AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಕಿಂಡ್ರಿಲ್​ನಿಂದ ಬೆಂಗಳೂರಿನಲ್ಲಿ ಎಐ ಲ್ಯಾಬ್; ಭಾರತದಲ್ಲಿ 2.25 ಬಿಲಿಯನ್ ಡಾಲರ್ ಹೂಡಿಕೆ

Kyndryl to establish AI innovation lab in Bengaluru: ಅಮೆರಿಕ ಮೂಲದ ಐಟಿ ಇನ್​ಫ್ರಾಸ್ಟ್ರಕ್ಚರ್ ಸರ್ವಿಸ್ ಕಂಪನಿಯಾದ ಕಿಂಡ್ರಿಲ್ ಬೆಂಗಳೂರಿನಲ್ಲಿ ಎಐ ಲ್ಯಾಬ್ ನಿರ್ಮಿಸಲಿದೆ. ಸಿಂಗಾಪುರ್ ಮತ್ತು ಬ್ರಿಟನ್​ನಲ್ಲಿ ಇರುವ ಅದರ ಎಐ ಲ್ಯಾಬ್ ಮಾದರಿಯಲ್ಲಿ ಬೆಂಗಳೂರಿನಲ್ಲೂ ಸ್ಥಾಪನೆಯಾಗಲಿದೆ. ಈ ಲ್ಯಾಬ್ ಸ್ಥಾಪನೆಯೂ ಸೇರಿ ಭಾರತದಲ್ಲಿ ಈ ಕಂಪನಿ ಮುಂದಿನ 3 ವರ್ಷದಲ್ಲಿ 2.25 ಬಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ.

Bengaluru: ಕಿಂಡ್ರಿಲ್​ನಿಂದ ಬೆಂಗಳೂರಿನಲ್ಲಿ ಎಐ ಲ್ಯಾಬ್; ಭಾರತದಲ್ಲಿ 2.25 ಬಿಲಿಯನ್ ಡಾಲರ್ ಹೂಡಿಕೆ
ಕಿಂಡ್ರಿಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 22, 2025 | 11:58 AM

Share

ನವದೆಹಲಿ, ಆಗಸ್ಟ್ 22: ವಿಶ್ವದ ಅತಿದೊಡ್ಡ ಐಟಿ ಇನ್​ಫ್ರಾಸ್ಟ್ರಕ್ಚರ್ ಸರ್ವಿಸ್ ಕಂಪನಿಯಾದ ಕಿಂಡ್ರಿಲ್ (Kyndryl) ಭಾರತದಲ್ಲಿ ಮುಂದಿನ ಮೂರು ವರ್ಷದಲ್ಲಿ 2.25 ಬಿಲಿಯನ್ ಡಾಲರ್ (ಸುಮಾರು 20,000 ಕೋಟಿ ರೂ) ಹೂಡಿಕೆ ಮಾಡಲು ಬದ್ಧವಾಗಿದೆ. ಭವಿಷ್ಯದ ಅಗತ್ಯಗಳಿಗೆ ಅಗತ್ಯವಾಗಿರುವ ಪ್ರತಿಭೆಗಳನ್ನು ಬೆಳೆಸುವುದರಿಂದ ಹಿಡಿದು ಎಐ ಲ್ಯಾಬ್ ಸ್ಥಾಪಿಸುವವರೆಗೂ ವಿವಿಧ ಕಾರ್ಯಗಳನ್ನು ಕಿಂಡ್ರಿಲ್ ಯೋಜಿಸಿದೆ. ಇದರಲ್ಲಿ ಬೆಂಗಳೂರಿನಲ್ಲಿ ಎಐ ಇನ್ನೋವೆಶನ್ ಲ್ಯಾಬ್ (AI Lab in Bengaluru) ಸ್ಥಾಪನೆಯ ಯೋಜನೆಯೂ ಸೇರಿದೆ.

ಬೆಂಗಳೂರಿನಲ್ಲಿ ಕಿಂಡ್ರಿಲ್​ನಿಂದ ಎಐ ಲ್ಯಾಬ್

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಐಟಿ ಪ್ರತಿಭೆಗಳ ಅಭಿವೃದ್ಧಿ, ಡಿಜಿಟಲ್ ಟ್ರೈನಿಂಗ್ ಇತ್ಯಾದಿ ವಿಚಾರದಲ್ಲಿ ಭಾರತ ಸರ್ಕಾರಕ್ಕೆ ನೆರವಾಗಲೆಂದು ಕಿಂಡ್ರಿಲ್ ಸಂಸ್ಥೆ ಬೆಂಗಳೂರಿನಲ್ಲಿ ಎಐ ಇನ್ನೋವೇಶನ್ ಲ್ಯಾಬ್ ಸ್ಥಾಪಿಸಲು ಯೋಜಿಸಿದೆ. ಎಐ ಶಕ್ತ ಕನ್ಸಲ್ಟಿಂಗ್ ಸರ್ವಿಸ್ ಬಲಗೊಳಿಸಲು ಈ ಲ್ಯಾಬ್ ಸಹಾಯವಾಗಲಿದೆ ಎಂಬುದು ಕಿಂಡ್ರಿಲ್ ಭಾವನೆ.

ಇದನ್ನೂ ಓದಿ: ಚೀನಾ ನೇತೃತ್ವದ ಆರ್​ಸಿಇಪಿಗೆ ಸೇರಲು ಭಾರತ ಯೋಜನೆ; ಆರು ವರ್ಷದ ಹಿಂದೆ ತೊರೆದಿದ್ದ ಗುಂಪಿಗೆ ಮತ್ತೆ ಸೇರ ಹೊರಟಿರುವುದು ಯಾಕೆ?

ಈ ಎಐ ಲ್ಯಾಬ್​ನಲ್ಲಿ ಡಾಟಾ ಸೈಂಟಿಸ್ಟ್​ಗಳು, ಕನ್ಸಲ್ಟೆಂಟ್​ಗಳು ಮೊದಲಾದವರು ಇರಲಿದ್ದಾರೆ. ಬ್ರಿಟನ್, ಸಿಂಗಾಪುರದಲ್ಲೂ ಕಿಂಡ್ರಿಲ್ ಎಐ ಲ್ಯಾಬ್​ಗಳನ್ನು ಹೊಂದಿದೆ. ಅದೇ ಮಾದರಿಯಲ್ಲೇ ಬೆಂಗಳೂರಿನಲ್ಲಿ ಎಐ ಲ್ಯಾಬ್ ಸ್ಥಾಪಿಸಲಿದೆ. ಎಐ ಕೌಶಲ್ಯ, ಡಾಟಾ, ಕ್ಲೌಡ್, ಪ್ಲಾಟ್​ಫಾರ್ಮ್ ಎಂಜಿನಿಯರಿಂಗ್ ಇತ್ಯಾದಿ ತಂತ್ರಜ್ಞಾನಗಳಲ್ಲಿ ಉದ್ಯೋಗಿಗಳಿಗೆ ತರಬೇತಿ ನೀಡಿ ಭವಿಷ್ಯದ ಅಗತ್ಯಗಳಿಗೆ ಅಣಿಗೊಳಿಸುವುದು ಎಐ ಲ್ಯಾಬ್​ನ ಮುಖ್ಯ ಗುರಿಯಾಗಿದೆ. ಇದು ಕಂಪನಿಯ ಒಟ್ಟಾರೆ ಟ್ರೈನಿಂಗ್ ಸೆಂಟರ್ ರೀತಿ ಕಾರ್ಯನಿರ್ವಹಿಸುವ ಸಾದ್ಯತೆ ಇದೆ.

ಭಾರತ ಸರ್ಕಾರದೊಂದಿಗೆ ವಿವಿಧ ಒಪ್ಪಂದ ಮಾಡಿಕೊಳ್ಳಲಿರುವ ಕಿಂಡ್ರಿಲ್

ಅಮೆರಿಕ ಮೂಲದ ಈ ಐಟಿ ಇನ್​ಫ್ರಾಸ್ಟ್ರಕ್ಚರ್ ಸರ್ವಿಸ್ ಕಂಪನಿಯು ಭಾರತ ಸರ್ಕಾರದೊಂದಿಗೆ ವಿವಿಧ ಒಪ್ಪಂದ ಮತ್ತು ಸಹಭಾಗಿತ್ವ ಮಾಡಿಕೊಳ್ಳುತ್ತಿದೆ. ಆಡಳಿತದಲ್ಲಿ ಎಐ ನೆರವು ಪಡೆಯುವುದು, ಉದ್ಯಮ ನಿಯಮಗಳ ಸುಧಾರಣೆ ಇತ್ಯಾದಿ ವಿಚಾರದಲ್ಲಿ ಸರ್ಕಾರಕ್ಕೆ ಹಾಗೂ ವಿವಿಧ ಇಲಾಖೆಗಳಿಗೆ ಕಿಂಡ್ರಿಲ್ ಸಲಹೆಗಳನ್ನು ನೀಡಲಿದೆ.

ಇದನ್ನೂ ಓದಿ: ಆನ್​ಲೈನ್ ಗೇಮಿಂಗ್ ಬಿಲ್ 2025; ಡ್ರೀಮ್11ನಂತಹ ಆ್ಯಪ್​ಗಳ ಕತೆ ಏನು? ಇಲ್ಲಿದೆ ಈ ಮಸೂದೆಯ ಮುಖ್ಯಾಂಶಗಳು

ಕಿಂಡ್ರಿಲ್ ಸ್ಕಿಲ್ಲಿಂಗ್ ಪ್ರೋಗ್ರಾಮ್

ಕಿಂಡ್ರಿಲ್ ಸಂಸ್ಥೆಯು ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ಭಾರತದಾದ್ಯಂತ ಸ್ಕಿಲ್ಲಿಂಗ್ ಪ್ರೋಗ್ರಾಮ್ ಹಮ್ಮಿಕೊಳ್ಳಲಿದೆ. ಕೆಂಡ್ರಿಲ್ ಫೌಂಡೇಶನ್ ಮೂಲಕ ಎರಡನೇ ಸ್ತರ ಮತ್ತು ಮೂರನೇ ಸ್ತರ ನಗರಗಳಲ್ಲಿ ಎರಡು ಲಕ್ಷ ಮಂದಿಗೆ ಡಿಜಿಟಲ್ ಕೌಶಲ್ಯಗಳನ್ನು ಹೆಚ್ಚಿಸುವಂತಹ ತರಬೇತಿ ಒದಗಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ