AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಕಸ್ಟಡಿಯಲ್ಲಿರುವ ಜೆಟ್ ಏರ್​ವೇಸ್ ಸಂಸ್ಥಾಪಕ ನರೇಶ್ ಗೋಯಲ್ ವಿರುದ್ಧ ಇರುವ ಅಕ್ರಮ ಆರೋಪಗಳೇನು?

Jet Airways Founder Naresh Goyal: ಬ್ಯಾಂಕ್​ನಿಂದ ಪಡೆದ ಸಾಲವನ್ನು ನಿಯಮಕ್ಕೆ ವಿರುದ್ಧವಾಗಿ ಖಾಸಗಿ ಕಾರ್ಯಗಳಿಗೆ ಬಳಕೆ ಮಾಡಿದ ಆರೋಪ 70 ವರ್ಷದ ಉದ್ಯಮಿ ನರೇಶ್ ಗೋಯಲ್ ಮೇಲಿದೆ. ಕೆನರಾ ಬ್ಯಾಂಕ್ ನೀಡಿದ ದೂರಿನ ಮೇರೆಗೆ ಜೆಟ್ ಏರ್ವೇಸ್ ಸಂಸ್ಥಾಪಕನ ಮೇಲೆ ಸಿಐಡಿ ಎಫ್​ಐಆರ್ ದಾಖಲಿಸಿತ್ತು. ಅದರ ಆಧಾರದ ಮೇಲೆ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದೀಗ ಅವರನ್ನು ಬಂಧಿಸಿ ಸೆಪ್ಟೆಂಬರ್ 11ರವರೆಗೂ ಕಸ್ಟಡಿಗೆ ಪಡೆದಿದೆ.

ಇಡಿ ಕಸ್ಟಡಿಯಲ್ಲಿರುವ ಜೆಟ್ ಏರ್​ವೇಸ್ ಸಂಸ್ಥಾಪಕ ನರೇಶ್ ಗೋಯಲ್ ವಿರುದ್ಧ ಇರುವ ಅಕ್ರಮ ಆರೋಪಗಳೇನು?
ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 03, 2023 | 10:53 AM

Share

ನವದೆಹಲಿ, ಸೆಪ್ಟೆಂಬರ್ 3: ಜೆಟ್ ಏರ್ವೇಸ್ ಸಂಸ್ಥಾಪಕ 70 ವರ್ಷದ ನರೇಶ್ ಗೋಯಲ್ (Naresh Goyal) ಅವರನ್ನು ಜಾರಿ ನಿರ್ದೇಶನಾಲಯ ಮೊನ್ನೆ ಶುಕ್ರವಾರ ರಾತ್ರಿ (ಸೆ. 1) ಬಂಧಿಸಿತ್ತು. 538 ಕೋಟಿ ರೂ ಮೊತ್ತದ ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣದಲ್ಲಿ ಅವರು ಸಿಲುಕಿಕೊಂಡಿದ್ದಾರೆ. ಕೆನರಾ ಬ್ಯಾಂಕ್​ನಿಂದ ಜೆಟ್ ಏರ್​ವೇಸ್ ಪಡೆದ ಸಾಲಗಳಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಗೋಯಲ್ ಅವರನ್ನು ಸೆಪ್ಟೆಂಬರ್ 11ರವರೆಗೂ ಇಡಿ ಕಸ್ಟಡಿಗೆ (ED Custody) ಒಪ್ಪಿಸಲಾಗಿದೆ. ಮನಿ ಲಾಂಡರಿಂಗ್ ಆ್ಯಕ್ಟ್ ಅಡಿಯಲ್ಲಿ ಗೋಯಲ್ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೆನರಾ ಬ್ಯಾಂಕ್ ದೂರಿನ ಮೇರೆಗೆ ಜೆಟ್ ಏರ್ವೇಸ್ ಸಂಸ್ಥೆಯ (Jet Airways) ನರೇಶ್ ಗೋಯಲ್, ಅವರ ಪತ್ನಿ ಅನಿತಾ ಹಾಗು ಸಂಸ್ಥೆಯ ಕೆಲ ಮಾಜಿ ಎಕ್ಸಿಕ್ಯೂಟಿವ್​ಗಳ ವಿರುದ್ಧ ಸಿಬಿಐ 2023ರ ಮೇ 3ರಂದು ಎಫ್​ಐಆರ್ ದಾಖಲಿಸಿತ್ತು. ಇದರ ಆಧಾರದ ಮೇಲೆ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಒಂದು ಸಮಯದಲ್ಲಿ ಭಾರತದ ಅತಿದೊಡ್ಡ ಖಾಸಗಿ ವೈಮಾನಿಕ ಸಂಸ್ಥೆ ಎನಿಸಿದ್ದ ಜೆಟ್ ಏರ್​ವೇಸ್ ಸಾಕಷ್ಟು ಸಾಲದ ಸಮಸ್ಯೆಗೆ ಸಿಲುಕಿ 2019ರಲ್ಲಿ ಕಾರ್ಯಾಚರಣೆ ನಿಲ್ಲಿಸಿತು. ಅದಾದ ಬಳಿಕ ಸಾಲ ಮರುರಚನೆಯ ಪ್ರಕ್ರಿಯೆ ನಡೆಯಿತು. 2021ರ ಜೂನ್​ನಲ್ಲಿ ಯುಎಐ ಮೂಲದ ಉದ್ಯಮಿ ಮುರಾರಿ ಲಾಲ್ ಜಲನ್ ಮತ್ತು ಲಂಡನ್ ಮೂಲದ ಕಲ್​ರಾಕ್ ಕ್ಯಾಪಿಟಲ್ ಸಂಸ್ಥೆಗಳು ಜಂಟಿಯಾಗಿ ಜೆಟ್ ಏರ್ವೇಸ್ ಅನ್ನು ಖರೀದಿಸಿದವು.

ಇದನ್ನೂ ಓದಿ: ಕೋಟಕ್ ಮಹೀಂದ್ರಾ ಬ್ಯಾಂಕ್ ಎಂಡಿ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ

ನರೇಶ್ ಗೋಯಲ್ ವಿರುದ್ಧ ಇರುವ ಅಕ್ರಮ ಆರೋಪಗಳೇನು?

ಕೆನರಾ ಬ್ಯಾಂಕ್ ಜೆಟ್ ಏರ್​ವೇಸ್ ಲಿ ಸಂಸ್ಥೆಗೆ (ಜೆಐಎಲ್) 848.86 ಕೋಟಿ ರೂ ಮೊತ್ತದಷ್ಟು ಸಾಲ ಮತ್ತು ಕ್ರೆಡಿಟ್ ಲಿಮಿಟ್ ಕೊಟ್ಟಿತ್ತು. ಈ ಪೈಕಿ 538.62 ಕೋಟಿ ರೂ ಹಣವನ್ನು ಮರುಪಾವತಿಸಲಾಗಿಲ್ಲ ಎಂಬುದು ಕೆನರಾ ಬ್ಯಾಂಕ್ ಆರೋಪ.

ಬ್ಯಾಂಕ್​ನಿಂದ ಪಡೆದ ಸಾಲದಲ್ಲಿ ಬಹಳಷ್ಟು ಹಣವನ್ನು ಗೋಯಲ್ ಕುಟುಂಬದ ಖಾಸಗಿ ವೆಚ್ಚಕ್ಕೆ ಬಳಸಿಕೊಳ್ಳಲಾಗಿದೆ. ಅಂದರೆ ಗೋಯಲ್ ಕುಟುಂಬದ ಮನೆ ನಿರ್ವಹಣೆ ವೆಚ್ಚಗಳು, ಒಡವೆ, ಪೀಠೋಕರಣ, ಬಟ್ಟೆಬರೆ ಇತ್ಯಾದಿಗಳಿಗೆ ವ್ಯಯಿಸಲಾಗಿದೆ. 538 ಕೋಟಿ ರೂ ಮೊತ್ತದ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂಬುದು ಕೆನರಾ ಬ್ಯಾಂಕ್ ನೀಡಿದ ದೂರಿನ ಪ್ರಮುಖ ಅಂಶ.

ಇದನ್ನೂ ಓದಿ: Moonwalk: ಚಂದ್ರಯಾನ 3 ಯಶಸ್ವಿಯಾಗಿದ್ದೇ ತಡ ಈ ಕಂಪನಿಗೆ ಶುಕ್ರದೆಸೆ -ಒಂದೇ ವಾರದಲ್ಲಿ 10000 ಕೋಟಿ ರೂ ಗಳಿಕೆ, ಇನ್ನು ಮುಂದೆಯೂ ಹಬ್ಬವೇ!

ಕೆನರಾ ಬ್ಯಾಂಕ್ ಮಾತ್ರವಲ್ಲ, ಎಸ್​ಬಿಐ ಸೇರಿ ಇನ್ನೂ ಹಲವು ಬ್ಯಾಂಕುಗಳಿಂದ ಜೆಟ್ ಏರ್​ವೇಸ್ ಸಂಸ್ಥೆ 6,000 ಕೋಟಿ ರೂಗಳಷ್ಟು ಸಾಲ ಪಡೆದು ತೀರಿಸಿಲ್ಲ. ಕೆನರಾ ಬ್ಯಾಂಕ್ ಅರ್ನ್ಸ್ಟ್ ಅಂಡ್ ಯಂಗ್ (ಇವೈ) ಎಂಬ ಆಡಿಟಿಂಗ್ ಕಂಪನಿ ವತಿಯಿಂದ ಜೆಟ್ ಏರ್ವೇಸ್ ಸಂಸ್ಥೆಯ ಲೆಕ್ಕಪತ್ರಗಳ ಆಡಿಟ್ ಮಾಡಿಸಿತು. ಆಗ ಅಕ್ರಮ ಹಣ ವರ್ಗಾವಣೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ