AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakshadweep Resorts: ಲಕ್ಷದ್ವೀಪದಲ್ಲಿ ನಿರ್ಮಾಣವಾಗಲಿವೆ ಎರಡು ವಿಶ್ವದರ್ಜೆ ರೆಸಾರ್ಟ್​ಗಳು; ತಾಜ್ ಗ್ರೂಪ್​ನ ಯೋಜನೆ

World Class Taj Hotels in Lakshadweep: ಲಕ್ಷದ್ವೀಪದ ಎರಡು ದ್ವೀಪಗಳಲ್ಲಿ ತಾಜ್ ಹೋಟೆಲ್ ಮತ್ತು ರೆಸಾರ್ಟ್​ಗಳು ನಿರ್ಮಿತವಾಗುತ್ತಿವೆ. 2026ಕ್ಕೆ ಇವು ಅನಾವರಣಗೊಳ್ಳುತ್ತವೆ. 2023ರ ಜನವರಿ ತಿಂಗಳಲ್ಲೇ ಟಾಟಾ ಗ್ರೂಪ್ ಸಂಸ್ಥೆ ಎರಡು ವಿಶ್ವದರ್ಜೆ ಹೋಟೆಲ್​ಗಳನ್ನು ಲಕ್ಷದ್ವೀಪದಲ್ಲಿ ನಿರ್ಮಿಸುವುದಾಗಿ ಘೋಷಣೆ ಮಾಡಿತ್ತು. ಸುಹೇಲಿ ಮತ್ತು ಕಡಮತ್ ದ್ವೀಪಗಳಲ್ಲಿ ನಿರ್ಮಾಣವಾಗುತ್ತಿರುವ ತಾಜ್ ಹೋಟೆಲ್​ಗಳು ತಲಾ 110 ಲಕ್ಷುರಿ ವಿಲ್ಲಾಗಳನ್ನು ಹೊಂದಿರುತ್ತವೆ.

Lakshadweep Resorts: ಲಕ್ಷದ್ವೀಪದಲ್ಲಿ ನಿರ್ಮಾಣವಾಗಲಿವೆ ಎರಡು ವಿಶ್ವದರ್ಜೆ ರೆಸಾರ್ಟ್​ಗಳು; ತಾಜ್ ಗ್ರೂಪ್​ನ ಯೋಜನೆ
ಲಕ್ಷದ್ವೀಪ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 09, 2024 | 11:14 AM

Share

ನವದೆಹಲಿ, ಜನವರಿ 9: ಮಾಲ್ಡೀವ್ಸ್ ವಿವಾದದ ಮಧ್ಯೆ ಲಕ್ಷದ್ವೀಪದ (lakshadweep) ಬಗ್ಗೆ ಅಂತಾರಾಷ್ಟ್ರೀಯ ಗಮನ ನೆಟ್ಟಿದ್ದು, ಜೊತೆ ಜೊತೆಗೆ ಅಲ್ಲಿನ ಇನ್​ಫ್ರಾಸ್ಟ್ರಕ್ಚರ್ ಬಗ್ಗೆ ನಕಾರಾತ್ಮಕ ಧ್ವನಿಗಳೂ ಸೇರಿವೆ. ಇದಕ್ಕೆ ಉತ್ತರವೋ ಎಂಬಂತೆ ಲಕ್ಷದ್ವೀಪದಲ್ಲಿ ವಿಶ್ವದರ್ಜೆಯ ಹೋಟೆಲ್, ರೆಸಾರ್ಟ್​ಗಳು ನಿರ್ಮಾಣವಾಗುತ್ತಿರುವ ಸುದ್ದಿ ಬಂದಿದೆ. ಟಾಟಾ ಗ್ರೂಪ್ ಸಂಸ್ಥೆ ಲಕ್ಷದ್ವೀಪದ ಸುಹೇಲಿ (suheli island) ಮತ್ತು ಕಡಮತ್ (Kadmat island) ದ್ವೀಪಗಳಲ್ಲಿ ಎರಡು ರೆಸಾರ್ಟ್ ನಿರ್ಮಿಸುತ್ತಿದೆ. ಇವು 2026ಕ್ಕೆ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಲಕ್ಷದ್ವೀಪದಲ್ಲಿ ಟಾಟಾ ಸಂಸ್ಥೆಯಿಂದ ರೆಸಾರ್ಟ್​ಗಳ ನಿರ್ಮಾಣ ಮಾಡುವ ನಿರ್ಧಾರ ದಿಢೀರ್ ಕೈಗೊಂಡಿದ್ದಲ್ಲ. 2023ರ ಜನವರಿ ತಿಂಗಳಲ್ಲೇ ಟಾಟಾ ಗ್ರೂಪ್ ಸಂಸ್ಥೆ ಲಕ್ಷದ್ವೀಪದಲ್ಲಿ ಗ್ರೀನ್​ಫೀಲ್ಡ್ ಪ್ರಾಜೆಕ್ಟ್ ಆರಂಭಿಸುವುದಾಗಿ ಘೋಷಿಸಿತ್ತು. ಟಾಟಾ ಸನ್ಸ್​ಗೆ ಸೇರಿದ ಐಎಚ್​ಸಿಎಲ್ ಸಂಸ್ಥೆ ಗ್ರೀನ್​ಫೀಲ್ಡ್ ಪ್ರಾಜೆಕ್ಟ್ ಅಡಿಯಲ್ಲಿ ತಾಜ್ ಬ್ರ್ಯಾಂಡ್​ನ ಎರಡು ರೆಸಾರ್ಟ್​​ಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಇದನ್ನೂ ಓದಿ: EaseMyTrip: ವೈಯಕ್ತಿಕ ಲಾಭಕ್ಕಿಂತ ರಾಷ್ಟ್ರ ಹಿತಾಸಕ್ತಿ ಮುಖ್ಯ; ಮಾಲ್ಡೀವ್ಸ್ ಅಲ್ಲ, ಲಕ್ಷದ್ವೀಪ, ಅಯೋಧ್ಯೆ ಪ್ಯಾಕೇಜ್ ಕೊಡ್ತೀವಿ: ಈಸ್ ಮೈ ಟ್ರಿಪ್

ಈಗ ಲಕ್ಷದ್ವೀಪದ ಇನ್​ಫ್ರಾಸ್ಟ್ರಕ್ಚರ್ ಬಗ್ಗೆ ಪ್ರಶ್ನೆಗಳು ಉದ್ಭವವಾದ ಹಿನ್ನೆಲೆಯಲ್ಲಿ ಟಾಟಾದ ತಾಜ್ ಬ್ರ್ಯಾಂಡ್ ಹೋಟೆಲ್​ಗಳ ಸಂಗತಿ ಮುನ್ನೆಲೆಗೆ ಬಂದಿದೆ.

‘ಲಕ್ಷದ್ವೀಪದಲ್ಲಿ ಬಹಳ ರಮ್ಯವೆನಿಸುವ ಬೀಚ್​ಗಳು ಮತ್ತು ಹವಳ ಬಂಡೆಗಳು (coral reef) ಕಣ್ಮನ ಸೆಳೆಯುತ್ತವೆ. ಎರಡು ವಿಶ್ವದರ್ಜೆ ತಾಜ್ ರೆಸಾರ್ಟ್​ಗಳು ದೇಶೀಯ ಮತ್ತು ವಿದೇಶೀ ಪ್ರವಾಸಿಗರನ್ನು ಸೆಳೆಯುತ್ತವೆ’ ಎಂದು ಯೋಜನೆ ಘೋಷಿಸುವ ವೇಳೆಯೆ ಐಎಚ್​ಸಿಎಲ್ ಎಂಡಿ ಮತ್ತು ಸಿಇಒ ಪುನೀತ್ ಛಾತವಾಲ್ ಹೇಳಿದ್ದರು.

ಸುಹೇಲಿಯಲ್ಲಿರುವ ತಾಜ್ ರೆಸಾರ್ಟ್ ಬೀಚ್ ಬಳಿಯೇ ಇರುತ್ತದೆ. ಇದರಲ್ಲಿ 60 ವಿಲ್ಲಾ ಮತ್ತು 50 ವಾಟರ್ ವಿಲ್ಲಾ ಸೇರಿದಂತೆ 110 ಲಕ್ಷುರಿ ರೂಮುಗಳು ಇರುತ್ತವೆ.

ಇದನ್ನೂ ಓದಿ: Maldives: ಭಾರತದಲ್ಲಿ ಟ್ರೆಂಡ್ ಆಗುತ್ತಿದೆ #UninstallMakeMyTrip; ಯಾಕೆ ಮೇಕ್ ಮೈ ಟ್ರಿಪ್ ಮೇಲೆ ಆಕ್ರೋಶ?

ಇನ್ನು, ದೊಡ್ಡ ಸರೋವರವೊಂದನ್ನು ಒಳಗೊಂಡಿರುವ ಕಡಮತ್ ದ್ವೀಪದಲ್ಲಿ ನಿರ್ಮಿತವಾಗುತ್ತಿರುವ ತಾಜ್ ಹೋಟೆಲ್​ನಲ್ಲಿ 75 ಬೀಚ್ ವಿಲ್ಲಾ ಮತ್ತು 35 ವಾಟರ್ ವಿಲ್ಲಾಗಳು ಇರುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್