AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Layoffs: ಡೈಲಿಹಂಟ್, ಜೋಶ್​ನಿಂದ 150 ಉದ್ಯೋಗಿಗಳ ವಜಾ; ವೇತನ ಕಡಿತ ಘೋಷಣೆ

ಮುಂದಿನ ವರ್ಷ ಬಹಳ ಕಠಿಣವಾಗಿರಲಿದೆ. ಕಂಪನಿಯನ್ನು ಸುಸ್ಥಿರವಾಗಿ ನಡೆಸಿಕೊಂಡು ಹೋಗುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರ್​ಸೆ ಇನೋವೇಷನ್ ತಿಳಿಸಿದೆ.

Layoffs: ಡೈಲಿಹಂಟ್, ಜೋಶ್​ನಿಂದ 150 ಉದ್ಯೋಗಿಗಳ ವಜಾ; ವೇತನ ಕಡಿತ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 29, 2022 | 11:20 AM

Share

ನವದೆಹಲಿ: ಸುದ್ದಿ ಸಂಗ್ರಹಾಕ (Dailyhunt) ಡೈಲಿಹಂಟ್ ಹಾಗೂ ವಿಡಿಯೊ ತಾಣ ಜೋಶ್​ (Josh) ಒಡೆತನ ಹೊಂದಿರುವ ವರ್​ಸೆ ಇನೋವೇಷನ್ (VerSe Innovation) 150 ಮಂದಿಯನ್ನು ಉದ್ಯೋಗದಿಂದ ವಜಾಗೊಳಿಸಿದ್ದು, ವೇತನ ಕಡಿತ ಮಾಡುವುದಾಗಿ ಘೋಷಿಸಿದೆ. ವಾರ್ಷಿಕ 10 ಲಕ್ಷ ರೂ.ಗಿಂತ ಹೆಚ್ಚು ವೇತನ ಪಡೆಯುತ್ತಿರುವವರ ಸಂಬಳದಲ್ಲಿ ಶೇಕಡಾ 11ರಷ್ಟು ಕಡಿತ ಮಾಡುವುದಾಗಿ ತಿಳಿಸಿದೆ ಎಂದು ‘ಮನಿ ಕಂಟ್ರೋಲ್’ ವರದಿ ತಿಳಿಸಿದೆ. 150 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವುದರೊಂದಿಗೆ, ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡಾ 5ರಷ್ಟು ಮಂದಿಯನ್ನು ವಜಾಗೊಳಿಸಿದಂತಾಗಿದೆ.

ಕಂಪನಿಯ ಸ್ಥಾಪಕರಾದ ವೀರೇಂದ್ರ ಗುಪ್ತಾ ಹಾಗೂ ಉಮಂಗ್ ಬೇಡಿ ಟೌನ್​ಹಾಲ್ ಮೀಟಿಂಗ್​ನಲ್ಲಿ ನಿರ್ಧಾರ ಪ್ರಕಟಿಸಿದ್ದಾರೆ. ಮುಂದಿನ ವರ್ಷ ಬಹಳ ಕಠಿಣವಾಗಿರಲಿದೆ. ಕಂಪನಿಯನ್ನು ಸುಸ್ಥಿರವಾಗಿ ನಡೆಸಿಕೊಂಡು ಹೋಗುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಉದ್ಯೋಗಿಗಳಿಗೆ ತಿಳಿಸಿದ್ದಾರೆ. ಈ ವಿಚಾರವನ್ನು ಉಮಂಗ್ ಬೇಡಿ ದೃಢಪಡಿಸಿದ್ದು, ಪ್ರಸಕ್ತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇತರ ಉದ್ಯಮಗಳಂತೆಯೇ ನಾವೂ ಸಹ ಕಾರ್ಯತಂತ್ರಗಳನ್ನು ರೂಪಿಸಬೇಕಿದೆ. ಉದ್ಯಮ ಮತ್ತು ನಮ್ಮ ಜನರ ದೀರ್ಘಾವಧಿಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಕ್ರಮಗಳನ್ನು ಕೈಗೊಂಡಿದ್ದೇವೆ. ವೆಚ್ಚ ನಿಯಂತ್ರಣ ಮತ್ತು ತಂಡಗಳ ಕಾರ್ಯಕ್ಷಮತೆ ಸುಗಮಗೊಳಿಸಲು ಕಾರ್ಯತಂತ್ರ ರೂಪಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Amazon: ಆಹಾರ ವಿತರಣೆ ಉದ್ಯಮವನ್ನೂ ಸ್ಥಗಿತಗೊಳಿಸಲಿದೆ ಅಮೆಜಾನ್

ವರ್​ಸೆ ಇನೋವೇಷನ್​ನ ಡೈಲಿಹಂಟ್, ಪಬ್ಲಿಕ್ ವೈಬ್, ಜೋಶ್​ ಸೇವೆಗಳ ಬದ್ಧತೆಯನ್ನು ಉಳಿಸಿಕೊಳ್ಳಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಉದ್ಯೋಗ ಕಡಿತ ಆರಂಭಿಸಿದ್ದ ಅಮೆಜಾನ್

ಅಮೆಜಾನ್​ ಕೂಡ ಇತ್ತೀಚೆಗೆ ಭಾರತದಲ್ಲಿ ಉದ್ಯೋಗಿಗಳಿಗೆ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಲು ಸೂಚಿಸಿತ್ತು. ಈ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಕಂಪನಿ ಕಾರ್ಮಿಕ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಕಾರ್ಮಿಕ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಕಂಪನಿಗೆ ಸಚಿವಾಲಯ ಸಮನ್ಸ್ ನೀಡಿತ್ತು. ಆದರೆ, ಸಚಿವಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದ ಅಮೆಜಾನ್ ಪ್ರತಿನಿಧಿ, ಕಂಪನಿಯ ನಡೆಯಮನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೆ, ಬಲವಂತವಾಗಿ ಯಾರಿಂದಲೂ ರಾಜೀನಾಮೆ ಪಡೆದಿಲ್ಲ, ಯಾರನ್ನೂ ವಜಾಗೊಳಿಸಿಲ್ಲ ಎಂದು ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?