AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KV Kamath: ರಿಲಯನ್ಸ್​ ಇಂಡಸ್ಟ್ರೀಸ್​ ಸ್ವತಂತ್ರ ನಿರ್ದೇಶಕರಾಗಿ ಕುಂದಾಪುರದ ಕೆವಿ ಕಾಮತ್ ನೇಮಕ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ 74 ವರ್ಷದ ಕುಂದಾಪುರ ವಾಮನ ಕಾಮತ್ 5 ವರ್ಷಗಳ ಅವಧಿಗೆ ರಿಲಯನ್ಸ್​ ಇಂಡಸ್ಟ್ರೀಸ್ ಸ್ವತಂತ್ರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

KV Kamath: ರಿಲಯನ್ಸ್​ ಇಂಡಸ್ಟ್ರೀಸ್​ ಸ್ವತಂತ್ರ ನಿರ್ದೇಶಕರಾಗಿ ಕುಂದಾಪುರದ ಕೆವಿ ಕಾಮತ್ ನೇಮಕ
ಕೆ.ವಿ. ಕಾಮತ್
TV9 Web
| Edited By: |

Updated on:Nov 05, 2022 | 9:54 AM

Share

ಮುಂಬೈ: ಕುಂದಾಪುರ ಮೂಲದ ಕನ್ನಡಿಗರಾದ ಕೆವಿ ಕಾಮತ್ (K V Kamath) ಅವರನ್ನು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ (Reliance Industries Ltd) ಸ್ವತಂತ್ರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿರುವ 74 ವರ್ಷದ ಕುಂದಾಪುರ ವಾಮನ ಕಾಮತ್ 5 ವರ್ಷಗಳ ಅವಧಿಗೆ ರಿಲಯನ್ಸ್​ ಇಂಡಸ್ಟ್ರೀಸ್ ಸ್ವತಂತ್ರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಐಐಎಂ ಅಹಮದಾಬಾದ್​ನ ಪದವೀಧರರಾದ ಕೆ.ವಿ. ಕಾಮತ್ ಖ್ಯಾತ ಬ್ಯಾಂಕರ್ ಆಗಿದ್ದು, ಅವರು 1971ರಲ್ಲಿ ಐಸಿಐಸಿಐ ಬ್ಯಾಂಕ್​​ನಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದರು. 1988ರಲ್ಲಿ ಅವರು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ (ADB)ಗೆ ತೆರಳಿದರು. 1996ರಲ್ಲಿ ಐಸಿಐಸಿಐಗೆ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಆಗಿ ನೇಮಕಗೊಂಡರು. 2009ರಲ್ಲಿ ಕೆವಿ ಕಾಮತ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ನಿವೃತ್ತರಾದರು. ಬಳಿಕ 2015ರವರೆಗೆ ಐಸಿಐಸಿಐ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು.

ಕೆವಿ ಕಾಮತ್ ಇನ್ಫೋಸಿಸ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. 2015ರಲ್ಲಿ ಅವರು ಬ್ರಿಕ್ಸ್ ದೇಶಗಳು ಸ್ಥಾಪಿಸಿದ ಹೊಸ ಅಭಿವೃದ್ಧಿ ಬ್ಯಾಂಕ್‌ನ ಮೊದಲ ಅಧ್ಯಕ್ಷರಾಗಿ ನೇಮಕಗೊಂಡರು. ಅವರು 2020ರಲ್ಲಿ ಆ ಸ್ಥಾನದಿಂದ ನಿವೃತ್ತರಾದರು. ಕೆವಿ ಕಾಮತ್ ಅವರು ಪ್ರಸ್ತುತ ನ್ಯಾಷನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್ಫ್ರಾಸ್ಟ್ರಕ್ಚರ್ ಆ್ಯಂಡ್ ಡೆವಲಪ್‌ಮೆಂಟ್‌ (NaBFID) ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: Reliance Jio: 100GB ಫ್ರೀ ಡೇಟಾ: ರಿಲಯನ್ಸ್​ ಜಿಯೋದಿಂದ ಹಿಂದೆಂದೂ ನೀಡಿರದ ಬಂಪರ್ ಆಫರ್

ರಿಲಯನ್ಸ್​ ಇಂಡಸ್ಟ್ರೀಸ್​​ ನಿರ್ದೇಶಕರ ಮಂಡಳಿಯು ಶುಕ್ರವಾರ ನಡೆಸಿದ ಸಭೆಯಲ್ಲಿ ಮಾನವ ಸಂಪನ್ಮೂಲ, ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕೆ.ವಿ. ಕಾಮತ್ ಅವರನ್ನು ರಿಲಯನ್ಸ್​ ಕಂಪನಿಯ ಸ್ವತಂತ್ರ ನಿರ್ದೇಶಕರಾಗಿ ನೇಮಕ ಮಾಡಲು ಷೇರುದಾರರಿಗೆ ಶಿಫಾರಸು ಮಾಡಿದೆ. ಅವರನ್ನು ರಿಲಯನ್ಸ್​​ ಸ್ಟ್ರಾಟಜಿಕ್ ಇನ್ವೆಸ್ಟ್​ಮೆಂಟ್ ಲಿಮಿಟೆಡ್​​ನ ಸ್ವತಂತ್ರ ನಿರ್ದೇಶಕರನ್ನಾಗಿ ಹಾಗೂ ನಾನ್ ಎಕ್ಸಿಕ್ಯೂಟಿವ್ ಚೇರ್ಮನ್ ಆಗಿಯೂ ನೇಮಕ ಮಾಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:14 am, Sat, 5 November 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್