AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶಾನ್ಯ ರಾಜ್ಯಗಳ ಎಂಟು ಸ್ಥಳಗಳನ್ನು ಅದ್ಭುತ ಪ್ರವಾಶೀ ತಾಣಗಳಾಗಿ ಅಭಿವೃದ್ಧಿ: ಕೇಂದ್ರದ ಯೋಜನೆ

Development of north-east states tourism: ಬಹಳ ಸುಂದರವಾಗಿರುವ ಈಶಾನ್ಯ ಭಾರತದ ಪ್ರದೇಶದಲ್ಲಿ ಪ್ರವಾಸೋದ್ಯಮ ಬೆಳೆಸಲು ಸರ್ಕಾರ ಎಂಟು ಯೋಜನೆಗಳಿಗೆ ಅಂಗೀಕರಿಸಿದೆ. ಅರುಣಾಚಲ, ಸಿಕ್ಕಿಂ ಸೇರಿದಂತೆ ಆರು ಈಶಾನ್ಯ ರಾಜ್ಯಗಳಲ್ಲಿ 800 ಕೋಟಿ ರೂ ವೆಚ್ಚದಲ್ಲಿ ಎಂಟು ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ದೇಶಾದ್ಯಂತ 23 ರಾಜ್ಯಗಳಲ್ಲಿ 80 ಪ್ರವಾಸೀ ಸ್ಥಳಗಳನ್ನು ಅಭಿವೃದ್ಧಪಡಿಸುವ ದೊಡ್ಡ ಯೋಜನೆಯ ಭಾಗವಾಗಿ ಇದನ್ನು ಮಾಡಲಾಗುತ್ತಿದೆ.

ಈಶಾನ್ಯ ರಾಜ್ಯಗಳ ಎಂಟು ಸ್ಥಳಗಳನ್ನು ಅದ್ಭುತ ಪ್ರವಾಶೀ ತಾಣಗಳಾಗಿ ಅಭಿವೃದ್ಧಿ: ಕೇಂದ್ರದ ಯೋಜನೆ
ನಾಟು ಲಾ ಪಾಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 02, 2024 | 3:37 PM

ನವದೆಹಲಿ, ಡಿಸೆಂಬರ್ 2: ಈಗಾಗಲೇ ಹೆಸರುವಾಸಿಯಾಗಿರುವ ಪ್ರವಾಸೀ ತಾಣಗಳು ಮತ್ತೆ ಮತ್ತೆ ಜನರನ್ನು ಆಕರ್ಷಿಸುತ್ತಲೇ ಇರುತ್ತವೆ. ಕಾಣದ ಕಣ್ಮರೆಯಂತಿರುವ ಅದೆಷ್ಟೋ ಸ್ಥಳಗಳು ಪ್ರವಾಸಿಗರಿಗೆ ಮರೆಯಾಗಿಯೇ ಇರುತ್ತವೆ. ಈ ಎಲೆಮರೆ ಕಾಯಿಯಂತಹ ಪ್ರವಾಸೀ ಸ್ಥಳಗಳನ್ನು ಅಭಿವೃದ್ಧಿಪಡಿಸಿದರೆ ಪ್ರವಾಸೋದ್ಯಮ ಬೆಳೆಯುತ್ತದೆ. ಜೊತೆಗೆ ಜನಪ್ರಿಯ ಪ್ರವಾಸೀ ಸ್ಥಳಗಳಲ್ಲಿನ ಮೂಲಸೌಕರ್ಯ ವ್ಯವಸ್ಥೆ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ಈ ದೃಷ್ಟಿಯಿಂದ ಕೇಂದ್ ಸರ್ಕಾರವು ಈಶಾನ್ಯ ರಾಜ್ಯಗಳಲ್ಲಿ ಎಂಟು ಆಯ್ದ ಸ್ಥಳಗಳನ್ನು ರಮ್ಯ ಪ್ರವಾಸೀ ಸ್ಥಳಗಳನ್ನಾಗಿ ಅಭಿವೃದ್ಧಿಪಡಿಸಲು ಯೋಜಿಸಿದೆ.

ಇಂಡಿಯನ್ ಎಕ್ಸ್​ಪ್ರೆಸ್ ವರದಿ ಪ್ರಕಾರ ಕಳೆದ ವಾರ ಕೇಂದ್ರ ವೆಚ್ಚ ಇಲಾಖೆಯು ಆರು ಈಶಾನ್ಯ ರಾಜ್ಯಗಳಲ್ಲಿ 800 ಕೋಟಿ ರೂ ವೆಚ್ಚದ ಎಂಟು ಯೋಜನೆಗಳಿಗೆ ಅನುಮೋದನೆ ನೀಡಿದೆ. ಮೇಘಾಲಯ, ಅಸ್ಸಾಂ, ಅರುಣಾಚಲಪ್ರದೇಶ, ಮಣಿಪುರ, ಸಿಕ್ಕಿಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಈ ಯೋಜನೆಗಳನ್ನು ನಡೆಸಲಾಗುತ್ತದೆ. ಇವೆಲ್ಲವೂ ಕೇಂದ್ರದ ಪ್ರವಾಸೋದ್ಯಮ ಯೋಜನೆಯ ಒಂದು ಭಾಗವಾಗಿದೆ.

ಇದನ್ನೂ ಓದಿ: ಕ್ಯೂಐಪಿ ಮೂಲಕ ಈ ವರ್ಷ ಒಂದು ಲಕ್ಷ ಕೋಟಿ ರೂ ದಾಟಿದ ಕಾರ್ಪೊರೇಟ್ ಫಂಡಿಂಗ್; ಇತಿಹಾಸದಲ್ಲೇ ಇದು ದೊಡ್ಡ ಮೊತ್ತ

23 ರಾಜ್ಯಗಳಲ್ಲಿ 3,295 ಕೋಟಿ ರೂ ವೆಚ್ಚದಲ್ಲ ಸರ್ಕಾರ 40 ಪ್ರವಾಸೋದ್ಯಮ ಯೋಜನೆಗಳನ್ನು ಹಮ್ಮಿಕೊಂಡಿದೆ. ಪ್ರವಾಸಿಗರು ಕೆಲವೇ ರಾಜ್ಯಗಳತ್ತ ಸಾಗುವುದನ್ನು ನಿಯಂತ್ರಿಸಿ ಎಲ್ಲಾ ರಾಜ್ಯಗಳಲ್ಲೂ ಪ್ರವಾಸೋದ್ಯಮ ಬೆಳೆಯುವ ಉದ್ದೇಶದಿಂದ ಈ ಪ್ರಾಜೆಕ್ಟ್ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ಆರು ಈಶಾನ್ಯ ರಾಜ್ಯಗಳಲ್ಲಿನ ಎಂಟು ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಈ ಎಂಟು ಯೋಜನೆಗಳಲ್ಲಿ ಸಿಕ್ಕಿಂನ ನಾಥು ಲಾ, ತ್ರಿಪುರಾದ ಗೋಮತಿಯಲ್ಲಿನ 51 ಶಕ್ತಿಪೀಠಗಳ ಸ್ಥಳ, ಮಣಿಪುರದ ಲೋಕತಕ್ ಸರೋವರ, ಶಿಲ್ಲಾಂಗ್​ನ ಉಮಿಯಾಮ್ ಸರೋವರ, ಗುವಾಹಟಿಯ ಅಸ್ಸಾಂ ಸ್ಟೇಟ್ ಝೂ, ಅರುಣಾಚಲಪ್ರದೇಶದ ಪಾಸಿಘಾಟ್​ನ ಸಿಯಾಂಗ್ ಇಕೋ-ಟ್ರೀಟ್ ಸ್ಥಳಗಳೂ ಸೇರಿವೆ. ಉಮಿಯಾಂ ಸರೋವರ ಅಭಿವಧ್ಧಿಗೆ 99 ಕೋಟಿ ರೂ, ನಾತುಲಾಗೆ 97 ಕೋಟಿ, ಗೋಮತಿಗೆ 97 ಕೋಟಿ ರೂ ಹೀಗೆ ಬೇರೆ ಬೇರೆ ಸ್ಥಳಗಳ ಅಭಿವೃದ್ಧಿಗೆ ಪ್ರತ್ಯೇಕ ಹಣ ಬಿಡುಗಡೆ ಮಾಡಲಾಗುತ್ತಿದೆ.

ಇದನ್ನೂ ಓದಿ: ನವೆಂಬರ್​ನಲ್ಲಿ ಜಿಎಸ್​ಟಿ ಸಂಗ್ರಹ 1.82 ಲಕ್ಷ ಕೋಟಿ ರೂ; ಶೇ. 8.5ರಷ್ಟು ಹೆಚ್ಚಳ

ವೆಚ್ಚ ಇಲಾಖೆಯು ಈಗಾಗಲೇ ಇದಕ್ಕೆ ಬೇಕಾದ ಹಣವನ್ನು ಕ್ರೋಢೀಕರಿಸಿದೆ. ಮೊದಲ ಕಂತಿನಲ್ಲಿ ಶೇ 66ರಷ್ಟು ಹಣವನ್ನು ಆಯಾ ರಾಜ್ಯಗಳಿಗೆ ನೀಡಲಾಗುತ್ತದೆ. ಈ ಯೋಜನೆಗಳನ್ನು ಜಾರಿಗೊಳಿಸುವ ಜವಾಬ್ದಾರಿ ರಾಜ್ಯ ಸರ್ಕಾರಗಳಿಗೆ ಸೇರಿದ್ದು. ಎರಡು ವರ್ಷದ ಟೈಮ್​ಲೈನ್ ನೀಡಲಾಗಿದೆ. 2026ರ ಮಾರ್ಚ್​ನೊಳಗೆ ಎಲ್ಲಾ ಅಗತ್ಯ ಫಂಡ್​ಗಳನ್ನು ರಾಜ್ಯಗಳಿಗೆ ಕೇಂದ್ರವೇ ಒದಗಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ