AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಎಲ್​ಐಸಿ ಚೇರ್ಮನ್ ಎಂಆರ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 10, 2023 | 4:32 PM

Share

ನವದೆಹಲಿ: ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ (Hindenburg) ಆರೋಪ ಮಾಡಿರುವುದು ಮತ್ತು ನಂತರದ ಬೆಳವಣಿಗೆಗಳಿಗೆ ಸಂಬಂಧಿಸಿ ಅದಾನಿ ಸಮೂಹ(Adani Group) ಮ್ಯಾನೇಜ್​ಮೆಂಟ್​​ ಜತೆ ಮಾತುಕತೆ ನಡೆಸಲಿದ್ದೇವೆ. ಆ ಮೂಲಕ ಬಿಕ್ಕಟ್ಟಿನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಿದ್ದೇವೆ ಎಂದು ಎಲ್​ಐಸಿ (LIC) ಚೇರ್ಮನ್ ಎಂಆರ್ ಕುಮಾರ್ (MR Kumar) ಶುಕ್ರವಾರ ತಿಳಿಸಿದ್ದಾರೆ. ಮುಂದಿನ ಏಳರಿಂದ ಹತ್ತು ದಿನಗಳ ಒಳಗೆ ಅದಾನಿ ಸಮೂಹವನ್ನು ಎಲ್​ಐಸಿ ಸಂಪರ್ಕಿಸಲಿದೆ ಎಂದು ಅವರು ‘ಬ್ಯುಸಿನೆಸ್​ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಹಿಂಡನ್​​ಬರ್ಗ್ ಆರೋಪದ ಬೆನ್ನಲ್ಲೇ ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿರುವ ಎಲ್​ಐಸಿಗೂ ನಷ್ಟವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇದಾದ ಬಳಿಕ ಸ್ಪಷ್ಟನೆ ನೀಡಿದ್ದ ಎಲ್​ಐಸಿ, ಅದಾನಿ ಸಮೂಹದಲ್ಲಿ ಹೆಚ್ಚು ಹೂಡಿಕೆ ಮಾಡಿಲ್ಲ. 36,000 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಹೂಡಿಕೆದಾರರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಅದಾನಿ ಸಮೂಹ ಕಂಪನಿಗಳಲ್ಲಿ ಎಲ್​ಐಸಿಯ ಒಟ್ಟಾರೆ ಹೂಡಿಕೆ 36,000 ಕೋಟಿ ರೂ. ಆಗಿದೆ. ಜನವರಿ 27ರ ವೇಳೆಗೆ ಅದರ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ. ಆಗಿದೆ ಎಂದು ಎಲ್​ಐಸಿ ತಿಳಿಸಿತ್ತು. ಆದರೆ, ಜನವರಿ 27ರ ನಂತರದ ಮಾಹಿತಿ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರ್ ಹೇಳಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಎಲ್ಲ ಹೂಡಿಕೆದಾರರಿಗೂ ಹೇಳಬಯಸುತ್ತೇನೆ. ಶೇ 1ರಷ್ಟು ಅಪಾಯವೂ ಇಲ್ಲ. ಅದಾನಿ ಸಮೂಹದ ಪ್ರಕರಣದಿಂದ ಹೂಡಿಕೆ ಮೇಲೆ ಯಾವುದೇ ರೀತಿಯ ಪರಿಣಾಮವಾಗದು. ನಾವು ಆ ಬಗ್ಗೆ ಕಾಳಜಿವಹಿಸಲಿದ್ದೇವೆ. ಅದಾನಿ ಸಮೂಹದಲ್ಲಿ ಎಲ್​ಐಸಿ ಮಾಡಿರುವ ಹೂಡಿಕೆ ಸಮುದ್ರದ ನೀರಿನ ಒಂದು ಬಿಂದಿನಷ್ಟು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ