಡೆದ 49ನೇ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ಪೆನ್ಸಿಲ್ ಶಾರ್ಪ್ನರ್, ಲಿಕ್ವಿಡ್ ಜ್ಯಾಗರಿ, ಟ್ಯಾಗ್ ಟ್ರ್ಯಾಕಿಂಗ್ ಡಿವೈಸ್ ಮೊದಲಾದ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಾಗಿದೆ. ಇವುಗಳ ಬೆಲೆ ಕಡಿಮೆಗೊಂಡಿದೆ.

Cheaper Items: ಹೊಸ ಜಿಎಸ್​ಟಿ ದರ: ಅಗ್ಗವಾಗಲಿರುವ ವಸ್ತುಗಳಿವು
ಸಾಂದರ್ಭಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 20, 2023 | 1:18 PM

Share

ನವದೆಹಲಿ: ಮೊನ್ನೆ ಶನಿವಾರ ನಡೆದ ಜಿಎಸ್​ಟಿ ಸಭೆಯಲ್ಲಿ (49th GST Council Meeting) ಯಾವ್ಯಾವುದರ ತೆರಿಗೆ ಏರಿಕೆ, ಇಳಿಕೆ ಮಾಡಬೇಕೆಂದು ನಿರ್ಧರಿಸಲಾಗಿದೆ. ಈ ಬಗ್ಗೆ ಒಂದಷ್ಟು ಸ್ಪಷ್ಟ ಚಿತ್ರಣ ಈಗ ಲಭ್ಯವಾಗಿದೆ. ಪೆನ್ಸಿಲ್ ಶಾರ್ಪ್ನರ್​ಗಳ ಮೇಲಿನ ಜಿಎಸ್​ಟಿ ದರ ಶೇ. 18ರಷ್ಟಿಂದ ಶೇ. 12ಕ್ಕೆ ಇಳಿಸಲಾಗಿದೆ. ಟ್ಯಾಗ್ ಟ್ರ್ಯಾಕಿಂಗ್ ಡಿವೈಸ್ ಅಥವಾ ಡಾಟಾ ಲಾಗರ್​ಗಳಿಗೆ ಯಾವುದೇ ತೆರಿಗೆ ವಿಧಿಸದಿರಲು ನಿರ್ಧರಿಸಲಾಗಿದೆ. ಈ ಮೊದಲು ಇವುಗಳಿಗೆ ಶೇ. 18ರಷ್ಟು ಜಿಎಸ್​ಟಿ ಇತ್ತು.

ಇನ್ನು, ಧ್ರವ ರೂಪದ ಬೆಲ್ಲಕ್ಕೆ ಶೇ. 15ರಷ್ಟು ಇದ್ದ ಜಿಎಸ್​ಟಿಯನ್ನು ಶೂನ್ಯಕ್ಕೆ ತರಲಾಗಿದೆ. ಅಂದರೆ ಇದಕ್ಕೆ ಯಾವುದೇ ತೆರಿಗೆ ಇರುವುದಿಲ್ಲ. ಚಿಲ್ಲರೆಯಾಗಿ ಈ ಉತ್ಪನ್ನವನ್ನು ಮಾರುವುದಾದರೆ ಶೇ. 5ರಷ್ಟು ತೆರಿಗೆ ಹಾಕಲಾಗುತ್ತದೆ. ಇದನ್ನು ಪ್ಯಾಕೇಜ್ ರೂಪದಲ್ಲಿ ಮಾರುವಾಗಲೂ ಶೇ. 5ರಷ್ಟು ಜಿಎಸ್​ಟಿ ಇರುತ್ತದೆ.

ಇದೇ ವೇಳೆ, ಕಲ್ಲಿದ್ದಲು ತ್ಯಾಜ್ಯ ಅಥವಾ ಕಲ್ಲಿದ್ದಲು ಉಳಿಕೆಗೆ ತೆರಿಗೆ ವಿನಾಯಿತಿ ನೀಡಲು ಜಿಎಸ್​ಟಿ ಕೌನ್ಸಿಲ್ ತೀರ್ಮಾನಿಸಿದೆ. ಕಚ್ಛಾ ಕಲ್ಲಿದ್ದಲನ್ನು ನೀರಿನಿಂದ ಸ್ವಚ್ಛಗೊಳಿಸಿದ ಬಳಿಕ ಸಿಗುವ ಕಲ್ಲಿದ್ದಲು ಹೆಚ್ಚು ಪರಿಸರಸ್ನೇಹಿಯಾಗಿರುತ್ತದೆ. ಅದಕ್ಕೆ ಬೆಲೆ ಹೆಚ್ಚು ಇರುತ್ತದೆ. ನಂತ ಉಳಿಯುವ ಈ ಕಲ್ಲಿದ್ದಲು ತ್ಯಾಜ್ಯವನ್ನು ಬೇರೆ ಕೆಲ ಔದ್ಯಮಿಕ ಉತ್ಪಾದನೆಗಳಿಗೆ ಬಳಸಬಹುದಾಗಿದೆ.

ಬೆಲೆ ಇಳಿಕೆಯಾಗಿರುವುದು

ಪೆನ್ಸಿಲ್ ಶಾರ್ಪ್ನರ್: ಜಿಎಸ್​​ಟಿ ಶೇ. 18ರಿಂದ 12ಕ್ಕೆ ಇಳಿಕೆ

ದ್ರವರೂಪದ ಬೆಲ್ಲ: ಶೇ. 15ರ ಜಿಎಸ್​ಟಿ ಈಗ ಶೂನ್ಯ

ಟ್ಯಾಗ್ ಟ್ರ್ಯಾಕಿಂಗ್ ಸಾಧನ: ಶೂನ್ಯ ತೆರಿಗೆ

ಕೋಲ್ ರಿಜೆಕ್ಟ್: ತೆರಿಗೆ ಇಲ್ಲ

ಇದನ್ನೂ ಓದಿ: Cable Operators vs Broadcasters: ಕೆಲ ಕೇಬಲ್ ಟಿವಿಗಳಲ್ಲಿ ಪ್ರಸಾರ ನಿಲ್ಲಿಸಿವೆ ಝೀ, ಸ್ಟಾರ್, ಸೋನಿ ವಾಹಿನಿಗಳು

ಶನಿವಾರ ನಡೆದದ್ದು 49ನೇ ಜಿಎಸ್​ಟಿ ಕೌನ್ಸಿಲ್ ಸಭೆ. ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆ ವಹಿಸಿದ್ದ ಈ ಸಭೆಯಲ್ಲಿ ವಿವಿಧ ರಾಜ್ಯಗಳ ಹಣಕಾಸು ಸಚಿವರು ಮತ್ತು ಉನ್ನತ ಸ್ತರದ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಮೇಲ್ಮನವಿ ನ್ಯಾಯಮಂಡಳಿಗಳ ಸ್ಥಾಪನೆ ವಿಚಾರದ ಬಗ್ಗೆ ಮಾತನಾಡಿದರು. ಪಾನ್ ಮಸಾಲ ಮತ್ತು ಗುಟ್ಕಾ ವ್ಯವಹಾರಗಳಲ್ಲಿ ಆಗುತ್ತಿರುವ ತೆರಿಗೆ ವಂಚನೆಯನ್ನು ನಿಯಂತ್ರಣಕ್ಕೆ ತರುವ ವ್ಯವಸ್ಥೆ ಬಗ್ಗೆಯೂ ಚರ್ಚಿಸಲಾಯಿತು. ಈ ಬಗ್ಗೆ ಗ್ರೂಪ್ ಆಫ್ ಮಿನಿಸ್ಟರ್​ನ ವರದಿಯನ್ನು ಬಹುತೇಕ ಒಪ್ಪಲಾಗಿದ್ದು, ಕೆಲ ತಿದ್ದುಪಡಿಗಳು ಮಾತ್ರ ಅಗತ್ಯ ಇದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಜಿಎಸ್​ಟಿ ಸಭೆಯಿಂದ ಬಂದ ಮುಖ್ಯ ಸುದ್ದಿ ಪರಿಹಾರ ಹಣದ್ದು. ಐದು ವರ್ಷಗಳ ಜಿಎಸ್​ಟಿ ಪರಿಹಾರದ ಬಾಕಿ ಹಣವಾದ 16,982 ಕೋಟಿ ರೂಪಾಯಿಯನ್ನು ಕೇಂದ್ರ ಸರ್ಕಾರ ತನ್ನ ಜೇಬಿನಿಂದಲೇ 6 ರಾಜ್ಯಗಳಿಗೆ ಹಂಚುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ದೆಹಲಿ, ತಮಿಳುನಾಡು, ತೆಲಂಗಾಣ ಮೊದಲಾದ 6 ರಾಜ್ಯಗಳಿಗೆ ಕೇಂದ್ರ ಸರ್ಕಾರ 16,982 ಕೋಟಿ ರೂ ವಿತರಿಸಲಿದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?