AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ

ಭಾರತೀಯ ಜೀವ ವಿಮಾ ನಿಗಮದ ಐಪಿಒಗೆ ಮೀಸಲು ಇಡುವ ಉದ್ದೇಶದಿಂದ ಪಾಲಿಸಿ ಜತೆಗೆ ಆಧಾರ್​ ಜೋಡಣೆ ಮಾಡುವಂತೆ ಪಾಲಿಸಿದಾರರಿಗೆ ಸೂಚಿಸಲಾಗಿದೆ.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ
ಆಧಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 03, 2021 | 1:54 PM

Share

ಇನ್ಷೂರೆನ್ಸ್ ಕಂಪೆನಿಯಾದ ಭಾರತೀಯ ಜೀವ ನಿಗಮದಿಂದ ಪಾಲಿಸಿದಾರರಿಗೆ ಸೂಚನೆಯೊಂದನ್ನು ನೀಡಿದ್ದು, ಯಾರ ಬಳಿ ಡಿಮ್ಯಾಟ್​ ಖಾತೆ ಇದೆಯೋ ಅಂಥವರು ತಮ್ಮ ಆದಾಯ ತೆರಿಗೆಯ ಪ್ಯಾನ್​ ಅನ್ನು ಪಾಲಿಸಿಯನ್ನು ಜೋಡಣೆ ಮಾಡುವಂತೆ ತಿಳಿಸಿದೆ. ಹಾಗೆ ಮಾಡುವ ಮೂಲಕವಾಗಿ ಮೀಸಲಿಟ್ಟ ವಿಭಾಗದಲ್ಲಿ ಐಪಿಒಗೆ ಅರ್ಜಿ ಸಲ್ಲಿಸಬಹುದು. ಈ ತನಕ ಯಾರ ಬಳಿ ಡಿಮ್ಯಾಟ್ ಖಾತೆ ಇಲ್ಲವೋ ಒಂದು ಖಾತೆ ತೆರೆದು, ಪಾಲಿಸಿಗಳಿಗೆ ಆಧಾರ್ ಜೋಡಣೆ ಮಾಡಬಹುದು. ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಈ ವರ್ಗದಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಸರ್ಕಾರವು ಎಲ್​ಐಸಿಯಿಂದ ಬಂಡವಾಳ ಹಿಂತೆಗೆ​ತದಿಂದ 1 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸುವುದಕ್ಕೆ ಗುರಿ ಇರಿಸಿಕೊಂಡಿದೆ. ಮುಂದಿನ ಕೆಲವು ತಿಂಗಳಲ್ಲಿ ಎಲ್ಐಸಿ ಐಪಿಒ ಬಂಡವಾಳ ಮಾರುಕಟ್ಟೆಗೆ ಬಿಡುಗಡೆ ಆಗಲಿದೆ.

ಖಚಿತವಾಗಿಯೂ ಭಾರತೀಯ ಜೀವ ನಿಗಮದ ಈ ಐಪಿಒ ಭಾರತದಲ್ಲಿ ಅತಿದೊಡ್ಡ ಐಪಿಒ ಆಗಲಿದೆ. ಅಧಿಕೃತ ಮಾಹಿತಿ ಪ್ರಕಾರ, ಈಚೆಗೆ ಬಿಡುಗಡೆ ಮಾಡಿದ ಐಪಿಒದಲ್ಲಿ ಪೇಟಿಎಂನಿಂದ 18,300 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿತ್ತು. ಆ ಮೊತ್ತವನ್ನು ಮೀರಿಸಿ, ಎಲ್​ಐಸಿ ಐಪಿಒ ಬರಲಿದೆ.

ಐಪಿಒ ಸಂದರ್ಭದಲ್ಲಿ ಪಾಲಿಸಿದಾರರಿಗೆ ಮೀಸಲು ಇಡುವ ಉದ್ದೇಶಕ್ಕಾಗಿ ಈ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರದಿಂದ LIC ಕಾಯ್ದೆ, 1956ಕ್ಕೆ ತಿದ್ದುಪಡಿ ತಂದಿದೆ. ಜಾಹೀರಾತು ಮೂಲಕವಾಗಿ ಪಾಲಿಸಿಯನ್ನು ಆಧಾರ್ ಜತೆಗೆ ಹೇಗೆ ಜೋಡಣೆ ಮಾಡಬೇಕು ಎಂಬುದರ ಬಗ್ಗೆ ಎಲ್​ಐಸಿಯಿಂದ ಪಾಲಿಸಿದಾರರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: LIC IPO: ಎಲ್​ಐಸಿ ಐಪಿಒದಿಂದ ಉದ್ಯೋಗ ನಷ್ಟ, ಸಾಮಾಜಿಕ ವೆಚ್ಚ ಎಂದು ಎಚ್ಚರಿಸಿದ ಕಾರ್ಮಿಕ ಒಕ್ಕೂಟ

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ