AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Layoffs at Twitter: ಟ್ವಿಟರ್​ನಿಂದ 3,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಎಲಾನ್ ಮಸ್ಕ್ ಚಿಂತನೆ

3,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಉದ್ಯಮಿ ಎಲಾನ್ ಮಸ್ಕ್ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಮಾಲೀಕತ್ವ ವಹಿಸಿದ ಬಳಿಕ ಮೊದಲ ಕ್ರಮವಾಗಿ ಮಸ್ಕ್, ಕಂಪನಿಯ ಸಿಇಒ ಪರಾಗ್ ಅಗರ್​ವಾಲ್ ಸೇರಿದಂತೆ ಹಲವರನ್ನು ಉದ್ಯೋಗದಿಂದ ವಜಾಗೊಳಿಸಿದ್ದರು.

Layoffs at Twitter: ಟ್ವಿಟರ್​ನಿಂದ 3,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಎಲಾನ್ ಮಸ್ಕ್ ಚಿಂತನೆ
ಎಲಾನ್ ಮಸ್ಕ್
TV9 Web
| Edited By: |

Updated on: Nov 03, 2022 | 11:49 AM

Share

ನವದೆಹಲಿ: ಉದ್ಯಮಿ ಎಲಾನ್ ಮಸ್ಕ್ (Elon Musk) ಅವರು ಟ್ವಿಟರ್​ನ (Twitter) ಮಾಲೀಕತ್ವ ವಹಿಸಿದ ಬೆನ್ನಲ್ಲೇ ಮೈಕ್ರೋ ಬ್ಲಾಗಿಂಗ್ ಸೈಟ್​ನಿಂದ ಉದ್ಯೋಗಿಗಳ ವಜಾದ ಬಗ್ಗೆ ಬಹಳಷ್ಟು ಚರ್ಚೆ ಆರಂಭವಾಗಿತ್ತು. ಮಾಲೀಕತ್ವ ವಹಿಸಿದ ಬಳಿಕ ಮೊದಲ ಕ್ರಮವಾಗಿ ಮಸ್ಕ್, ಕಂಪನಿಯ ಸಿಇಒ ಪರಾಗ್ ಅಗರ್​ವಾಲ್, ನೀತಿ ನಿರೂಪಣೆ-ವಿಶ್ವಾಸಾರ್ಹತೆ ಮತ್ತು ಸುರಕ್ಷಾ ವಿಭಾಗದ ಮುಖ್ಯಸ್ಥರಾದ ವಿಜಯಾ ಗಡ್ಡೆ, ಮುಖ್ಯ ಹಣಕಾಸು ಅಧಿಕಾರಿ (ಸಿಎಫ್​ಪ) ನೆಡ್ ಸೆಗಲ್ ಅವರನ್ನು ಕೆಲಸದಿಂದ ವಜಾಗೊಳಿಸಿದ್ದರು. ಇದೀಗ ಮತ್ತೆ 3,000ಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಟ್ವಿಟರ್​ನ ಅರ್ಧದಷ್ಟು ಉದ್ಯೋಗ ಕಡಿತಕ್ಕೆ ಮಸ್ಕ್ ಚಿಂತನೆ ನಡೆಸಿದ್ದಾರೆ. 3,700ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆ ಇದೆ ಎಂದು ‘ಬ್ಲೂಮ್​ಬರ್ಗ್’ ತಾಣ ವರದಿ ಮಾಡಿದೆ. ಉದ್ಯೋಗದಿಂದ ವಜಾಗೊಳ್ಳುವ ಸಿಬ್ಬಂದಿಗೆ ಈ ವಾರಾಂತ್ಯದಲ್ಲಿ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಈ ವಿಚಾರವಾಗಿ ಟ್ವಿಟರ್ ಅಥವಾ ಮಸ್ಕ್ ಆಗಲೀ ಯಾವುದೇ ಹೇಳಿಕೆ ನೀಡಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಮಸ್ಕ್ ಮಾಲೀಕರಾಗುತ್ತಿದ್ದಂತೆಯೇ ಉದ್ಯೋಗ ಕಡಿತದ ಬಗ್ಗೆ ಹಲವಾರು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಈ ವರದಿಗಳನ್ನು ಮಸ್ಕ್ ನಿರಾಕರಿಸಿದ್ದರು.

ಇದನ್ನೂ ಓದಿ: ಟ್ವಿಟರ್​ನಲ್ಲಿ ಮಸ್ಕ್ ಕಾರ್ಯಭಾರ; ವಾರದ 7 ದಿನವೂ 12 ಗಂಟೆ ಕೆಲಸ, ಕಚೇರಿಯಲ್ಲೇ ರಾತ್ರಿ ಕಳೆದ ಕೆಲ ಸಿಬ್ಬಂದಿ!

ಎಲ್ಲಿಂದ ಬೇಕಾದರೂ ಕೆಲಸ ಮಾಡಿ (work-from-anywhere) ಎಂಬ ನೀತಿಯನ್ನು ಕೈಬಿಡುವ ಬಗ್ಗೆಯೂ ಮಸ್ಕ್ ಚಿಂತನೆ ನಡೆಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ಟೆಸ್ಲಾದಲ್ಲಿ ಅನುಷ್ಠಾನಕ್ಕೆ ತಂದಿರುವ ನಿಯಮದಂತೆಯೇ ಟ್ವಿಟರ್​ನಲ್ಲೂ ಉದ್ಯೋಗಿಗಳು ಕಚೇರಿಗೆ ಮರಳಬೇಕು ಎಂಬುದು ಮಸ್ಕ್ ಆಶಯ ಎನ್ನಲಾಗಿದೆ. ಕೆಲವು ತಿಂಗಳ ಹಿಂದಷ್ಟೇ ಟೆಸ್ಲಾ ಉದ್ಯೋಗಿಗಳಿಗೆ ಕಚೇರಿಯಿಂದಲೇ ಕೆಲಸ ನಿರ್ವಹಿಸುವಂತೆ ಮಸ್ಕ್ ಸೂಚಿಸಿದ್ದರು.

ಟ್ವಿಟರ್ ಸಿಬ್ಬಂದಿಗೆ ಓವರ್​ ಟೈಂ ಕೆಲಸ

ಉದ್ಯೋಗ ಕಡಿತದ ಭೀತಿಯಲ್ಲಿರುವ ಟ್ವಿಟರ್​ನ ಸಿಬ್ಬಂದಿ ಇದೀಗ ಹೆಚ್ಚುವರಿ ಸಮಯ ಕೆಲಸ ಮಾಡಬೇಕಾದ ಅನಿವಾರ್ಯತೆಯೂ ಎದುರಾಗಿದೆ. ಟ್ವಿಟರ್​​ ಮ್ಯಾನೇಜರ್​ಗಳಿಗೆ ದಿನಕ್ಕೆ 12 ಗಂಟೆ ಹಾಗೂ ವಾರದ ಎಲ್ಲ ದಿನಗಳಲ್ಲಿಯೂ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ಕೆಲವು ಅಂತಾರಾಷ್ಟ್ರೀಯ ಮಾಧ್ಯಮಗಳು ಬುಧವಾರ ವರದಿ ಮಾಡಿದ್ದವು. ಟ್ವಿಟರ್​​ ಮ್ಯಾನೇಜರ್​ಗಳಿಗೆ ದಿನಕ್ಕೆ 12 ಗಂಟೆ ಹಾಗೂ ವಾರದ ಎಲ್ಲ ದಿನಗಳಲ್ಲಿಯೂ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಕೆಲವರು ಶುಕ್ರವಾರ ಮತ್ತು ಶನಿವಾರಗಳಂದು ಕೆಲಸದ ಅವಧಿ ಮುಗಿದ ಬಳಿಕ ಮನೆಗೆ ತೆರಳದೆ ಕಚೇರಿಯಲ್ಲಿಯೇ ಮಲಗಿದ್ದಾರೆ ಎಂದು ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿತ್ತು.

ಬ್ಲೂಟಿಕ್​ಗೆ ತಿಂಗಳಿಗೆ 8 ಡಾಲರ್ ಶುಲ್ಕ

ಟ್ವಿಟರ್​ನಲ್ಲಿ ಅಧಿಕೃತ ಖಾತೆಗಳನ್ನು ಗುರುತಿಸಲು ನೆರವಾಗುವ ಬ್ಲೂಟಿಕ್ ಪಡೆಯಲು ಇನ್ನು ಮುಂದೆ 8 ಡಾಲರ್ ಶುಲ್ಕ ತೆರಬೇಕು ಎಂದು ಮಸ್ಕ್ ಹೇಳಿರುವುದಾಗಿ ಬುಧವಾರ ವರದಿಯಾಗಿತ್ತು. ಜನರು ಶುಲ್ಕ ನೀಡಲು ಆರಂಭಿಸಿದರೆ ಜಾಹೀರಾತುದಾರರ ಮೇಲಿನ ಅವಲಂಬನೆ ಕಡಿಮೆಯಾಗುತ್ತದೆ. ಕಂಪನಿಯ ಕಾರ್ಯನಿರ್ವಹಣೆಗೆ ಇದರಿಂದ ಹೆಚ್ಚಿನ ಸ್ವಾತಂತ್ರ್ಯ ಸಿಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು