AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಎಲ್​ಐಸಿ ಚೇರ್ಮನ್ ಎಂಆರ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 10, 2023 | 4:32 PM

Share

ನವದೆಹಲಿ: ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ (Hindenburg) ಆರೋಪ ಮಾಡಿರುವುದು ಮತ್ತು ನಂತರದ ಬೆಳವಣಿಗೆಗಳಿಗೆ ಸಂಬಂಧಿಸಿ ಅದಾನಿ ಸಮೂಹ(Adani Group) ಮ್ಯಾನೇಜ್​ಮೆಂಟ್​​ ಜತೆ ಮಾತುಕತೆ ನಡೆಸಲಿದ್ದೇವೆ. ಆ ಮೂಲಕ ಬಿಕ್ಕಟ್ಟಿನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಿದ್ದೇವೆ ಎಂದು ಎಲ್​ಐಸಿ (LIC) ಚೇರ್ಮನ್ ಎಂಆರ್ ಕುಮಾರ್ (MR Kumar) ಶುಕ್ರವಾರ ತಿಳಿಸಿದ್ದಾರೆ. ಮುಂದಿನ ಏಳರಿಂದ ಹತ್ತು ದಿನಗಳ ಒಳಗೆ ಅದಾನಿ ಸಮೂಹವನ್ನು ಎಲ್​ಐಸಿ ಸಂಪರ್ಕಿಸಲಿದೆ ಎಂದು ಅವರು ‘ಬ್ಯುಸಿನೆಸ್​ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಹಿಂಡನ್​​ಬರ್ಗ್ ಆರೋಪದ ಬೆನ್ನಲ್ಲೇ ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿರುವ ಎಲ್​ಐಸಿಗೂ ನಷ್ಟವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇದಾದ ಬಳಿಕ ಸ್ಪಷ್ಟನೆ ನೀಡಿದ್ದ ಎಲ್​ಐಸಿ, ಅದಾನಿ ಸಮೂಹದಲ್ಲಿ ಹೆಚ್ಚು ಹೂಡಿಕೆ ಮಾಡಿಲ್ಲ. 36,000 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಹೂಡಿಕೆದಾರರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಅದಾನಿ ಸಮೂಹ ಕಂಪನಿಗಳಲ್ಲಿ ಎಲ್​ಐಸಿಯ ಒಟ್ಟಾರೆ ಹೂಡಿಕೆ 36,000 ಕೋಟಿ ರೂ. ಆಗಿದೆ. ಜನವರಿ 27ರ ವೇಳೆಗೆ ಅದರ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ. ಆಗಿದೆ ಎಂದು ಎಲ್​ಐಸಿ ತಿಳಿಸಿತ್ತು. ಆದರೆ, ಜನವರಿ 27ರ ನಂತರದ ಮಾಹಿತಿ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರ್ ಹೇಳಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಎಲ್ಲ ಹೂಡಿಕೆದಾರರಿಗೂ ಹೇಳಬಯಸುತ್ತೇನೆ. ಶೇ 1ರಷ್ಟು ಅಪಾಯವೂ ಇಲ್ಲ. ಅದಾನಿ ಸಮೂಹದ ಪ್ರಕರಣದಿಂದ ಹೂಡಿಕೆ ಮೇಲೆ ಯಾವುದೇ ರೀತಿಯ ಪರಿಣಾಮವಾಗದು. ನಾವು ಆ ಬಗ್ಗೆ ಕಾಳಜಿವಹಿಸಲಿದ್ದೇವೆ. ಅದಾನಿ ಸಮೂಹದಲ್ಲಿ ಎಲ್​ಐಸಿ ಮಾಡಿರುವ ಹೂಡಿಕೆ ಸಮುದ್ರದ ನೀರಿನ ಒಂದು ಬಿಂದಿನಷ್ಟು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ