Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ

ಭಾರತೀಯ ಜೀವ ವಿಮಾ ನಿಗಮದ ಐಪಿಒಗೆ ಮೀಸಲು ಇಡುವ ಉದ್ದೇಶದಿಂದ ಪಾಲಿಸಿ ಜತೆಗೆ ಆಧಾರ್​ ಜೋಡಣೆ ಮಾಡುವಂತೆ ಪಾಲಿಸಿದಾರರಿಗೆ ಸೂಚಿಸಲಾಗಿದೆ.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ
ಆಧಾರ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Dec 03, 2021 | 1:54 PM

ಇನ್ಷೂರೆನ್ಸ್ ಕಂಪೆನಿಯಾದ ಭಾರತೀಯ ಜೀವ ನಿಗಮದಿಂದ ಪಾಲಿಸಿದಾರರಿಗೆ ಸೂಚನೆಯೊಂದನ್ನು ನೀಡಿದ್ದು, ಯಾರ ಬಳಿ ಡಿಮ್ಯಾಟ್​ ಖಾತೆ ಇದೆಯೋ ಅಂಥವರು ತಮ್ಮ ಆದಾಯ ತೆರಿಗೆಯ ಪ್ಯಾನ್​ ಅನ್ನು ಪಾಲಿಸಿಯನ್ನು ಜೋಡಣೆ ಮಾಡುವಂತೆ ತಿಳಿಸಿದೆ. ಹಾಗೆ ಮಾಡುವ ಮೂಲಕವಾಗಿ ಮೀಸಲಿಟ್ಟ ವಿಭಾಗದಲ್ಲಿ ಐಪಿಒಗೆ ಅರ್ಜಿ ಸಲ್ಲಿಸಬಹುದು. ಈ ತನಕ ಯಾರ ಬಳಿ ಡಿಮ್ಯಾಟ್ ಖಾತೆ ಇಲ್ಲವೋ ಒಂದು ಖಾತೆ ತೆರೆದು, ಪಾಲಿಸಿಗಳಿಗೆ ಆಧಾರ್ ಜೋಡಣೆ ಮಾಡಬಹುದು. ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಈ ವರ್ಗದಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಸರ್ಕಾರವು ಎಲ್​ಐಸಿಯಿಂದ ಬಂಡವಾಳ ಹಿಂತೆಗೆ​ತದಿಂದ 1 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸುವುದಕ್ಕೆ ಗುರಿ ಇರಿಸಿಕೊಂಡಿದೆ. ಮುಂದಿನ ಕೆಲವು ತಿಂಗಳಲ್ಲಿ ಎಲ್ಐಸಿ ಐಪಿಒ ಬಂಡವಾಳ ಮಾರುಕಟ್ಟೆಗೆ ಬಿಡುಗಡೆ ಆಗಲಿದೆ.

ಖಚಿತವಾಗಿಯೂ ಭಾರತೀಯ ಜೀವ ನಿಗಮದ ಈ ಐಪಿಒ ಭಾರತದಲ್ಲಿ ಅತಿದೊಡ್ಡ ಐಪಿಒ ಆಗಲಿದೆ. ಅಧಿಕೃತ ಮಾಹಿತಿ ಪ್ರಕಾರ, ಈಚೆಗೆ ಬಿಡುಗಡೆ ಮಾಡಿದ ಐಪಿಒದಲ್ಲಿ ಪೇಟಿಎಂನಿಂದ 18,300 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿತ್ತು. ಆ ಮೊತ್ತವನ್ನು ಮೀರಿಸಿ, ಎಲ್​ಐಸಿ ಐಪಿಒ ಬರಲಿದೆ.

ಐಪಿಒ ಸಂದರ್ಭದಲ್ಲಿ ಪಾಲಿಸಿದಾರರಿಗೆ ಮೀಸಲು ಇಡುವ ಉದ್ದೇಶಕ್ಕಾಗಿ ಈ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರದಿಂದ LIC ಕಾಯ್ದೆ, 1956ಕ್ಕೆ ತಿದ್ದುಪಡಿ ತಂದಿದೆ. ಜಾಹೀರಾತು ಮೂಲಕವಾಗಿ ಪಾಲಿಸಿಯನ್ನು ಆಧಾರ್ ಜತೆಗೆ ಹೇಗೆ ಜೋಡಣೆ ಮಾಡಬೇಕು ಎಂಬುದರ ಬಗ್ಗೆ ಎಲ್​ಐಸಿಯಿಂದ ಪಾಲಿಸಿದಾರರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: LIC IPO: ಎಲ್​ಐಸಿ ಐಪಿಒದಿಂದ ಉದ್ಯೋಗ ನಷ್ಟ, ಸಾಮಾಜಿಕ ವೆಚ್ಚ ಎಂದು ಎಚ್ಚರಿಸಿದ ಕಾರ್ಮಿಕ ಒಕ್ಕೂಟ

ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಕೇಂದ್ರ ರೂಪಿಸುವ ಕಾನೂನನ್ನು ರಾಜ್ಯಗಳು ಜಾರಿಮಾಡಬೇಕು: ಪ್ರಲ್ಹಾದ್ ಜೋಶಿ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬ್ರೆಜಿಲ್​ನಲ್ಲಿ ಆಕಾಶದಿಂದ ನೇರವಾಗಿ ರಸ್ತೆಗೆ ಇಳಿದ ವಿಮಾನ
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್, ವಿಡಿಯೋ ವೈರಲ್
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ
ಉತ್ತರಾಖಂಡ: ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ