AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ

ಭಾರತೀಯ ಜೀವ ವಿಮಾ ನಿಗಮದ ಐಪಿಒಗೆ ಮೀಸಲು ಇಡುವ ಉದ್ದೇಶದಿಂದ ಪಾಲಿಸಿ ಜತೆಗೆ ಆಧಾರ್​ ಜೋಡಣೆ ಮಾಡುವಂತೆ ಪಾಲಿಸಿದಾರರಿಗೆ ಸೂಚಿಸಲಾಗಿದೆ.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ
ಆಧಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 03, 2021 | 1:54 PM

Share

ಇನ್ಷೂರೆನ್ಸ್ ಕಂಪೆನಿಯಾದ ಭಾರತೀಯ ಜೀವ ನಿಗಮದಿಂದ ಪಾಲಿಸಿದಾರರಿಗೆ ಸೂಚನೆಯೊಂದನ್ನು ನೀಡಿದ್ದು, ಯಾರ ಬಳಿ ಡಿಮ್ಯಾಟ್​ ಖಾತೆ ಇದೆಯೋ ಅಂಥವರು ತಮ್ಮ ಆದಾಯ ತೆರಿಗೆಯ ಪ್ಯಾನ್​ ಅನ್ನು ಪಾಲಿಸಿಯನ್ನು ಜೋಡಣೆ ಮಾಡುವಂತೆ ತಿಳಿಸಿದೆ. ಹಾಗೆ ಮಾಡುವ ಮೂಲಕವಾಗಿ ಮೀಸಲಿಟ್ಟ ವಿಭಾಗದಲ್ಲಿ ಐಪಿಒಗೆ ಅರ್ಜಿ ಸಲ್ಲಿಸಬಹುದು. ಈ ತನಕ ಯಾರ ಬಳಿ ಡಿಮ್ಯಾಟ್ ಖಾತೆ ಇಲ್ಲವೋ ಒಂದು ಖಾತೆ ತೆರೆದು, ಪಾಲಿಸಿಗಳಿಗೆ ಆಧಾರ್ ಜೋಡಣೆ ಮಾಡಬಹುದು. ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಈ ವರ್ಗದಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಸರ್ಕಾರವು ಎಲ್​ಐಸಿಯಿಂದ ಬಂಡವಾಳ ಹಿಂತೆಗೆ​ತದಿಂದ 1 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸುವುದಕ್ಕೆ ಗುರಿ ಇರಿಸಿಕೊಂಡಿದೆ. ಮುಂದಿನ ಕೆಲವು ತಿಂಗಳಲ್ಲಿ ಎಲ್ಐಸಿ ಐಪಿಒ ಬಂಡವಾಳ ಮಾರುಕಟ್ಟೆಗೆ ಬಿಡುಗಡೆ ಆಗಲಿದೆ.

ಖಚಿತವಾಗಿಯೂ ಭಾರತೀಯ ಜೀವ ನಿಗಮದ ಈ ಐಪಿಒ ಭಾರತದಲ್ಲಿ ಅತಿದೊಡ್ಡ ಐಪಿಒ ಆಗಲಿದೆ. ಅಧಿಕೃತ ಮಾಹಿತಿ ಪ್ರಕಾರ, ಈಚೆಗೆ ಬಿಡುಗಡೆ ಮಾಡಿದ ಐಪಿಒದಲ್ಲಿ ಪೇಟಿಎಂನಿಂದ 18,300 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿತ್ತು. ಆ ಮೊತ್ತವನ್ನು ಮೀರಿಸಿ, ಎಲ್​ಐಸಿ ಐಪಿಒ ಬರಲಿದೆ.

ಐಪಿಒ ಸಂದರ್ಭದಲ್ಲಿ ಪಾಲಿಸಿದಾರರಿಗೆ ಮೀಸಲು ಇಡುವ ಉದ್ದೇಶಕ್ಕಾಗಿ ಈ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರದಿಂದ LIC ಕಾಯ್ದೆ, 1956ಕ್ಕೆ ತಿದ್ದುಪಡಿ ತಂದಿದೆ. ಜಾಹೀರಾತು ಮೂಲಕವಾಗಿ ಪಾಲಿಸಿಯನ್ನು ಆಧಾರ್ ಜತೆಗೆ ಹೇಗೆ ಜೋಡಣೆ ಮಾಡಬೇಕು ಎಂಬುದರ ಬಗ್ಗೆ ಎಲ್​ಐಸಿಯಿಂದ ಪಾಲಿಸಿದಾರರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: LIC IPO: ಎಲ್​ಐಸಿ ಐಪಿಒದಿಂದ ಉದ್ಯೋಗ ನಷ್ಟ, ಸಾಮಾಜಿಕ ವೆಚ್ಚ ಎಂದು ಎಚ್ಚರಿಸಿದ ಕಾರ್ಮಿಕ ಒಕ್ಕೂಟ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ