AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಎಲ್​ಐಸಿ ಚೇರ್ಮನ್ ಎಂಆರ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

Adani Row: ಹಿಂಡನ್​ಬರ್ಗ್ ಆರೋಪದ ಬಗ್ಗೆ ಅದಾನಿ ಸಮೂಹದ ಜತೆ ಮಾತುಕತೆ ನಡೆಸುತ್ತೇವೆ; ಎಲ್​ಐಸಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Feb 10, 2023 | 4:32 PM

Share

ನವದೆಹಲಿ: ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್ (Hindenburg) ಆರೋಪ ಮಾಡಿರುವುದು ಮತ್ತು ನಂತರದ ಬೆಳವಣಿಗೆಗಳಿಗೆ ಸಂಬಂಧಿಸಿ ಅದಾನಿ ಸಮೂಹ(Adani Group) ಮ್ಯಾನೇಜ್​ಮೆಂಟ್​​ ಜತೆ ಮಾತುಕತೆ ನಡೆಸಲಿದ್ದೇವೆ. ಆ ಮೂಲಕ ಬಿಕ್ಕಟ್ಟಿನ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಿದ್ದೇವೆ ಎಂದು ಎಲ್​ಐಸಿ (LIC) ಚೇರ್ಮನ್ ಎಂಆರ್ ಕುಮಾರ್ (MR Kumar) ಶುಕ್ರವಾರ ತಿಳಿಸಿದ್ದಾರೆ. ಮುಂದಿನ ಏಳರಿಂದ ಹತ್ತು ದಿನಗಳ ಒಳಗೆ ಅದಾನಿ ಸಮೂಹವನ್ನು ಎಲ್​ಐಸಿ ಸಂಪರ್ಕಿಸಲಿದೆ ಎಂದು ಅವರು ‘ಬ್ಯುಸಿನೆಸ್​ ಟುಡೇ’ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಹಿಂಡನ್​​ಬರ್ಗ್ ಆರೋಪದ ಬೆನ್ನಲ್ಲೇ ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹದಲ್ಲಿ ಹೂಡಿಕೆ ಮಾಡಿರುವ ಎಲ್​ಐಸಿಗೂ ನಷ್ಟವಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇದಾದ ಬಳಿಕ ಸ್ಪಷ್ಟನೆ ನೀಡಿದ್ದ ಎಲ್​ಐಸಿ, ಅದಾನಿ ಸಮೂಹದಲ್ಲಿ ಹೆಚ್ಚು ಹೂಡಿಕೆ ಮಾಡಿಲ್ಲ. 36,000 ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಹೂಡಿಕೆದಾರರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿತ್ತು. ಅದಾನಿ ಸಮೂಹ ಕಂಪನಿಗಳಲ್ಲಿ ಎಲ್​ಐಸಿಯ ಒಟ್ಟಾರೆ ಹೂಡಿಕೆ 36,000 ಕೋಟಿ ರೂ. ಆಗಿದೆ. ಜನವರಿ 27ರ ವೇಳೆಗೆ ಅದರ ಮಾರುಕಟ್ಟೆ ಮೌಲ್ಯ 56,142 ಕೋಟಿ ರೂ. ಆಗಿದೆ ಎಂದು ಎಲ್​ಐಸಿ ತಿಳಿಸಿತ್ತು. ಆದರೆ, ಜನವರಿ 27ರ ನಂತರದ ಮಾಹಿತಿ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: LIC Policy: ಎಲ್​ಐಸಿ ಪಾಲಿಸಿ ಜತೆ ಪ್ಯಾನ್ ಕಾರ್ಡ್ ಲಿಂಕ್​ ಮಾಡಲು ಮಾರ್ಚ್ 31 ಕೊನೆಯ ದಿನ

ಹೂಡಿಕೆದಾರರ ಹಣ ಸುರಕ್ಷಿತವಾಗಿದೆ. ಈ ಕುರಿತು ಆತಂಕಪಡುವ ಅಗತ್ಯವಿಲ್ಲ ಎಂದು ಕುಮಾರ್ ಹೇಳಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಎಲ್ಲ ಹೂಡಿಕೆದಾರರಿಗೂ ಹೇಳಬಯಸುತ್ತೇನೆ. ಶೇ 1ರಷ್ಟು ಅಪಾಯವೂ ಇಲ್ಲ. ಅದಾನಿ ಸಮೂಹದ ಪ್ರಕರಣದಿಂದ ಹೂಡಿಕೆ ಮೇಲೆ ಯಾವುದೇ ರೀತಿಯ ಪರಿಣಾಮವಾಗದು. ನಾವು ಆ ಬಗ್ಗೆ ಕಾಳಜಿವಹಿಸಲಿದ್ದೇವೆ. ಅದಾನಿ ಸಮೂಹದಲ್ಲಿ ಎಲ್​ಐಸಿ ಮಾಡಿರುವ ಹೂಡಿಕೆ ಸಮುದ್ರದ ನೀರಿನ ಒಂದು ಬಿಂದಿನಷ್ಟು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ