AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ

ಭಾರತೀಯ ಜೀವ ವಿಮಾ ನಿಗಮದ ಐಪಿಒಗೆ ಮೀಸಲು ಇಡುವ ಉದ್ದೇಶದಿಂದ ಪಾಲಿಸಿ ಜತೆಗೆ ಆಧಾರ್​ ಜೋಡಣೆ ಮಾಡುವಂತೆ ಪಾಲಿಸಿದಾರರಿಗೆ ಸೂಚಿಸಲಾಗಿದೆ.

LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ
ಆಧಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 03, 2021 | 1:54 PM

Share

ಇನ್ಷೂರೆನ್ಸ್ ಕಂಪೆನಿಯಾದ ಭಾರತೀಯ ಜೀವ ನಿಗಮದಿಂದ ಪಾಲಿಸಿದಾರರಿಗೆ ಸೂಚನೆಯೊಂದನ್ನು ನೀಡಿದ್ದು, ಯಾರ ಬಳಿ ಡಿಮ್ಯಾಟ್​ ಖಾತೆ ಇದೆಯೋ ಅಂಥವರು ತಮ್ಮ ಆದಾಯ ತೆರಿಗೆಯ ಪ್ಯಾನ್​ ಅನ್ನು ಪಾಲಿಸಿಯನ್ನು ಜೋಡಣೆ ಮಾಡುವಂತೆ ತಿಳಿಸಿದೆ. ಹಾಗೆ ಮಾಡುವ ಮೂಲಕವಾಗಿ ಮೀಸಲಿಟ್ಟ ವಿಭಾಗದಲ್ಲಿ ಐಪಿಒಗೆ ಅರ್ಜಿ ಸಲ್ಲಿಸಬಹುದು. ಈ ತನಕ ಯಾರ ಬಳಿ ಡಿಮ್ಯಾಟ್ ಖಾತೆ ಇಲ್ಲವೋ ಒಂದು ಖಾತೆ ತೆರೆದು, ಪಾಲಿಸಿಗಳಿಗೆ ಆಧಾರ್ ಜೋಡಣೆ ಮಾಡಬಹುದು. ವ್ಯವಸ್ಥೆ ಮಾಡಿಕೊಳ್ಳುವ ಮೂಲಕ ಈ ವರ್ಗದಡಿಯಲ್ಲಿ ಅರ್ಜಿ ಸಲ್ಲಿಸಬಹುದು. ಸರ್ಕಾರವು ಎಲ್​ಐಸಿಯಿಂದ ಬಂಡವಾಳ ಹಿಂತೆಗೆ​ತದಿಂದ 1 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸುವುದಕ್ಕೆ ಗುರಿ ಇರಿಸಿಕೊಂಡಿದೆ. ಮುಂದಿನ ಕೆಲವು ತಿಂಗಳಲ್ಲಿ ಎಲ್ಐಸಿ ಐಪಿಒ ಬಂಡವಾಳ ಮಾರುಕಟ್ಟೆಗೆ ಬಿಡುಗಡೆ ಆಗಲಿದೆ.

ಖಚಿತವಾಗಿಯೂ ಭಾರತೀಯ ಜೀವ ನಿಗಮದ ಈ ಐಪಿಒ ಭಾರತದಲ್ಲಿ ಅತಿದೊಡ್ಡ ಐಪಿಒ ಆಗಲಿದೆ. ಅಧಿಕೃತ ಮಾಹಿತಿ ಪ್ರಕಾರ, ಈಚೆಗೆ ಬಿಡುಗಡೆ ಮಾಡಿದ ಐಪಿಒದಲ್ಲಿ ಪೇಟಿಎಂನಿಂದ 18,300 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿತ್ತು. ಆ ಮೊತ್ತವನ್ನು ಮೀರಿಸಿ, ಎಲ್​ಐಸಿ ಐಪಿಒ ಬರಲಿದೆ.

ಐಪಿಒ ಸಂದರ್ಭದಲ್ಲಿ ಪಾಲಿಸಿದಾರರಿಗೆ ಮೀಸಲು ಇಡುವ ಉದ್ದೇಶಕ್ಕಾಗಿ ಈ ವರ್ಷದ ಆರಂಭದಲ್ಲಿ ಕೇಂದ್ರ ಸರ್ಕಾರದಿಂದ LIC ಕಾಯ್ದೆ, 1956ಕ್ಕೆ ತಿದ್ದುಪಡಿ ತಂದಿದೆ. ಜಾಹೀರಾತು ಮೂಲಕವಾಗಿ ಪಾಲಿಸಿಯನ್ನು ಆಧಾರ್ ಜತೆಗೆ ಹೇಗೆ ಜೋಡಣೆ ಮಾಡಬೇಕು ಎಂಬುದರ ಬಗ್ಗೆ ಎಲ್​ಐಸಿಯಿಂದ ಪಾಲಿಸಿದಾರರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: LIC IPO: ಎಲ್​ಐಸಿ ಐಪಿಒದಿಂದ ಉದ್ಯೋಗ ನಷ್ಟ, ಸಾಮಾಜಿಕ ವೆಚ್ಚ ಎಂದು ಎಚ್ಚರಿಸಿದ ಕಾರ್ಮಿಕ ಒಕ್ಕೂಟ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು