AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata iPhone Deal: ಕೋಲಾರದಲ್ಲಿ ವಿಸ್ಟ್ರಾನ್ ಐಫೋನ್ ಘಟಕ ಖರೀದಿ: ಮುಂದಿನ ತಿಂಗಳೇ ಟಾಟಾ ಡೀಲ್?

Kolar Wistron Unit: ಕೋಲಾರದಲ್ಲಿ ವಿಸ್ಟ್ರಾನ್​ನಿಂದ ಸ್ಥಾಪನೆಯಾಗಿರುವ ಐಫೋನ್ ಅಸೆಂಬ್ಲಿಂಗ್ ಘಟಕ ಖರೀದಿಸಲು ಟಾಟಾ ಗ್ರೂಪ್ ಆಗಸ್ಟ್ ತಿಂಗಳಲ್ಲಿ ಒಪ್ಪಂದಕ್ಕೆ ಸಹಿಹಾಕಲಿದೆ. ಈ ಘಟಕದಲ್ಲಿ ಐಫೋನ್14 ಮೊಬೈಲ್​ನ ಅಸೆಂಬ್ಲಿಂಗ್ ನಡೆಯುತ್ತದೆ.

Tata iPhone Deal: ಕೋಲಾರದಲ್ಲಿ ವಿಸ್ಟ್ರಾನ್ ಐಫೋನ್ ಘಟಕ ಖರೀದಿ: ಮುಂದಿನ ತಿಂಗಳೇ ಟಾಟಾ ಡೀಲ್?
ವಿಸ್ಟ್ರಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 11, 2023 | 2:55 PM

Share

ಬೆಂಗಳೂರು: ಕೋಲಾರದಲ್ಲಿರುವ ವಿಸ್ಟ್ರಾನ್ ಕಂಪನಿಯ ಐಫೋನ್ ಅಸೆಂಬ್ಲಿಂಗ್ ಘಟಕವನ್ನು (iPhone assembling unit) ಖರೀದಿಸಲಿರುವ ಟಾಟಾ ಸಂಸ್ಥೆ, ಮುಂದಿನ ತಿಂಗಳೇ ಒಪ್ಪಂದಕ್ಕೆ ಸಹಿಹಾಕುವ ಸಾಧ್ಯತೆ ಇದೆ. ಬ್ಲೂಮ್​ಬರ್ಗ್​ನಲ್ಲಿ ಪ್ರಕಟವಾಗಿರುವ ವರದಿ ಪ್ರಕಾರ ಆಗಸ್ಟ್ ತಿಂಗಳಲ್ಲಿ ವಿಸ್ಟ್ರಾನ್ ಐಫೋನ್ ಫ್ಯಾಕ್ಟರಿ (Wistron iPhone Unit) ಖರೀದಿಸುವ ಒಪ್ಪಂದಕ್ಕೆ ಟಾಟಾ ಸಹಿ ಹಾಕುವ ನಿರೀಕ್ಷೆ ಇದೆ. ಅಂದಾಜು 5,000 ಕೋಟಿ ರೂ ಮೌಲ್ಯದ ಈ ಘಟಕದಲ್ಲಿ 10,000ಕ್ಕೂ ಹೆಚ್ಚು ಉದ್ಯೋಗಿಗಳಿದ್ದು ಐಫೋನ್14 ಮಾಡೆಲ್​ನ ಫೋನ್​ಗಳ ಅಸೆಂಬ್ಲಿಂಗ್ ಕೆಲಸ ಇಲ್ಲಿ ನಡೆಯುತ್ತದೆ. ಈ ಘಟಕವನ್ನು ಖರೀದಿಸಿದ ಬಳಿಕ ಟಾಟಾ ಸಂಸ್ಥೆ ಐಫೋನ್ ತಯಾರಿಕೆಯ ಕೆಲಸ ಮುಂದುವರಿಸಿಕೊಂಡು ಹೋಗುತ್ತದೆ. ಈ ಒಪ್ಪಂದ ಯಶಸ್ವಿಯಾದರೆ ಐಫೋನ್ ತಯಾರಿಸುವ ಮೊದಲ ಭಾರತೀಯ ಕಂಪನಿ ಎಂಬ ಶ್ರೇಯಸ್ಸು ಟಾಟಾ ಸಂಸ್ಥೆಯದ್ದಾಗುತ್ತದೆ.

ವಿಸ್ಟ್ರಾನ್​ನ ಈ ಐಫೋನ್ ಘಟಕದಲ್ಲಿ ಸದ್ಯ 10,000ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದಾರೆ. ಉದ್ಯೋಗಿಗಳ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಿಸಲು ವಿಸ್ಟ್ರಾನ್ ನಿಶ್ಚಯಿಸಿತ್ತು. ಹಾಗೆಯೇ, ಈ ಘಟಕದಿಂದ 1.8 ಬಿಲಿಯನ್ ಡಾಲರ್ (ಸುಮಾರು 15,000 ಕೋಟಿ ರೂ) ಮೌಲ್ಯದ ಐಫೋನ್​ಗಳನ್ನು ಸರಬರಾಜು ಮಾಡುವ ಗುರಿ ಇಡಲಾಗಿದೆ. ಹೀಗಾಗಿ, ಈ ಐಫೋನ್ ಯೋಜನೆ ಟಾಟಾಗೆ ಬಹಳ ಮುಖ್ಯ ಎನಿಸಬಹುದು.

ಇದನ್ನೂ ಓದಿFoxconn: ಫಾಕ್ಸ್​ಕಾನ್ ಮತ್ತು ವೇದಾಂತ ಬೇರ್ಪಟ್ಟಿದ್ದು ಸಕಾರಾತ್ಮಕ ಬೆಳವಣಿಗೆಯಾ? ಹೆಚ್ಚುವರಿ ಸೆಮಿಕಂಡಕ್ಟರ್ ಘಟಕ ಶುರುವಾಗುತ್ತಾ?

ಆ್ಯಪಲ್ ಕಂಪನಿಯ ಐಫೋನ್ ಮತ್ತಿತರ ಉತ್ಪನ್ನಗಳು ಬಹುತೇಕ ಚೀನಾದಲ್ಲೇ ತಯಾರಾಗುತ್ತವೆ. ವಿಸ್ಟ್ರಾನ್, ಫಾಕ್ಸ್​ಕಾನ್ ಮತ್ತು ಪೆಗಾಟ್ರಾನ್ ಸಂಸ್ಥೆಗಳು ಆ್ಯಪಲ್​ಗಾಗಿ ಐಫೋನ್ ಮತ್ತಿತರ ಉತ್ಪನ್ನಗಳನ್ನು ಅಸೆಂಬ್ಲಿಂಗ್ ಮಾಡಿಕೊಡುತ್ತವೆ. ಇದರಲ್ಲಿ ಫಾಕ್ಸ್​ಕಾನ್ ಮತ್ತು ಪೆಗಾಟ್ರಾನ್ ಅತಿಹೆಚ್ಚು ಐಫೋನ್ ತಯಾರಿಸುತ್ತವೆ. ಇವೆರಡೂ ಕಂಪನಿಗಳು ಭಾರತದಲ್ಲಿ ಘಟಕಗಳನ್ನು ಹೊಂದಿವೆ. ಅ್ಯಪಲ್ ಕಂಪನಿ ತನ್ನ ಐಫೋನ್ ಉತ್ಪಾದನೆಯ ಒಂದಷ್ಟು ಭಾಗವನ್ನು ಚೀನಾದಿಂದ ಹೊರಗೆ ವರ್ಗಾಯಿಸುತ್ತಿದೆ. ಈ ನಿಟ್ಟಿನಲ್ಲಿ ಟಾಟಾ ಸಂಸ್ಥೆಗೆ ಇನ್ನಷ್ಟು ಹೊಣೆಗಾರಿಕೆ ಮತ್ತು ಒಪ್ಪಂದಗಳು ಸಿಗುವ ನಿರೀಕ್ಷೆ ಇದೆ.

ಮೇ ತಿಂಗಳಲ್ಲಿ ಆ್ಯಪಲ್ ಕಂಪನಿಯ 10,000 ಕೋಟಿ ರೂ ಮೌಲ್ಯದ ಐಫೋನ್​ಗಳು ಭಾರತದಿಂದ ರಫ್ತಾಗಿದ್ದವು. ಏಪ್ರಿಲ್ ಮತ್ತು ಮೇ ಈ ಎರಡು ತಿಂಗಳಲ್ಲಿ 20,000 ಕೋಟಿ ರೂ ಮೌಲ್ಯದ ಐಫೋನ್ ರಫ್ತಾಗಿದ್ದವು. ಹಿಂದಿನ ವರ್ಷದ (2022) ಏಪ್ರಿಲ್, ಮೇ ತಿಂಗಳುಗಳಲ್ಲಿ ಐಫೋನ್ ರಫ್ತು 9,066 ಕೋಟಿ ರೂನಷ್ಟಿತ್ತು. ಕಳೆದ ಒಂದು ವರ್ಷದಲ್ಲಿ ಐಫೋನ್ ಉತ್ಪಾದನೆ ಗಣನೀಯವಾಗಿ ಹೆಚ್ಚಾಗಿದೆ. 2022ರ ಏಪ್ರಿಲ್ ತಿಂಗಳಲ್ಲಿ ಚೆನ್ನೈನಲ್ಲಿ ಪೆಗಾಟ್ರಾನ್ ಐಫೋನ್ ಅಸೆಂಬ್ಲಿಂಗ್ ಕಾರ್ಯ ಆರಂಭಿಸಿತ್ತು. ಹೀಗಾಗಿ, ಕಳೆದ ಒಂದು ವರ್ಷದಲ್ಲಿ ಭಾರತದಲ್ಲಿ ಐಫೋನ್ ಉತ್ಪಾದನೆ ಬಹಳ ಹೆಚ್ಚಳ ಕಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ