AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSP: ಯುಪಿಎ ಸರ್ಕಾರ ಇದ್ದಾಗ ಸ್ವಾಮಿನಾಥನ್ ಸಮಿತಿಯ ಎಂಎಸ್​ಪಿ ಶಿಫಾರಸನ್ನು ತಿರಸ್ಕರಿಸಿದ್ದು ಯಾಕೆ? ಇಲ್ಲಿದೆ ಕಾರಣ

Know Why UPA Govt Rejected Swaminathan Commission Recommendations: ಕೃಷಿ ವಿಜ್ಞಾನಿ ಹಾಗೂ ಭಾರತ ರತ್ನ ಪುರಸ್ಕೃತ ಎಂಎಸ್ ಸ್ವಾಮಿನಾಥನ್ ನೇತೃತ್ವದ ಆಯೋಗ ಎಂಎಸ್​ಪಿ ಸೇರಿದಂತೆ ಹಲವು ವಿಚಾರಗಳಲ್ಲಿ ಶಿಫಾರಸು ಮಾಡಿದೆ. 2010ರಲ್ಲಿ ಅಂದಿನ ಯುಪಿಎ ಸರ್ಕಾರ ಆಯೋಗದ ಶಿಫಾರಸಿನ ಪ್ರಕಾರ ಎಂಎಸ್​ಪಿ ಜಾರಿ ಮಾಡಲು ನಿರಾಕರಿಸಿತ್ತು. ಆಯೋಗದ ಸೂತ್ರದ ಪ್ರಕಾರ ಎಂಎಸ್​ಪಿ ಜಾರಿ ಮಾಡಿದರೆ ಮಾರುಕಟ್ಟೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಅಂದಿನ ಸರ್ಕಾರ ಹೇಳಿತ್ತು.

MSP: ಯುಪಿಎ ಸರ್ಕಾರ ಇದ್ದಾಗ ಸ್ವಾಮಿನಾಥನ್ ಸಮಿತಿಯ ಎಂಎಸ್​ಪಿ ಶಿಫಾರಸನ್ನು ತಿರಸ್ಕರಿಸಿದ್ದು ಯಾಕೆ? ಇಲ್ಲಿದೆ ಕಾರಣ
ರೈತರ ಪ್ರತಿಭಟನೆ ವೇಳೆ ದೆಹಲಿ ಪೊಲೀಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 14, 2024 | 2:26 PM

Share

ನವದೆಹಲಿ, ಫೆಬ್ರುವರಿ 14: ಭಾರತ ರತ್ನ ಪುರಸ್ಕೃತ ಎಂಎಸ್ ಸ್ವಾಮಿನಾಥನ್ ನೇತೃತ್ವದ ರಾಷ್ಟ್ರೀಯ ರೈತರ ಆಯೋಗ (National Commission for Farmers) ಅಥವಾ ಸ್ವಾಮಿನಾಥನ್ ಆಯೋಗ 2004ರಿಂದ 2006ರ ಅವಧಿಯಲ್ಲಿ ನಾಲ್ಕೈದು ವರದಿಗಳನ್ನು ಬಿಡುಗಡೆ ಮಾಡಿತ್ತು. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವೇ ರಚಿಸಿದ್ದ ಸ್ವಾಮಿನಾಥನ್ ಆಯೋಗ ಈ ವರದಿಗಳ ಮೂಲಕ ಎಂಎಸ್​ಪಿ ಸೇರಿದಂತೆ ರೈತರ ಬದುಕನ್ನು ಪರಿವರ್ತಿಸಬಲ್ಲಂತಹ ಹಲವು ಶಿಫಾರಸುಗಳನ್ನು ಮಾಡಿತ್ತು. ಆದರೆ, ಎರಡು ದಶಕವಾದರೂ ಸರ್ಕಾರಗಳು ಮಾತ್ರ ಇದನ್ನು ಜಾರಿಗೆ ತಂದಿಲ್ಲ. ರೈತರು ಕೈಗೊಳ್ಳುವ ಯಾವುದೇ ಪ್ರತಿಭಟನೆಯಲ್ಲಿ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ ಇದ್ದೇ ಇರುತ್ತದೆ. ಈಗಲೂ ಇದೇ ವರದಿಯು ರೈತರ ಪ್ರಮುಖ ಆಗ್ರಹ ಆಗಿದೆ. ಸ್ವಾಮಿನಾಥನ್ ಆಯೋಗ ಜಾರಿ ಮಾಡುವುದಾಗಿ ಚುನಾವಣಾ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದಿದ್ದ ಎನ್​ಡಿಎ ಸರ್ಕಾರವಾಗಲೀ, ಆಯೋಗ ರಚಿಸಿ ವರದಿಗಳನ್ನು ಸ್ವೀಕರಿಸಿದ್ದ ಸ್ವತಃ ಯುಪಿಎ ಸರ್ಕಾರವಾಗಲೀ ಎಂಎಸ್​ಪಿ ಬಗ್ಗೆ ಆಯೋಗದ ಶಿಫಾರಸು ಜಾರಿ ಮಾಡಲು ಮನಸು ಮಾಡಲಿಲ್ಲ ಅಥವಾ ಮಾಡಿಲ್ಲ ಎನ್ನುವುದು ವಾಸ್ತವ.

ಈ ಬಾರಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಬಂದರೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಎಂಎಸ್​ಪಿಗೆ ಕಾನೂನು ಗ್ಯಾರಂಟಿ ಕೊಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಅಷ್ಟಕ್ಕೂ ಈ ಹಿಂದಿನ ಯುಪಿಎ ಸರ್ಕಾರ ಎಂಸಿಪಿ ಕುರಿದ ಆಯೋಗದ ಶಿಫಾರಸ್ಸನ್ನು ಜಾರಿಗಳಿಸುವ ಇಚ್ಛಾ ಶಕ್ತಿ ಯಾಕೆ ತೋರಲಿಲ್ಲ?

ಇದನ್ನೂ ಓದಿ: ಫೆಬ್ರವರಿ 16 ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ

2010ರಲ್ಲಿ ಅಂದಿನ ಕೃಷಿ ಖಾತೆ ರಾಜ್ಯ ಸಚಿವ ಕೆ.ವಿ. ಥಾಮಸ್ ಅವರು ರಾಜ್ಯಸಭೆಗೆ ನೀಡಿದ ಮಾಹಿತಿ ಈ ಬಗ್ಗೆ ಬೆಳಕು ಚೆಲ್ಲುತ್ತದೆ. ‘ಒಟ್ಟಾರೆ ಉತ್ಪಾದನಾ ವೆಚ್ಚಕ್ಕಿಂತ ಶೇ. 50ರಷ್ಟು ಹೆಚ್ಚು ಬೆಲೆ ನಿಗದಿ ಮಾಡಿದರೆ ಮಾರುಕಟ್ಟೆಯನ್ನು ವಿಚಲಿತಗೊಳಿಸಬಹುದು. ಉತ್ಪಾದನಾ ವೆಚ್ಚದ ಜೊತೆ ಎಂಎಸ್​ಪಿಯನ್ನು ಯಾಂತ್ರಿಕವಾಗಿ ಜೋಡಿಸುವುದು ಕೆಲ ಸಂದರ್ಭದಲ್ಲಿ ವ್ಯತಿರಿಕ್ತ ಪರಿಣಾಮ ಬೀರಬಹುದು,’ ಎಂದು ಕೇಂದ್ರ ಸಚಿವರು ರಾಜ್ಯಸಭೆಗೆ ಉತ್ತರಿಸಿದ್ದರು.

ಸ್ವಾಮಿನಾಥನ್ ಆಯೋಗ ಎಂಎಸ್​ಪಿ ನಿಗದಿ ವಿಚಾರದಲ್ಲಿ ಮಾಡಿದ ಶಿಫಾರಸು ಏನು?

ಒಂದು ಬೆಳೆಯ ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಶೇ. 50ರಷ್ಟಾದರೂ ಹೆಚ್ಚು ಮೊತ್ತವನ್ನು ಕನಿಷ್ಠ ಬೆಂಬಲ ಬೆಲೆಯಾಗಿ ನಿಗದಿ ಮಾಡಬೇಕು ಎಂಬುದು ನ್ಯಾಷನಲ್ ಕಮಿಷನ್ ಫಾರ್ ಫಾರ್ಮ್ಸ್ ಆಯೋಗ ಮಾಡಿದ ಒಂದು ಪ್ರಮುಖ ಸಲಹೆ. ಇದನ್ನು ಸಿ2+50% ಸೂತ್ರವಾಗಿಯೂ ನೋಡಬಹುದು. ಈ ಸೂತ್ರದಲ್ಲಿ ರೈತರು ಒಂದು ಬೆಳೆ ಬೆಳೆಯಲು ಮಾಡುವ ಎಲ್ಲಾ ವೆಚ್ಚವನ್ನೂ ಒಳಗೊಳ್ಳಲಾಗುತ್ತದೆ. ಗೊಬ್ಬರ, ಔಷಧ ಇತ್ಯಾದಿಗೆ ಮಾಡಿರುವ ವೆಚ್ಚ ಮಾತ್ರವಲ್ಲದೇ, ಅಷ್ಟೂ ದಿನ ಶ್ರಮದ ಬೆಲೆಯನ್ನೂ ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಒಂದು ಎಕರೆಯಲ್ಲಿ ರಾಗಿ ಬೆಳೆಯಲು ಎಷ್ಟು ಮಂದಿ ಎಷ್ಟು ದಿನ ಜಮೀನಿನಲ್ಲಿ ದುಡಿದಿದ್ದಾರೆ, ಇದೂ ಕೂಡ ವೆಚ್ಚದಲ್ಲಿ ಒಳ್ಳಬೇಕು. ಆ ಜಮೀನಿನ ಬಾಡಿಗೆ ಬೆಲೆಯನ್ನೂ ಸೇರಿಸಬೇಕು. ಇಷ್ಟೆಲ್ಲಾ ಅಂಶಗಳನ್ನು ಒಳಗೊಂಡ ಒಟ್ಟಾರೆ ವೆಚ್ಚಕ್ಕೆ ಶೇ. 50ರಷ್ಟು ಹೆಚ್ಚು ಮೊತ್ತವನ್ನು ಎಂಎಸ್​ಪಿಯಾಗಿ ನಿಗದಿ ಮಾಡಬೇಕೆನ್ನುವುದು ಸ್ವಾಮಿನಾಥನ್ ಆಯೋಗ ಮಾಡಿದ ಶಿಫಾರಸು.

ಇದನ್ನೂ ಓದಿ: ತರಾತುರಿಯಲ್ಲಿ ಎಂಎಸ್​​ಪಿ ತರಲು ಸಾಧ್ಯವಿಲ್ಲ; ಸರ್ಕಾರದೊಂದಿಗೆ ಮಾತುಕತೆಗೆ ರೈತರು ಮುಂದಾಗಬೇಕು:ಕೇಂದ್ರ ಕೃಷಿ ಸಚಿವ ಮುಂಡಾ

ಆಯೋಗದ ಎಂಎಸ್​ಪಿ ಸೂತ್ರದ ಅನುಷ್ಠಾನ ಯಾಕೆ ಕಷ್ಟ?

ಸ್ವಾಮಿನಾಥನ್ ಆಯೋಗದ ಶಿಫಾರಸಿನ ಪ್ರಕಾರ ಎಲ್ಲಾ ಬೆಳೆಗಳಿಗೂ ಎಂಎಸ್​ಪಿ ನಿಗದಿ ಮಾಡಿದರೆ ಸರ್ಕಾರ ಬಳಿ ಉಳಿಯುವ ಹಣ ಅಲ್ಪ ಮಾತ್ರ. ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಸರ್ಕಾರ ಈಗ ಬೇರೆ ಅಭಿವೃದ್ಧಿ ಕಾರ್ಯಗಳಿಗೆ ಹಿಂದೇಟು ಹಾಕುವ ಪರಿಸ್ಥಿತಿ ಇದೆ. ಕೇಂದ್ರವೂ ಇದೇ ಸ್ಥಿತಿಗೆ ಸಿಲುಕಬಹುದು ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!